Homeಮುಖಪುಟಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

- Advertisement -
- Advertisement -

ಸಾವಿನ ಅಂಚಿನಲ್ಲಿರುವ ವ್ಯಕ್ತಿಗಳು ಅಪರೂಪಕ್ಕೆ ಸುಳ್ಳು ಹೇಳುತ್ತಾರೆ ಮತ್ತು ಅವರ ಕೊನೆಯ ಮಾತುಗಳು ಕಾನೂನಿನ ದೃಷ್ಟಿಯಲ್ಲಿ ಹೆಚ್ಚು ಸ್ವೀಕಾರಾರ್ಹತೆಯನ್ನು ಮತ್ತು ಅಪಾರವಾದ ಮಾನ್ಯತೆಯನ್ನು ಹೊಂದಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಮಹಾರಾಷ್ಟ್ರದಲ್ಲಿ ಓರ್ವ ಅಪರಾಧಿಗೆ ಪತ್ನಿಯ ಹತ್ಯೆಗೆ ಸಂಬಂಧಿಸಿ ಜೀವಾವಧಿ ಶಿಕ್ಷೆಯನ್ನು ವಿಧಿಸುವಾಗ, ಸಾಯುತ್ತಿರುವ ವ್ಯಕ್ತಿಯ ಕೊನೆಯ ಮಾತುಗಳು ಪ್ರಾಮಾಣಿಕವಾಗಿರುತ್ತವೆ ಎಂದು ಕಾನೂನು ನಂಬುತ್ತದೆ ಎಂದು ಹೇಳಿದ್ದಾರೆ.

ಪೊಲೀಸ್ ಪೇದೆಯಾಗಿದ್ದ ಪತ್ನಿಯನ್ನು ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ 2002ರಲ್ಲಿ ಅಂಬಾಜೋಗಿಯಲ್ಲಿ ಸಹೋದರನ ಜೊತೆ ಸೇರಿ ಕಟ್ಟಿಹಾಕಿ ಮತ್ತು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಆಕೆ ಸುಟ್ಟ ಗಾಯಗಳಿಂದ ಸಾಯುವ ಮೊದಲು ಆಕೆ ನೀಡಿದ ಹೇಳಿಕೆಯನ್ನು ಸುಪ್ರೀಂಕೋರ್ಟ್ ವಿಚಾರಣೆ ವೇಳೆ ಮಹತ್ವದ್ದಾಗಿ ಪರಿಗಣಿಸಿತ್ತು. ಸಾಯುತ್ತಿರುವ ವೇಳೆ ನೀಡುವ ಹೇಳಿಕೆಗೆ ಸ್ವೀಕಾರಾರ್ಹತೆ ಹೆಚ್ಚಾಗಿರುತ್ತದೆ. ಏಕೆಂದರೆ ಸಾವಿನ ಅಂಚಿನಲ್ಲಿರುವಾಗ, ಸುಳ್ಳು ಹೇಳುವ ಪ್ರಸಂಗವು ಅಪರೂಪವಾಗಿ ಮಾತ್ರ ಕಂಡುಬರುತ್ತದೆ ಎಂದು ನ್ಯಾಯಮೂರ್ತಿ ಭುಯಾನ್ ತನ್ನ ತೀರ್ಪಿನಲ್ಲಿ ಹೇಳಿದ್ದಾರೆ.

ನ್ಯಾಯಾಲಯವು ವ್ಯಕ್ತಿಯ ಅಂತಿಮ ಹೇಳಿಕೆಯನ್ನು ಅತ್ಯಂತ ಜಾಗರೂಕತೆಯಿಂದ ಪರಿಶೀಲಿಸಬೇಕು.  ಸಾಯುವ ಸಮಯದಲ್ಲಿ ನೀಡಿದ ಹೇಳಿಕೆಯನ್ನು ಪುರಾವೆಯ ತುಣುಕಾಗಿ ಅಥವಾ ಒಂದು ಸ್ವತಂತ್ರ ಸಾಕ್ಷಿಯಾಗಿ ಪರಿಗಣಿಸಬಹುದೆಂದು ಎಂದು ನ್ಯಾಯಾಲಯ ಹೇಳಿದೆ. ಸಾವಿನ ಸಮಯದಲ್ಲಿ ವ್ಯಕ್ತಿಯು ನೀಡುವ ಹೇಳಿಕೆಯು ದೃಢೀಕರಿಸಲ್ಪಡದೆ ಇದ್ದಲ್ಲಿ ಅದನ್ನು ಪುರಾವೆಯಾಗಿ ಪರಿಗಣಿಸಲಾಗದು ಎಂಬುದಕ್ಕೆ ಯಾವುದೇ ಕಾನೂನಿಲ್ಲವೆಂದು ಹೇಳಿದ್ದಾರೆ.

ಸಾವಿನಂಚಿನ ವ್ಯಕ್ತಿಯ ಹೇಳಿಕೆಯು ಪ್ರೇರಣೆ ಅಥವಾ ಕಲ್ಪನೆಯಲ್ಲ ಎಂದು ಖಚಿತಪಡಿಸಿಕೊಳ್ಳಬೇಕು, ಮೃತರು ಹೇಳಿಕೆ ನೀಡಲು ಯೋಗ್ಯ ಮತ್ತು ಸರಿಯಾದ ಸ್ಥಿತಿಯಲ್ಲಿರಬೇಕು. ಸಾವಿನಂಚಿನಲ್ಲಿರುವ ವ್ಯಕ್ತಿ ನೀಡುವ ಹೇಳಿಕೆ ನಿಜ ಮತ್ತು ಸ್ವಯಂಪ್ರೇರಿತವಾಗಿದೆ ಎಂದು ನ್ಯಾಯಾಲಯಕ್ಕೆ ದೃಢಪಟ್ಟರೆ ಅದನ್ನು ಆಧರಿಸಿ ಅಪರಾಧ ನಿರ್ಣಯವನ್ನು ಮಾಡಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಒಂದು ವೇಳೆ ಸಾಯುವ ಮುನ್ನ ವ್ಯಕ್ತಿ ಕೊನೆಯ ಬಾರಿಗೆ ಹಲವು ಹೇಳಿಕೆಯನ್ನು ನೀಡಿದ್ದರೆ, ಈ ಪ್ರತಿಯೊಂದು ಹೇಳಿಕೆಗಳನ್ನು ಪ್ರತ್ಯೇಕವಾಗಿ ಮೌಲ್ಯಮಾಪನ ಮಾಡಬೇಕು. ಹೇಳಿಕೆಯಲ್ಲಿ ಕೆಲವು ವ್ಯತ್ಯಾಸಗಳ ಕಾರಣದಿಂದ ಒಂದು ಹೇಳಿಕೆಯನ್ನು ತಿರಸ್ಕರಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...