Homeಕರ್ನಾಟಕವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಹೆಸರಿಸಿದ್ದ ಇಬ್ಬರು ಆರೋಪಿಗಳ ಬಂಧನ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಹೆಸರಿಸಿದ್ದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಮತ್ತು ಹಣಕಾಸಿನ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರಶುರಾಮ್ ಜಿ. ದುರುಗಣ್ಣವರನ್ನು ಬಂಧಿಸಿದೆ.

ಹಗರಣದ ತನಿಖೆಗೆ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ನಿನ್ನೆ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಈ ಕುರಿತ ತನಿಖೆ ಆರಂಭದ ದಿನವೇ ಎಸ್ಐಟಿ, ಪದ್ಮನಾಭ ಮತ್ತು ಪರಶುರಾಮ್ ಅವರನ್ನು ಬಂಧಿಸಿದೆ.

ಏನಿದು ಪ್ರಕರಣ?

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ  ಸಂಜೆ ಡೆತ್‌ನೋಟ್ ಬರೆದಿಟ್ಟು ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ನಿಗಮದ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ಚಂದ್ರಶೇಖರನ್ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್‌ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್‌ ನೋಟ್‌ನಲ್ಲಿ ಬರೆದಿದ್ದರು. ಮಾನ್ಯ ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಹಣ ವರ್ಗಾಯಿಸಲು ಲೆಕ್ಕಾಧಿಕಾರಿ ಹೇಳಿದ ಹಿನ್ನೆಲೆಯಲ್ಲಿ ನಿಗಮದ 87 ಕೋಟಿ ಅನುದಾನವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಒತ್ತಾಯಪೂರ್ವಕ ಅನುದಾನ ವರ್ಗಾಯಿಸುತ್ತಿದ್ದರು. ನಮಗೆ ಅವರ ಒಳಸಂಚು ಅರ್ಥವೇ ಆಗಿಲ್ಲ. ಬ್ಯಾಂಕ್‌ನವರು ಚೆಕ್‌ ಬುಕ್‌ ಮತ್ತು ಪಾಸ್ ಬುಕ್‌ ಈವರೆಗೂ ನೀಡಿಲ್ಲ. 87 ಕೋಟಿ ಅವ್ಯವಹಾರ ಆಗಿದೆ. ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ. ನಾನು ನಿಗಮಕ್ಕೆ ಮೋಸ ಮಾಡಿಲ್ಲ. ಅವ್ಯವಹಾರದಲ್ಲಿ ಭಾಗಿ ಆಗಿಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಕೊನೆಯ ಹಂತದ ಮತದಾನ: ಪ.ಬಂಗಾಳದ ಹಲವೆಡೆ ಹಿಂಸಾಚಾರ; ಮತಯಂತ್ರಗಳನ್ನು ಹೊತ್ತೊಯ್ದು ನೀರಿಗೆ ಎಸೆದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...