Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ| ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

ಮಹಿಳೆಯ ಅಪಹರಣ ಪ್ರಕರಣ| ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

- Advertisement -
- Advertisement -

ಮಹಿಳೆಯ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಜಾಮೀನು ನೀಡಿರುವ ವಿಶೇಷ ನ್ಯಾಯಾಲಯದ ಆದೇಶದಲ್ಲಿ ದೋಷ ಇದ್ದಂತಿದೆ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿರುವುದಾಗಿ ಲೈವ್‌ ಲಾ ವರದಿ ಮಾಡಿದೆ.

ರೇವಣ್ಣ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 13 ರಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ರದ್ದು ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಆದೇಶದಲ್ಲಿ ದೋಷ ಇದ್ದಂತಿದೆ ಎಂದು ಮೌಖಿಕವಾಗಿ ಹೇಳಿರುವುದಾಗಿ ವರದಿ ತಿಳಿಸಿದೆ.

ಎಸ್‌ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರೊಫೆಸರ್ ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ.

ವಾದ ಮಂಡನೆಯ ವೇಳೆ ಪ್ರೊ. ರವಿವರ್ಮ ಕುಮಾರ್‌ ಅವರು “ಜಾಮೀನು ನೀಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ತಪ್ಪಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ವಿಚಾರಣಾಧೀನ ನ್ಯಾಯಾಲಯವು ಐಪಿಸಿ ಸೆಕ್ಷನ್‌ 364ಎ ಅರ್ಜಿಯಲ್ಲಿ ಪ್ರಮಾದ ಎಸಗಿದೆ” ಎಂದಿದ್ದಾರೆ.

ಆಗ ಪೀಠವು “ವಾದದಲ್ಲಿ ಬಲ ಇದೆ. ದಾಖಲೆಯನ್ನು ಪರಿಶೀಲಿಸಿದರೆ ದೋಷ ಇದ್ದಂತಿದೆ” ಎಂದಿದೆ. ಆಗ ಪ್ರೊ. ರವಿವರ್ಮ ಕುಮಾರ್‌ ಅವರು “ದೂರು ನೀಡುವುದರಿಂದ ಮಹಿಳೆಯನ್ನು ತಡೆಯಲು ಅಪಹರಿಸಲಾಗಿದೆ. ಸಾಕ್ಷಿಯನ್ನು ಅಪಹರಿಸಲಾಗಿದೆ. ಪ್ರಕರಣವನ್ನು ತುರ್ತಾಗಿ ಆಲಿಸಬೇಕು. ಈ ನಡೆಗೆ ಅನುಮತಿಸಿದರೆ ಯಾರೂ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗದು” ಎಂದು ಹೇಳಿದ್ದಾರೆ.

ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಿದ್ದು, ಎಸ್‌ಐಟಿ ಮತ್ತು ರೇವಣ್ಣ ಇಬ್ಬರ ಅರ್ಜಿ ವಿಚಾರಣೆಯನ್ನು ಜೂನ್ 3 ರಂದು ಮಧ್ಯಾಹ್ನಕ್ಕೆ ಮಂದೂಡಿದೆ.

ಪ್ರಕರಣದ ಹಿನ್ನೆಲೆ : ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ, ತನ್ನ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅಪಹರಣಕ್ಕೊಳಗಾದ ಮಹಿಳೆಯ ಮಗ ಈ ಕುರಿತು ಮೈಸೂರಿನ ಕೆ.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದಲ್ಲಿ ಬಂಧನ ಭೀತಿಯಿಂದ ರೇವಣ್ಣ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದರಿಂದ ಎಸ್‌ಐಟಿ ಅವರನ್ನು ಬಂಧಿಸಿತ್ತು. ಬಳಿಕ ನ್ಯಾಯಾಲಯ ಜಾಮೀನು ನೀಡಿದ್ದರಿಂದ ರೇವಣ್ಣ ಬಿಡುಗಡೆಗೊಂಡಿದ್ದಾರೆ.

ರೇವಣ್ಣ ಅವರ ಸೂಚನೆಯಂತೆ ಮಹಿಳೆಯನ್ನು ಅಪಹರಿಸಿದ ಆರೋಪ ಅವರ ಆಪ್ತ ಸತೀಶ್ ಬಾಬಣ್ಣ ಮೇಲಿದೆ. ಇವರನ್ನು ಪೊಲೀಸರು ಬಂಧಿಸಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಲ್ಲಿ ಅಪಹರಣಕ್ಕೊಳಗಾದ ಮಹಿಳೆಯೂ ಒಬ್ಬರು ಎನ್ನಲಾಗಿದೆ. ಮೈಸೂರಿನ ತೋಟದ ಮನೆಯೊಂದರಲ್ಲಿದ್ದ ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ಈಗಾಗಲೇ ರಕ್ಷಿಸಿದ್ದಾರೆ.

ಇದನ್ನೂ ಓದಿ : ಪ್ರಚೋದನಕಾರಿ ಪೋಸ್ಟ್ : ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...