Homeಮುಖಪುಟಅಧಿಕಾರದ ಮದ ನಡೆಯುವುದಿಲ್ಲ ಎಂಬ ಸಂದೇಶ ರವಾನಿಸುವುದಕ್ಕಾಗಿ ಈ ಹೋರಾಟ: ಬಡಗಲಪುರ ನಾಗೇಂದ್ರ

ಅಧಿಕಾರದ ಮದ ನಡೆಯುವುದಿಲ್ಲ ಎಂಬ ಸಂದೇಶ ರವಾನಿಸುವುದಕ್ಕಾಗಿ ಈ ಹೋರಾಟ: ಬಡಗಲಪುರ ನಾಗೇಂದ್ರ

- Advertisement -
- Advertisement -

‘ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ’ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜ್ವಲ್‌ ಲೈಂಗಿಕ ಹಗರಣ ಖಂಡಿಸಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಒಂದು ವೇಳೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮಗೆ ಅಧಿಕಾರ ಹೊಂದಲು ಅವಕಾಶವಿಲ್ಲವೆಂದು ತಿಳಿಸಲು ನಾವು ಹಾಸನದ ಮಹಿಳೆಯರೊಂದಿಗೆ ಮತ್ತೊಮ್ಮೆ ಹೋರಾಟ ಮಾಡೋಣ” ಎಂದು ಕರೆ ನೀಡಿದರು.

ಹಿರಿಯ ಡಿಎಸ್‌ಎಸ್‌ ಮುಖಂಡರಾದ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಮಾಜಿ ಪ್ರಧಾನಿಗಳೇ ನಿಮ್ಮ ಮೊಮ್ಮಗನ ಬಗ್ಗೆ ಮಾತನಾಡುವಾಗ ಕನಿಷ್ಟ ಕ್ಷಮೆ ಕೇಳುವ ವಿವೇಚನೆ ಇರಲಿಲ್ಲ ನಿಮಗೆ. ನಿಮ್ಮ ಹೇಳಿಕೆಗಳು ಖಂಡನೀಯ. ಕಾನೂನಿನ ವ್ಯವಸ್ಥೆಯಲ್ಲಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕುಮಾರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ. ಅಧಿಕಾರದ ದುರುಪಯೋಗ ಮಾಡಿಕೊಂಡು ಅತ್ಯಾಚಾರಗೈದ ನಿಮ್ಮ ಮೊಮ್ಮಗನನ್ನು ಕ್ಷಮಿಸಬಾರದು. ನೀವು ಇಡೀ ರಾಜ್ಯದ ಜನರ ಕ್ಷಮೆ ಕೇಳಬೇಕು. ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಬೇಕು. ಅವರ ಕುಟುಂಬಸ್ಥರ ರಾಜಕೀಯ ಅಂತ್ಯವಾಗಬೇಕು. ನಿಮ್ಮ ಅಧಿಕಾರ ದುರುಪಯೋಗದ ಕೆಲಸಗಳು ಸಾಕು” ಎಂದರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಮಾನಗೆಟ್ಟ ರಾಜಕಾರಣದ ವಿರುದ್ಧ ಈ ಹೋರಾಟ ಸತ್ಯದ ಕನ್ನಡಿ ಹಿಡಿಯುತ್ತಿದೆ. ಪ್ರಜ್ವಲ್ ರೇವಣ್ಣನಿಗೆ ಮರ್ಯಾದೆ ಇದ್ದಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಡಬೇಕಿತ್ತು. ನಾಡಿನ ಜನರ ಕ್ಷಮೆ ಕೇಳಬೇಕಿತ್ತು. ಜನರ ಸಮ್ಮುಖದಲ್ಲಿ ನ್ಯಾಯ ಕೊಡಿಸಬೇಕಿತ್ತು. ನಿಮ್ಮ ಸಮರ್ಥನೆ ಖಂಡನೀಯ. ಇದು ನಿಮಗೆ ಯಾವುದೇ ಗೌರವ ತರುವುದಿಲ್ಲ. ಆತನನ್ನು ಕುಟುಂಬದಿಂದ ಹೊರಗೆ ಹಾಕದೆ ಇರುವುದಕ್ಕೆ ನಮಗೆ ಬೇಸರ ಇದೆ” ಎಂದರು.

“ಪ್ರಜ್ವಲ್ ವಿರುದ್ಧ ಹಾಕಿರುವ ಎಫ್‌ಐಆರ್‌ಗಳು ಸ್ಟೇಷನ್ ಬೇಲ್‌ನಿಂದಲೆ ಹೊರಬರುವಷ್ಟು ಸರಳವಾಗಿವೆ. ಎಸ್‌ಐಟಿ ಒಂದು ತಿಂಗಳ ಬಳಿಕ ಪ್ರಜ್ವಲ್ ಅವರ ಹಾಸಿಗೆ, ದಿಂಬು ವಶಪಡಿಸಿಕೊಂಡಿದೆ. ದಯವಿಟ್ಟು ಅದರಲ್ಲಿ ಒಂದು ಕೂದಲು ಇರದಂತೆ ನೋಡಿಕೊಳ್ಳಿ” ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದರು.

ವಿಡಿಯೋ ಹಂಚಿಕೆ ನಿಲ್ಲಿಸಿ

“ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕು. ಹಾದಿ ಬೀದಿಯಲ್ಲಿ ಚೆಲ್ಲಾಡುತ್ತಿರುವ ವೀಡಿಯೊಗಳನ್ನು ನಿಲ್ಲಿಸಬೇಕು. ವಿಡಿಯೋ ಹಂಚಿಕೆಯನ್ನು ನಿಲ್ಲಿಸದಿದ್ದರೆ ಸರ್ಕಾರದ ಮೇಲಿನ ವಿಶ್ವಾಸ ಹೋಗಲಿದೆ. ಈ ಹತ್ಯಾಕಾಂಡಕ್ಕೆ ತಾರ್ಕಿಕ ಅಂತ್ಯ ಹಾಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ; ಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...