Homeಮುಖಪುಟ'ಹಷ್ ಮನಿ' ಪ್ರಕರಣ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೋಷಿ ಎಂದ ಕೋರ್ಟ್

‘ಹಷ್ ಮನಿ’ ಪ್ರಕರಣ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೋಷಿ ಎಂದ ಕೋರ್ಟ್

- Advertisement -
- Advertisement -

ನೀಲಿ ಚಿತ್ರ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಜೊತೆಗಿನ ಸಂಬಂಧ ಮುಚ್ಚಿಡಲು ಹಣ ನೀಡಿದ ಪ್ರಕರಣ (ಹಷ್ ಮನಿ ಪ್ರಕರಣ)ದ ಎಲ್ಲಾ ಆರೋಪಗಳಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೋಷಿ ಎಂದು ಸಾಬೀತಾಗಿದೆ. ಜುಲೈ 11ರಂದು ನ್ಯಾಯಾಲಯ ಶಿಕ್ಷೆ ಪ್ರಕಟಿಸುವ ಸಾಧ್ಯತೆಯಿದೆ.

ಈ ಮೂಲಕ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಕುಖ್ಯಾತಿ ಡೊನಾಲ್ಡ್‌ ಟ್ರಂಪ್ ಅವರಿಗೆ ಸಂದಿದೆ. ಟ್ರಂಪ್ ಅವರನ್ನು ಅಧ್ಯಕ್ಷೀಯ ಅಭ್ಯರ್ಥಿ ಎಂದು ಘೋಷಿಸಲಿರುವ ರಿಪಬ್ಲಿಕನ್ ಪಕ್ಷದ ಸಮಾವೇಶಕ್ಕೂ ಮುನ್ನ ಈ ಬೆಳವಣಿಗೆ ನಡೆದಿದೆ.

ವಿಚಾರಣೆಯ ಸಮಯದಲ್ಲಿ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿರುವ ಟ್ರಂಪ್, ತಾನು ನಿರ್ದೋಷಿ ಎಂದು ವಾದಿಸಿದ್ದು, ನ್ಯಾಯಾಲಯದ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

ಟ್ರಂಪ್, 2006ರ ಲೈಂಗಿಕ ಸಂಬಂಧ ಬಾಯ್ಬಿಡದಂತೆ ಸ್ಟಾರ್ಮಿ ಡೇನಿಯಲ್ಸ್‌ಗೆ 1,30,000 ಡಾಲರ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಟ್ರಂಪ್ ಈ ಆರೋಪವನ್ನು ಅಲ್ಲಗಳೆದಿದ್ದು, ಡೇನಿಯಲ್ಸ್ ಸುಳ್ಳು ಹೇಳಿ ತನ್ನನ್ನು ಸುಲಿಗೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡೆನ್ ಅವರು 2020ರಲ್ಲಿ ಗೆಲುವು ಸಾಧಿಸಿದ ನಂತರ ಚುನಾವಣೆಯ ಫಲಿತಾಂಶಗಳನ್ನು ರದ್ದುಗೊಳಿಸಲು ಸಂಚು ರೂಪಿಸಿದ್ದು ಮತ್ತು ಶ್ವೇತ ಭವನವನ್ನು ತೊರೆದ ನಂತರ ರಹಸ್ಯ ದಾಖಲೆಗಳನ್ನು ಸಂಗ್ರಹಿಸಿದ್ದು ಸೇರಿದಂತೆ ಇನ್ನೂ ಹಲವು ಪ್ರಕರಣಗಳು ಟ್ರಂಪ್ ಮೇಲಿವೆ.

ಆರೋಪ ಸಾಬೀತಾದರೂ, ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಟ್ರಂಪ್‌ಗೆ ಯಾವುದೇ ರೀತಿಯ ನಿರ್ಬಂಧವಿಲ್ಲ. ಅಲ್ಲದೆ ಟ್ರಂಪ್‌ ಸದ್ಯಕ್ಕೆ ಜೈಲಿಗೆ ಹೋಗುವ ಸಾಧ್ಯತೆಯಿಲ್ಲ ಎಂದು ವರದಿಗಳು ಹೇಳಿವೆ.

ಸ್ಟಾರ್ಮಿ ಡೇನಿಯಲ್ಸ್‌ ಮತ್ತು ಟ್ರಂಪ್ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. ಈ ವಿಚಾರವನ್ನು ಡೇನಿಯಲ್ಸ್ 2011ರಲ್ಲಿ ಬಹಿರಂಗಗೊಳಿಸಿದ್ದರು. ಇದು 2016ರಲ್ಲಿ ಅಧ್ಯಕ್ಷೀಯ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇತ್ತು. ಹಾಗಾಗಿ, ಸ್ಟಾರ್ಮಿ ಡೇನಿಯಲ್ಸ್‌ ಬಾಯಿ ಮುಚ್ಚಿಸಲು ಟ್ರಂಪ್ ಹಣ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ‘ಹಷ್ ಮನಿ’ ಕೇಸ್ ಎನ್ನಲಾಗುತ್ತದೆ. ಗೌಪ್ಯತೆ ಕಾಪಾಡಲು ನೀಡುವ ಹಣಕ್ಕೆ ‘ಹಷ್ ಮನಿ’ ಎಂದು ಹೇಳಲಾಗುತ್ತದೆ.

ನ್ಯಾಯಾಲಯದ ತೀರ್ಪಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್, “ನಾನು ಈ ಪ್ರಕರಣದಲ್ಲಿ ಅಮಾಯಕನಾಗಿದ್ದೇನೆ. ನಿಜವಾದ ತೀರ್ಪು ಮತದಾರರಿಂದ ಬರಲಿದೆ. ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದ್ದು, ನಾನು ಈ ತೀರ್ಪನ್ನು ಒಪ್ಪುವುದಿಲ್ಲ” ಎಂದಿದ್ದಾರೆ.

ಟ್ರಂಪ್‌ ಪ್ರಕರಣದ ಬಗ್ಗೆ ಮಾತನಾಡಿರುವ ಅಧ್ಯಕ್ಷ ಜೋ ಬೈಡೆನ್, “ಯಾರೂ ಕಾನೂನಿಗಿಂತ ಮೇಲಲ್ಲ ಎಂಬುವುದನ್ನು ತೀರ್ಪು ತೋರಿಸಿದೆ. ನಮ್ಮ ಪ್ರಜಾಪ್ರಭುತ್ವಕ್ಕೆ ಟ್ರಂಪ್ ಒಡ್ಡುವ ಬೆದರಿಕೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...