Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...