Homeಮುಖಪುಟಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಕೊನೆಗೊಂಡಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದ್ದು, ಎಕ್ಸಿಟ್ ಪೋಲ್‌ಗಳು ಇಂದು ಸಂಜೆ 6:30ರಿಂದ ಪ್ರಸಾರವಾಗಲಿದೆ. 2024ರ ಲೋಕಸಭಾ ಚುನಾವಣೆಯ 543 ಸಂಸದೀಯ ಸ್ಥಾನಗಳ ನೈಜ ಫಲಿತಾಂಶ ಜೂನ್ 4ರಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಎಕ್ಸಿಟ್ ಪೋಲ್‌ಗಳು ಯಾವಾಗಲೂ 100% ಅಧಿಕೃತ ಫಲಿತಾಂಶಗಳಲ್ಲ, ನೈಜ ಫಲಿತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತದೆ.

2014 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳ ಫಲಿತಾಂಶಗಳು ಮತ್ತು ನಿಜವಾದ ಫಲಿತಾಂಶಗಳ ವಿವರ ಈ ಕೆಳಗಿದೆ.

2014ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

2014ರಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ಹೇಳಿದ್ದವು. ಆದರೆ ವಿಜಯದ ಅಂತರವನ್ನು ನಿಖರವಾಗಿ ಊಹಿಸಲು ವಿಫಲವಾಗಿವೆ.

2014ರಲ್ಲಿನ ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಎನ್‌ಡಿಎಗೆ 272 ಸ್ಥಾನಗಳನ್ನು ಊಹಿಸಿದ್ದವು.

2. ನ್ಯೂಸ್‌ 24-ಚಾಣಕ್ಯ: 340 ಸ್ಥಾನಗಳು

3. CNN-IBN-CSDS: 280 ಸೀಟುಗಳು

4. ಟೈಮ್ಸ್ ನೌ ORG: 249 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 274 ಸ್ಥಾನಗಳು

6. NDTV ಸಂಶೋಧನೆ: 279 ಸ್ಥಾನಗಳು

ಯುಪಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಯುಪಿಎಗೆ 115 ಸ್ಥಾನಗಳನ್ನು ಊಹಿಸಲಾಗಿದೆ

2.ನ್ಯೂಸ್‌ 24-ಚಾಣಕ್ಯ: 101 ಸ್ಥಾನಗಳು

3. CNN-IBN-CSDS: 97 ಸ್ಥಾನಗಳು

4. ಟೈಮ್ಸ್ ನೌ ORG: 148 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 97 ಸ್ಥಾನಗಳು

6. NDTV ಸಂಶೋಧನೆ: 103 ಸ್ಥಾನಗಳು

ನಿಜವಾದ ಫಲಿತಾಂಶಗಳು

2014ರ ಲೋಕಸಭೆ ಚುನಾವಣೆಯಲ್ಲಿ NDA 336 ಸ್ಥಾನಗಳನ್ನು ಪಡೆದುಕೊಂಡಿದೆ. ಅದರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದುಕೊಂಡಿದೆ. ಯುಪಿಎ 60 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

2019ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 339-365 ಸೀಟುಗಳು

2. ನ್ಯೂಸ್‌ 24-ಟುಡೇಸ್ ಚಾಣಕ್ಯ: 350 ಸ್ಥಾನಗಳು

3. News18-IPSOS: 336 ಸ್ಥಾನಗಳು

4. ಟೈಮ್ಸ್ ನೌ VMR: 306 ಸ್ಥಾನಗಳು

5. ಇಂಡಿಯಾ ಟಿವಿ-ಸಿಎನ್‌ಎಕ್ಸ್: 300 ಸೀಟುಗಳು

6. ಸುದರ್ಶನ ನ್ಯೂಸ್‌: 305 ಸ್ಥಾನಗಳು

ಯುಪಿಎ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 77-108 ಸೀಟುಗಳು

2.ನ್ಯೂಸ್‌ 24-ಟುಡೇಸ್ ಚಾಣಕ್ಯ: 95 ಸ್ಥಾನಗಳು

3. News18-IPSOS: 82 ಸ್ಥಾನಗಳು

4. ಟೈಮ್ಸ್ ನೌ VMR: 132 ಸ್ಥಾನಗಳು

5. ಇಂಡಿಯಾ TV-CNX: 120 ಸ್ಥಾನಗಳು

6. ಸುದರ್ಶನ ಸುದ್ದಿ: 124 ಸ್ಥಾನಗಳು

ನಿಜವಾದ ಫಲಿತಾಂಶಗಳು
2019ರ ಲೋಕಸಭೆ ಚುನಾವಣೆಯಲ್ಲಿ NDA 352 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕಾಂಗಿಯಾಗಿ 303 ಸ್ಥಾನವನ್ನು ಗಳಿಸಿದೆ. ಯುಪಿಎ 91 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ವಾಸ್ತವವಾಗಿ ನಿಖರವಾದ ಫಲಿತಾಂಶವನ್ನು ಯಾವುದೇ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿಲ್ಲ.

ಲೋಕಸಭೆ ಚುನಾವಣೆ 2024 ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿ ಹೊಸ ಸರಕಾರ ರಚನೆಗೆ ಪ್ರತಿಪಕ್ಷಗಳು ಬಿರುಸಿನ ಪ್ರಚಾರ ನಡೆಸಿದೆ. ಜೂ.4ರಂದು ಯಾರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿದು ಬರಲಿದೆ.

ಇದನ್ನು ಓದಿ: ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...