Homeಕರ್ನಾಟಕಹಾಸನ ಚಲೋ| ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

ಹಾಸನ ಚಲೋ| ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

- Advertisement -
- Advertisement -

‘ದೇವೇಗೌಡರೆ ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ, ಈ ನಾಡಿದ ಹೆಮ್ಮೆಯ ಪ್ರಧಾನಿ ಅನ್ನೋ ಹೆಸರನ್ನು ಪಡೆದಿದ್ದಿರಲ್ಲ ಅದನ್ನ ಉಳಿಸಿಕೊಳ್ಳಿ’ ಎಂದು ಹಿರಿಯ ಹೋರಾಟಗಾರ ಸಿದ್ದನಗೌಡ ಪಾಟೀಲ್ ಸವಾಲು ಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ನಾವಿಲ್ಲಿ ಸೇರಿರುವುದು ಹೆಮ್ಮೆಯ ಸಂಗತಿಯಲ್ಲವಾದರೂ ಇಂತಹ ಪರಿಸ್ಥಿತಿಯನ್ನು ಈ ಜಿಲ್ಲೆಯ ರಾಜಕೀಯ ಪರಿಸ್ಥಿತಿ ತಂದುಕೊಟ್ಟಿದೆ. ಜಾತಿಯ ಬಲದಿದಂದ, ಹಣದ ಬಲದಿಂದ ತಾನು ಇರುವ ಪ್ರದೇಶದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸುವ ಪರಿಸ್ಥಿತಿ ಇಂದುನೆನ್ನೆಯದಲ್ಲ. ಹಾಸನದಲ್ಲಿ ನಡೆದಿರುವ ಈ ದೌರ್ಜನ್ಯವನ್ನು ಸರ್ಕಾರದ ಹೆಗಲಿಗೆ ಬಿಡದೆ, ಈ ರಾಜ್ಯದ ಜನಪರ ಚಳುವಳಿಗಳು ಜವಾಬ್ದಾರಿವಹಿಸಿ ಮಾಡುತ್ತಿರುವ ಹೋರಾಟ, ಈ ರಾಜ್ಯದಲ್ಲಿ ಯಾವುದೇ ಪ್ರಭಾವಿ ವ್ಯಕ್ತಿ ದೌರ್ಜನ್ಯ ಎಸಗಿದರೆ ನಾವು ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡುತ್ತಿದ್ದೇವೆ” ಎಂದರು.

“ಕ್ರಿಮಿಲ್‌ಗಳು, ಅತ್ಯಾಚಾರಿಗಳು, ಭ್ರಷ್ಟಾಚಾರಿಗಳು ಈ ದೇಶದಲ್ಲಿ ರಾಜಕಾರಣಿಗಳು ಆಗ್ತಾ ಇರುವ ಸಂದರ್ಭದಲ್ಲಿ, ಜನಪರ ಸಂಘಟನೆಗಳು ವಾಚ್‌ಡಾಗ್ ರೀತಿ ಕೆಲಸ ಮಾಡಬೇಕಿದೆ” ಎಂದರು.

“ಹಾಸನದಲ್ಲಿ ಹಲವು ದಶಕಗಳ ಹಿಂದೆ ನಡೆದ ನುಗ್ಗೆಹಳ್ಳಿ ನೀರಿನ ಹೋರಾಟದ ಸಂದರ್ಭದಲ್ಲಿ ಅಲ್ಲಿನ ಹಳ್ಳಿಯ ಮಹಿಳೆಯರ ಮೇಲೂ ಪೊಲೀಸರು ದೌರ್ಜನ್ಯ ಎಸಗಿಸುವಂತಹ, ಜೈಲಿಗಟ್ಟುವ ಕೆಲಸ ಮಾಡಿದ್ದ ದೇವೇಗೌಡರಿಗೆ ಇಲ್ಲಿನ ಜನ ಅಂದೇ ಸರಿಯಾದ ಪಾಠ ಕಲಿಸಿದ್ದಿದ್ದರೆ, ಇಂದು ಈ ಸ್ಥಿತಿ ಬರುತ್ತಿರಲಿಲ್ಲ” ಎಂದು ಹೇಳಿದರು.

“ದೇವೇಗೌಡರು ಮೊಮ್ಮಗನಿಗೆ ಒಂದು ಎಚ್ಚರಿಕೆ ಪತ್ರ ಬರೆದಿದ್ದರು.., ಎಲ್ಲಿದ್ದರೂ ಬಂದು ಶರಣಾಗು ಅಂತ. ಆದ್ರೆ, ನಾನು ನಿಮಗೆ ನೇರವಾಗಿ ಒಂದು ಮಾತನ್ನು ಹೇಳ್ತೇನೆ, ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ, ಈ ನಾಡಿದ ಹೆಮ್ಮೆಯ ಪ್ರಧಾನಿ ಅನ್ನೋ ಹೆಸರನ್ನು ಪಡೆದಿದ್ದಿರಲ್ಲ ಅದನ್ನ ಉಳಿಸಿಕೊಳ್ಳಿ. 4ರಂದು ಫಲಿತಾಂಶ ಬಂದ ನಂತರ ದೇವೇಗೌಡರ ಕುಟುಂಬದ ದನಿಗಳು ಎನಾಗುತ್ತವೋ ಗೊತ್ತಿಲ್ಲ. ಆದರೆ, ನಾವಂತೂ ನಿಮ್ಮ ಕೃತ್ಯವನ್ನು ಖಂಡಿಸದೆ, ತಕ್ಕ ಪಾಠವನ್ನು ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಕೊಟ್ಟು ಹೋಗುತ್ತಿದ್ದೇವೆ. ಪ್ರಜ್ವಲನಂತಹ ಅತ್ಯಾಚಾರಿಗಳನ್ನು ಶಿಕ್ಷೆಗೆ ಗುರಿಪಡಿಸಲು ಒಗ್ಗಟ್ಟಿನ ಹೋರಾಟ ಮಾಡುತ್ತೇವೆ” ಎಂದರು.

ಇದನ್ನೂ ಓದಿ; ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...