Homeಮುಖಪುಟನೆಲ್ಸನ್ ಮಂಡೇಲಾ, ಐನ್‌ಸ್ಟೈನ್ ಮಹತ್ಮಾ ಗಾಂಧಿಯಿಂದ ಸ್ಪೂರ್ತಿ ಪಡೆದಿದ್ದರು: ರಾಹುಲ್‌ ಗಾಂಧಿ

ನೆಲ್ಸನ್ ಮಂಡೇಲಾ, ಐನ್‌ಸ್ಟೈನ್ ಮಹತ್ಮಾ ಗಾಂಧಿಯಿಂದ ಸ್ಪೂರ್ತಿ ಪಡೆದಿದ್ದರು: ರಾಹುಲ್‌ ಗಾಂಧಿ

- Advertisement -
- Advertisement -

ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ನೆಲ್ಸನ್ ಮಂಡೇಲಾ ಮತ್ತು ಆಲ್ಬರ್ಟ್ ಐನ್‌ಸ್ಟೈನ್ ಅವರಂತಹ ಹೆಸರಾಂತ ವ್ಯಕ್ತಿಗಳು ಮಹಾತ್ಮ ಗಾಂಧಿಯವರಿಂದ ಸ್ಫೂರ್ತಿ ಪಡೆದವರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

‘ಗಾಂಧಿ’ ಚಿತ್ರದ ಮೂಲಕ ಜಗತ್ತು ಮಹಾತ್ಮಾ ಗಾಂಧಿಯವರ ಬಗ್ಗೆ ಕಲಿತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿಯ ಆರೆಸ್ಸೆಸ್‌ ನಂಟಿನ ಬಗ್ಗೆ ಟೀಕಿಸಿದ್ದಾರೆ, ಗಾಂಧಿಯವರ ಪರಂಪರೆಯ ಬಗ್ಗೆ ಅವರಿಗೆ ತಿಳುವಳಿಕೆಯ ಕೊರತೆ ಇದೆ ಎಂದು ಹೇಳಿದ್ದಾರೆ.

ಯಾರಿಗೆ ಆರ್‌ಎಸ್‌ಎಸ್‌ನ ಶಾಖೆಯಲ್ಲಿ ತರಬೇತಿ ನೀಡಲಾಗಿದೆ, ಅವರು ಗೋಡ್ಸೆಯ ಅನುಯಾಯಿಗಳು, ಅವರಿಗೆ ಗಾಂಧೀಜಿ ಬಗ್ಗೆ ಏನೂ ತಿಳಿದಿಲ್ಲ, ಅವರಿಗೆ ಹಿಂದೂಸ್ತಾನದ ಇತಿಹಾಸ, ಸತ್ಯ ಮತ್ತು ಹಿಂಸೆಯ ಬಗ್ಗೆ ತಿಳಿದಿಲ್ಲ.  ಗಾಂಧೀಜಿಯ ಬಗ್ಗೆ ಜಗತ್ತಿಗೆ ಏನೂ ತಿಳಿದಿಲ್ಲ ಎಂದು ಪ್ರಧಾನಿ ಹೇಳುವುದು ನಿರೀಕ್ಷಿತವೇ ಎಂದು ಹೇಳಿದ್ದಾರೆ.

ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ನೆಲ್ಸನ್ ಮಂಡೇಲಾ ಮತ್ತು ಐನ್‌ಸ್ಟೈನ್ ಅವರಂತಹ ಜಾಗತಿಕ ದಿಗ್ಗಜರು ವಿವಿಧ ಸ್ವಾತಂತ್ರ್ಯ ಚಳುವಳಿಗಳ ಜೊತೆಗೆ ಗಾಂಧಿಯವರ ತತ್ವಗಳಲ್ಲಿ ಸ್ಫೂರ್ತಿಯನ್ನು ಪಡೆದವರು, ವಿವಿಧ ಚಳುವಳಿಗಳು, ಸ್ವಾತಂತ್ರ್ಯ ಚಳುವಳಿಗಳು ಸಹ ಗಾಂಧೀಜಿಯಿಂದ ಸ್ಫೂರ್ತಿ ಪಡೆದವು. ಭಾರತದ ಮಕ್ಕಳು ಕೂಡ ಗಾಂಧೀಜಿಯಿಂದ ಸ್ಫೂರ್ತಿ ಪಡೆಯುತ್ತಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಪ್ರಧಾನಿಯ ಜಗತ್ತು ಅವರ ಶಾಖೆಯಾಗಿದೆ, ಈ ವಿಷಯದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ. ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು. ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....