Homeಕರ್ನಾಟಕಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಲ್ಲದೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಶುಕ್ರವಾರ (ಮೇ 31) ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸರಿಗೆ ಬೆದರಿಕೆ ಹಾಕಿದ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹರೀಶ್‌ ಪೂಂಜಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ಏಕಸದಸ್ಯ ಪೀಠ, ಪೂಂಜಾ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪೂಂಜಾ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಪಕ್ಷದ ಕಾರ್ಯಕರ್ತ ಶಶಿರಾಜ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಿಸದೇ ಬೆಳ್ತಂಗಡಿ ಪೊಲೀಸರು ಕರೆದೊಯ್ದಿದ್ದರು. ಶಶಿರಾಜ್‌ ಪತ್ನಿಯ ಕೋರಿಕೆ ಮೇರೆಗೆ ಮೇ 19ರ ರಾತ್ರಿ ಪೂಂಜಾ ಪೊಲೀಸ್‌ ಠಾಣೆಗೆ ಹೋಗಿದ್ದರು. ಯಾವ ಆಧಾರದ ಮೇಲೆ ಶಶಿರಾಜ್‌ ಅವರನ್ನು ಬಂಧಿಸಿದ್ದೀರಿ? ಎಫ್‌ಐಆರ್‌ ಹಾಕಿದ್ದೀರಾ? ಎಂದು ಕೇಳಿದ್ದರು. ಈ ಸಂದರ್ಭದಲ್ಲಿ ಸೂಕ್ತ ಪ್ರತಿಕ್ರಿಯೆ ಬಾರದ ಹಿನ್ನೆಲೆ ಪೂಂಜಾ ಏರುಧ್ವನಿಯಲ್ಲಿ ಮಾತನಾಡಿರಬಹುದು. ಇದಕ್ಕಾಗಿ, ಪೂಂಜಾ ವಿರುದ್ಧ ಐಪಿಸಿ ಸೆಕ್ಷನ್‌ 353 ಮತ್ತು 504ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಶಾಸಕ, ಸಚಿವರು ಪೊಲೀಸ್‌ ಠಾಣೆಗೆ ಹೋದರೆ ಪೊಲೀಸರು ಹೇಗೆ ಕೆಲಸ ಮಾಡಬೇಕು?” ಎಂದು ಪ್ರಶ್ನಿಸಿದೆ.

ಈ ವೇಳೆ ಪ್ರತಿಕ್ರಿಯಿಸಿದ ನಾವದಗಿ ಅವರು “ಗ್ರಾಮೀಣ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಿಸದೇ ಯಾರನ್ನಾದರೂ ಪೊಲೀಸರು ವಶಕ್ಕೆ ಪಡೆದರೆ ಮೊದಲು ಶಾಸಕರನ್ನು ಸಂಪರ್ಕಿಸಲಾಗುತ್ತದೆ. ಕಾನೂನು ಬಾಹಿರವಾಗಿ ತನ್ನ ಕ್ಷೇತ್ರದಲ್ಲಿ ಏನಾದರೂ ನಡೆದರೆ ಅದನ್ನು ಪರಿಶೀಲಿಸಲು ಶಾಸಕರು ಮುಕ್ತರಾಗಿರುತ್ತಾರೆ. ಅದರಲ್ಲೂ ಎಫ್‌ಐಆರ್‌ ದಾಖಲಾಗದೇ ಯಾರನ್ನಾದರೂ ಪೊಲೀಸರು ಕರೆದೊಯ್ದರೆ ಅದನ್ನು ಅವರು ಪರಿಶೀಲಿಸಬಹುದು” ಎಂದಿದ್ದಾರೆ.

ಆಗ ಪೀಠವು “ಎಫ್‌ಐಆರ್‌ ಆದ ತಕ್ಷಣ ಶಾಸಕರು ಠಾಣೆಯಲ್ಲಿ ಹೋಗಿ ಕುಳಿತರೆ ಪೊಲೀಸ್‌ ಅಧಿಕಾರಿ ಹೇಗೆ ಕೆಲಸ ಮಾಡಬೇಕು? ಇಂಥ ಸಂದರ್ಭದಲ್ಲಿ ಶಾಸಕರು ಪೊಲೀಸ್‌ ಠಾಣೆಗೆ ಹೋಗಬಹುದು ಎಂಬ ಸಂಬಂಧದ ಒಂದೇ ಒಂದು ಐತಿಹ್ಯ ಹೊಂದಿರುವ ತೀರ್ಪು ತೋರಿಸಿ” ಎಂದಿದೆ.

“ನಾಳೆ ಪೊಲೀಸರು ಭಯೋತ್ಪಾದಕನೊಬ್ಬನನ್ನು ಬಂಧಿಸುತ್ತಾರೆ. ಒಬ್ಬ ಮಹಿಳೆ ಬಂದು ನನ್ನ ಗಂಡನನ್ನು ಬಂಧಿಸಿದ್ದಾರೆ ಠಾಣೆಗೆ ಹೋಗೋಣ ಬನ್ನಿ ಎಂದರೆ ಹೋಗುತ್ತೀರಾ?” ಎಂದು ಖಾರವಾಗಿ ಪ್ರಶ್ನಿಸಿದೆ.

“ನಿಮಗೆ ಸಮಸ್ಯೆಯಾದರೆ ಪರಿಹಾರಕ್ಕೆ ಮಾನವ ಹಕ್ಕುಗಳ ಆಯೋಗ ಇದೆ. ಅಲ್ಲಿಗೆ ಮನವಿ ನೀಡಬಹುದು. ನೀವ್ಯಾರು (ಪೂಂಜಾ) ಠಾಣೆಗೆ ಹೋಗಲು? ಶಶಿರಾಜ್‌ ಬಂಧನ ಅಕ್ರಮವಾಗಿದ್ದರೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಬೇಕಿತ್ತು” ಎಂದು ಕಿಡಿಕಾರಿದೆ.

ವಿಚಾರಣೆಯ ವೇಳೆ ನಾವದಗಿ ಅವರು “ಪೊಲೀಸರೇ ದೂರು ಕೊಟ್ಟು ಅವರೇ ತನಿಖೆ ನಡೆಸುತ್ತಿದ್ದಾರೆ. ಪೂಂಜಾ ಪೊಲೀಸರ ಬಗ್ಗೆ ಏನೋ ಅಂದಿದ್ದಾರೆ ಎಂಬುವುದು ಆರೋಪ. ಅದನ್ನು ಅವರೇ ತನಿಖೆ ನಡೆಸುತ್ತಿದ್ದಾರೆ. ಸಬ್‌ ಇನ್‌ಸ್ಪೆಕ್ಟರ್‌ ದೂರು ನೀಡಿದ್ದಾರೆ. ಅವರೇ ದೂರು ನೀಡಿ ಅವರೇ ತನಿಖೆ ನಡೆಸಲಾಗದು” ಎಂದು ಹೇಳಿದ್ದಾರೆ.

ನಾವದಗಿ ವಾದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಸರ್ಕಾರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪೊಲೀಸರ ನಿಂದನೆ ಪ್ರಕರಣವನ್ನು ಪುತ್ತೂರು ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ತನಿಖೆ ನಡೆಸಿ, ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ನ್ಯಾಯಾಲಯ ಸಂಜ್ಞೇ ಪರಿಗಣಿಸಿದೆ” ಎಂದು ಪೀಠಕ್ಕೆ ವಿವರಿಸಿದ್ದಾರೆ.

ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿದೆ. ಈ ನಡುವೆ, ಪೂಂಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಸಾವಧಾನದಿಂದ ಇರಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೌಖಿಕವಾಗಿ ಆದೇಶಿಸಿದೆ.

ಇದನ್ನೂ ಓದಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...