Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ| ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

ಮಹಿಳೆಯ ಅಪಹರಣ ಪ್ರಕರಣ| ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

- Advertisement -
- Advertisement -

ಮಹಿಳೆಯ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಜಾಮೀನು ನೀಡಿರುವ ವಿಶೇಷ ನ್ಯಾಯಾಲಯದ ಆದೇಶದಲ್ಲಿ ದೋಷ ಇದ್ದಂತಿದೆ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿರುವುದಾಗಿ ಲೈವ್‌ ಲಾ ವರದಿ ಮಾಡಿದೆ.

ರೇವಣ್ಣ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 13 ರಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ರದ್ದು ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಆದೇಶದಲ್ಲಿ ದೋಷ ಇದ್ದಂತಿದೆ ಎಂದು ಮೌಖಿಕವಾಗಿ ಹೇಳಿರುವುದಾಗಿ ವರದಿ ತಿಳಿಸಿದೆ.

ಎಸ್‌ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರೊಫೆಸರ್ ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ.

ವಾದ ಮಂಡನೆಯ ವೇಳೆ ಪ್ರೊ. ರವಿವರ್ಮ ಕುಮಾರ್‌ ಅವರು “ಜಾಮೀನು ನೀಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ತಪ್ಪಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ವಿಚಾರಣಾಧೀನ ನ್ಯಾಯಾಲಯವು ಐಪಿಸಿ ಸೆಕ್ಷನ್‌ 364ಎ ಅರ್ಜಿಯಲ್ಲಿ ಪ್ರಮಾದ ಎಸಗಿದೆ” ಎಂದಿದ್ದಾರೆ.

ಆಗ ಪೀಠವು “ವಾದದಲ್ಲಿ ಬಲ ಇದೆ. ದಾಖಲೆಯನ್ನು ಪರಿಶೀಲಿಸಿದರೆ ದೋಷ ಇದ್ದಂತಿದೆ” ಎಂದಿದೆ. ಆಗ ಪ್ರೊ. ರವಿವರ್ಮ ಕುಮಾರ್‌ ಅವರು “ದೂರು ನೀಡುವುದರಿಂದ ಮಹಿಳೆಯನ್ನು ತಡೆಯಲು ಅಪಹರಿಸಲಾಗಿದೆ. ಸಾಕ್ಷಿಯನ್ನು ಅಪಹರಿಸಲಾಗಿದೆ. ಪ್ರಕರಣವನ್ನು ತುರ್ತಾಗಿ ಆಲಿಸಬೇಕು. ಈ ನಡೆಗೆ ಅನುಮತಿಸಿದರೆ ಯಾರೂ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗದು” ಎಂದು ಹೇಳಿದ್ದಾರೆ.

ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಿದ್ದು, ಎಸ್‌ಐಟಿ ಮತ್ತು ರೇವಣ್ಣ ಇಬ್ಬರ ಅರ್ಜಿ ವಿಚಾರಣೆಯನ್ನು ಜೂನ್ 3 ರಂದು ಮಧ್ಯಾಹ್ನಕ್ಕೆ ಮಂದೂಡಿದೆ.

ಪ್ರಕರಣದ ಹಿನ್ನೆಲೆ : ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ, ತನ್ನ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅಪಹರಣಕ್ಕೊಳಗಾದ ಮಹಿಳೆಯ ಮಗ ಈ ಕುರಿತು ಮೈಸೂರಿನ ಕೆ.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದಲ್ಲಿ ಬಂಧನ ಭೀತಿಯಿಂದ ರೇವಣ್ಣ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದರಿಂದ ಎಸ್‌ಐಟಿ ಅವರನ್ನು ಬಂಧಿಸಿತ್ತು. ಬಳಿಕ ನ್ಯಾಯಾಲಯ ಜಾಮೀನು ನೀಡಿದ್ದರಿಂದ ರೇವಣ್ಣ ಬಿಡುಗಡೆಗೊಂಡಿದ್ದಾರೆ.

ರೇವಣ್ಣ ಅವರ ಸೂಚನೆಯಂತೆ ಮಹಿಳೆಯನ್ನು ಅಪಹರಿಸಿದ ಆರೋಪ ಅವರ ಆಪ್ತ ಸತೀಶ್ ಬಾಬಣ್ಣ ಮೇಲಿದೆ. ಇವರನ್ನು ಪೊಲೀಸರು ಬಂಧಿಸಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಲ್ಲಿ ಅಪಹರಣಕ್ಕೊಳಗಾದ ಮಹಿಳೆಯೂ ಒಬ್ಬರು ಎನ್ನಲಾಗಿದೆ. ಮೈಸೂರಿನ ತೋಟದ ಮನೆಯೊಂದರಲ್ಲಿದ್ದ ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ಈಗಾಗಲೇ ರಕ್ಷಿಸಿದ್ದಾರೆ.

ಇದನ್ನೂ ಓದಿ : ಪ್ರಚೋದನಕಾರಿ ಪೋಸ್ಟ್ : ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...