Homeಮುಖಪುಟಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಕೊನೆಗೊಂಡಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದ್ದು, ಎಕ್ಸಿಟ್ ಪೋಲ್‌ಗಳು ಇಂದು ಸಂಜೆ 6:30ರಿಂದ ಪ್ರಸಾರವಾಗಲಿದೆ. 2024ರ ಲೋಕಸಭಾ ಚುನಾವಣೆಯ 543 ಸಂಸದೀಯ ಸ್ಥಾನಗಳ ನೈಜ ಫಲಿತಾಂಶ ಜೂನ್ 4ರಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಎಕ್ಸಿಟ್ ಪೋಲ್‌ಗಳು ಯಾವಾಗಲೂ 100% ಅಧಿಕೃತ ಫಲಿತಾಂಶಗಳಲ್ಲ, ನೈಜ ಫಲಿತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತದೆ.

2014 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳ ಫಲಿತಾಂಶಗಳು ಮತ್ತು ನಿಜವಾದ ಫಲಿತಾಂಶಗಳ ವಿವರ ಈ ಕೆಳಗಿದೆ.

2014ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

2014ರಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ಹೇಳಿದ್ದವು. ಆದರೆ ವಿಜಯದ ಅಂತರವನ್ನು ನಿಖರವಾಗಿ ಊಹಿಸಲು ವಿಫಲವಾಗಿವೆ.

2014ರಲ್ಲಿನ ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಎನ್‌ಡಿಎಗೆ 272 ಸ್ಥಾನಗಳನ್ನು ಊಹಿಸಿದ್ದವು.

2. ನ್ಯೂಸ್‌ 24-ಚಾಣಕ್ಯ: 340 ಸ್ಥಾನಗಳು

3. CNN-IBN-CSDS: 280 ಸೀಟುಗಳು

4. ಟೈಮ್ಸ್ ನೌ ORG: 249 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 274 ಸ್ಥಾನಗಳು

6. NDTV ಸಂಶೋಧನೆ: 279 ಸ್ಥಾನಗಳು

ಯುಪಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಯುಪಿಎಗೆ 115 ಸ್ಥಾನಗಳನ್ನು ಊಹಿಸಲಾಗಿದೆ

2.ನ್ಯೂಸ್‌ 24-ಚಾಣಕ್ಯ: 101 ಸ್ಥಾನಗಳು

3. CNN-IBN-CSDS: 97 ಸ್ಥಾನಗಳು

4. ಟೈಮ್ಸ್ ನೌ ORG: 148 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 97 ಸ್ಥಾನಗಳು

6. NDTV ಸಂಶೋಧನೆ: 103 ಸ್ಥಾನಗಳು

ನಿಜವಾದ ಫಲಿತಾಂಶಗಳು

2014ರ ಲೋಕಸಭೆ ಚುನಾವಣೆಯಲ್ಲಿ NDA 336 ಸ್ಥಾನಗಳನ್ನು ಪಡೆದುಕೊಂಡಿದೆ. ಅದರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದುಕೊಂಡಿದೆ. ಯುಪಿಎ 60 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

2019ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 339-365 ಸೀಟುಗಳು

2. ನ್ಯೂಸ್‌ 24-ಟುಡೇಸ್ ಚಾಣಕ್ಯ: 350 ಸ್ಥಾನಗಳು

3. News18-IPSOS: 336 ಸ್ಥಾನಗಳು

4. ಟೈಮ್ಸ್ ನೌ VMR: 306 ಸ್ಥಾನಗಳು

5. ಇಂಡಿಯಾ ಟಿವಿ-ಸಿಎನ್‌ಎಕ್ಸ್: 300 ಸೀಟುಗಳು

6. ಸುದರ್ಶನ ನ್ಯೂಸ್‌: 305 ಸ್ಥಾನಗಳು

ಯುಪಿಎ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 77-108 ಸೀಟುಗಳು

2.ನ್ಯೂಸ್‌ 24-ಟುಡೇಸ್ ಚಾಣಕ್ಯ: 95 ಸ್ಥಾನಗಳು

3. News18-IPSOS: 82 ಸ್ಥಾನಗಳು

4. ಟೈಮ್ಸ್ ನೌ VMR: 132 ಸ್ಥಾನಗಳು

5. ಇಂಡಿಯಾ TV-CNX: 120 ಸ್ಥಾನಗಳು

6. ಸುದರ್ಶನ ಸುದ್ದಿ: 124 ಸ್ಥಾನಗಳು

ನಿಜವಾದ ಫಲಿತಾಂಶಗಳು
2019ರ ಲೋಕಸಭೆ ಚುನಾವಣೆಯಲ್ಲಿ NDA 352 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕಾಂಗಿಯಾಗಿ 303 ಸ್ಥಾನವನ್ನು ಗಳಿಸಿದೆ. ಯುಪಿಎ 91 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ವಾಸ್ತವವಾಗಿ ನಿಖರವಾದ ಫಲಿತಾಂಶವನ್ನು ಯಾವುದೇ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿಲ್ಲ.

ಲೋಕಸಭೆ ಚುನಾವಣೆ 2024 ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿ ಹೊಸ ಸರಕಾರ ರಚನೆಗೆ ಪ್ರತಿಪಕ್ಷಗಳು ಬಿರುಸಿನ ಪ್ರಚಾರ ನಡೆಸಿದೆ. ಜೂ.4ರಂದು ಯಾರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿದು ಬರಲಿದೆ.

ಇದನ್ನು ಓದಿ: ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...