Homeಮುಖಪುಟಅಧಿಕಾರದ ಮದ ನಡೆಯುವುದಿಲ್ಲ ಎಂಬ ಸಂದೇಶ ರವಾನಿಸುವುದಕ್ಕಾಗಿ ಈ ಹೋರಾಟ: ಬಡಗಲಪುರ ನಾಗೇಂದ್ರ

ಅಧಿಕಾರದ ಮದ ನಡೆಯುವುದಿಲ್ಲ ಎಂಬ ಸಂದೇಶ ರವಾನಿಸುವುದಕ್ಕಾಗಿ ಈ ಹೋರಾಟ: ಬಡಗಲಪುರ ನಾಗೇಂದ್ರ

- Advertisement -
- Advertisement -

‘ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ’ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜ್ವಲ್‌ ಲೈಂಗಿಕ ಹಗರಣ ಖಂಡಿಸಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಒಂದು ವೇಳೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮಗೆ ಅಧಿಕಾರ ಹೊಂದಲು ಅವಕಾಶವಿಲ್ಲವೆಂದು ತಿಳಿಸಲು ನಾವು ಹಾಸನದ ಮಹಿಳೆಯರೊಂದಿಗೆ ಮತ್ತೊಮ್ಮೆ ಹೋರಾಟ ಮಾಡೋಣ” ಎಂದು ಕರೆ ನೀಡಿದರು.

ಹಿರಿಯ ಡಿಎಸ್‌ಎಸ್‌ ಮುಖಂಡರಾದ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಮಾಜಿ ಪ್ರಧಾನಿಗಳೇ ನಿಮ್ಮ ಮೊಮ್ಮಗನ ಬಗ್ಗೆ ಮಾತನಾಡುವಾಗ ಕನಿಷ್ಟ ಕ್ಷಮೆ ಕೇಳುವ ವಿವೇಚನೆ ಇರಲಿಲ್ಲ ನಿಮಗೆ. ನಿಮ್ಮ ಹೇಳಿಕೆಗಳು ಖಂಡನೀಯ. ಕಾನೂನಿನ ವ್ಯವಸ್ಥೆಯಲ್ಲಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕುಮಾರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ. ಅಧಿಕಾರದ ದುರುಪಯೋಗ ಮಾಡಿಕೊಂಡು ಅತ್ಯಾಚಾರಗೈದ ನಿಮ್ಮ ಮೊಮ್ಮಗನನ್ನು ಕ್ಷಮಿಸಬಾರದು. ನೀವು ಇಡೀ ರಾಜ್ಯದ ಜನರ ಕ್ಷಮೆ ಕೇಳಬೇಕು. ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಬೇಕು. ಅವರ ಕುಟುಂಬಸ್ಥರ ರಾಜಕೀಯ ಅಂತ್ಯವಾಗಬೇಕು. ನಿಮ್ಮ ಅಧಿಕಾರ ದುರುಪಯೋಗದ ಕೆಲಸಗಳು ಸಾಕು” ಎಂದರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಮಾನಗೆಟ್ಟ ರಾಜಕಾರಣದ ವಿರುದ್ಧ ಈ ಹೋರಾಟ ಸತ್ಯದ ಕನ್ನಡಿ ಹಿಡಿಯುತ್ತಿದೆ. ಪ್ರಜ್ವಲ್ ರೇವಣ್ಣನಿಗೆ ಮರ್ಯಾದೆ ಇದ್ದಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಡಬೇಕಿತ್ತು. ನಾಡಿನ ಜನರ ಕ್ಷಮೆ ಕೇಳಬೇಕಿತ್ತು. ಜನರ ಸಮ್ಮುಖದಲ್ಲಿ ನ್ಯಾಯ ಕೊಡಿಸಬೇಕಿತ್ತು. ನಿಮ್ಮ ಸಮರ್ಥನೆ ಖಂಡನೀಯ. ಇದು ನಿಮಗೆ ಯಾವುದೇ ಗೌರವ ತರುವುದಿಲ್ಲ. ಆತನನ್ನು ಕುಟುಂಬದಿಂದ ಹೊರಗೆ ಹಾಕದೆ ಇರುವುದಕ್ಕೆ ನಮಗೆ ಬೇಸರ ಇದೆ” ಎಂದರು.

“ಪ್ರಜ್ವಲ್ ವಿರುದ್ಧ ಹಾಕಿರುವ ಎಫ್‌ಐಆರ್‌ಗಳು ಸ್ಟೇಷನ್ ಬೇಲ್‌ನಿಂದಲೆ ಹೊರಬರುವಷ್ಟು ಸರಳವಾಗಿವೆ. ಎಸ್‌ಐಟಿ ಒಂದು ತಿಂಗಳ ಬಳಿಕ ಪ್ರಜ್ವಲ್ ಅವರ ಹಾಸಿಗೆ, ದಿಂಬು ವಶಪಡಿಸಿಕೊಂಡಿದೆ. ದಯವಿಟ್ಟು ಅದರಲ್ಲಿ ಒಂದು ಕೂದಲು ಇರದಂತೆ ನೋಡಿಕೊಳ್ಳಿ” ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದರು.

ವಿಡಿಯೋ ಹಂಚಿಕೆ ನಿಲ್ಲಿಸಿ

“ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕು. ಹಾದಿ ಬೀದಿಯಲ್ಲಿ ಚೆಲ್ಲಾಡುತ್ತಿರುವ ವೀಡಿಯೊಗಳನ್ನು ನಿಲ್ಲಿಸಬೇಕು. ವಿಡಿಯೋ ಹಂಚಿಕೆಯನ್ನು ನಿಲ್ಲಿಸದಿದ್ದರೆ ಸರ್ಕಾರದ ಮೇಲಿನ ವಿಶ್ವಾಸ ಹೋಗಲಿದೆ. ಈ ಹತ್ಯಾಕಾಂಡಕ್ಕೆ ತಾರ್ಕಿಕ ಅಂತ್ಯ ಹಾಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ; ಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...