Homeಮುಖಪುಟಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಕೊಲೆ

ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಕೊಲೆ

- Advertisement -
- Advertisement -

ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಹೊರವಲಯದ ನೀರಾವರಿ ಟ್ಯಾಂಕ್ ಬಳಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿದ್ದ ಸಂಪತ್(36) ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಎನ್‌ಎಸ್‌ಯುಐ ಉಸ್ತುವಾರಿಯನ್ನು ವಹಿಸಿದ್ದರು ಮತ್ತು ರಾಹುಲ್ ಗಾಂಧಿಯವರ ಐದು ತಿಂಗಳ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು.

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ರಾಜ್ ಸಂಪತ್‌ಗೆ ಅವರ ಸ್ನೇಹಿತರು ಕೊನೆಯ ಬಾರಿ ನೋಡಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದರು. ಸ್ಥಳೀಯರು ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬಯಲಾಗಿದೆ. ಪ್ರಾಥಮಿಕ ತನಿಖೆಯಿಂದ ಸಂಪತ್‌ನನ್ನು ಬೇರೆಡೆ ಕೊಲೆ ಮಾಡಿ ಶವವನ್ನು ಪಟ್ಟಣದ ಹೊರವಲಯದ ತೊಟ್ಟಿಯ ಬಳಿ ಎಸೆದು ಹೋಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಡಿಎಸ್ಪಿ ಶ್ರೀನಿವಾಸ ರಾವ್, ವಿಧಿವಿಜ್ಞಾನ ತಂಡದೊಂದಿಗೆ ಶವ ಪತ್ತೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಂಪತ್‌ಗೆ ಸಹ ವಕೀಲರೊಬ್ಬರ ಜತೆ ಜಮೀನು ವಿವಾದವಿದ್ದು, ಈ ಕುರಿತು ಇತ್ತೀಚೆಗೆ ಹಿರಿಯ ಪೊಲೀಸ್‌ ಅಧಿಕಾರಿಗೆ ವಾಟ್ಸಾಪ್‌ ಸಂದೇಶ ಕಳುಹಿಸಿ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದರು ಎಂದು ಸಂಪತ್‌ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಕುರಿತು ಎಲ್ಲಾ ಕೋನಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತರನ್ನು ಹೆಸರಿಸಲು ಅಥವಾ ಕೊಲೆಯ ಹಿಂದಿನ ಸಂಭವನೀಯ ಉದ್ದೇಶದ ಬಗ್ಗೆ ಪ್ರಾಥಮಿಕವಾಗಿ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಹೇಳಿದ್ದಾರೆ.

ವಕೀಲರಾಗಿರುವ ಸಂಪತ್ ಅವರು ಧರ್ಮಾವರಂ ಮಂಡಲದ ಯರ್ರಗುಂಟಪಲ್ಲೆ ಮೂಲದವರು ಆದರೆ ಎರಡು ದಶಕಗಳಿಗೂ ಹೆಚ್ಚು ಕಾಲ ಹಿಂದೂಪುರದಲ್ಲಿ ನೆಲೆಸಿದ್ದಾರೆ. ವಿದ್ಯಾರ್ಥಿ ಜೀವನದಿಂದ ರಾಜಕೀಯ ಪ್ರಾರಂಭಿಸಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುನ್ನೆಲೆಗೆ ಬಂದಿದ್ದರು ಮತ್ತು NSUIನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಈ ಕುರಿತು NSUI ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ರಾಜ್ ಸಂಪತ್‌ ನಿಧನಕ್ಕೆ ಸಂತಾಪವನ್ನು ಸೂಚಿಸಿದೆ. ನಿಮ್ಮ ನಾಯಕತ್ವ ಮತ್ತು ಬದ್ಧತೆಯನ್ನು NSUI ಕುಟುಂಬವು ಶಾಶ್ವತವಾಗಿ ಸ್ಮರಿಸುತ್ತದೆ. ನೀವು ಯಾವಾಗಲೂ ನಮ್ಮ ಹೃದಯದಲ್ಲಿ ಉಳಿಯುತ್ತೀರಿ ಎಂದು ಹೇಳಿಕೊಂಡಿದೆ. ಸಂಪತ್ ಕುಮಾರ್ ಹತ್ಯೆಯನ್ನು ಖಂಡಿಸಿರುವ ಕಾಂಗ್ರೆಸ್, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಇದನ್ನು ಓದಿ: ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...