Homeಅಂತರಾಷ್ಟ್ರೀಯಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

ಮೂರು ಹಂತದ ಕದನ ವಿರಾಮ ಪ್ರಸ್ತಾಪ; ಯುದ್ಧ ಕೊನೆಗೊಳಿಸುತ್ತಾ ಇಸ್ರೇಲ್‌?

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿ ಇಸ್ರೇಲ್‌ ಮೂರು ಹಂತದ ಕದನ ವಿರಾಮಕ್ಕೆ ಪ್ರಸ್ತಾಪವನ್ನು ಮಾಡಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಹೇಳಿದ್ದು, ಯುದ್ಧ ಅಂತ್ಯಗೊಳಿಸಲು ಇದು ಸಕಾಲ ಎಂದು ಹೇಳಿದ್ದಾರೆ. ಈಜಿಪ್ಟ್‌ ಮತ್ತು ಕತಾರ್‌ ಅಮೆರಿಕ ಸೇರಿದಂತೆ ರಾಷ್ಟ್ರಗಳ ಮಧ್ಯಸ್ಥಿಕೆ ಇದೀಗ ಹೊಸ ಭರವಸೆಯನ್ನು ಮೂಡಿಸಿದ್ದರೂ ನೆತನ್ಯಾಹು ಮಾತ್ರ ಇದಕ್ಕೆ ಸಮ್ಮತಿಸುವ ಲಕ್ಷಣ ಕಂಡು ಬರುತ್ತಿಲ್ಲ.

ಗಾಝಾದಲ್ಲಿ ಹಮಾಸ್‌ ವಶದಲ್ಲಿರುವ ಒತ್ತೆಯಾಳುಗಳ ಕುಟುಂಬಸ್ಥರು ಅಮೆರಿಕದ ಅಧ್ಯಕ್ಷ  ಜೋ ಬೈಡೆನ್ ಅವರು ಪ್ರಸ್ತಾಪಿಸಿದ ‘ಕದನ ವಿರಾಮ’ ಒಪ್ಪಂದವನ್ನು ಒಪ್ಪಿಕೊಳ್ಳುವಂತೆ ಇಸ್ರೇಲ್‌ ಸರಕಾರ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಒಪ್ಪಂದವನ್ನು ಸ್ವೀಕರಿಸುವಂತೆ ಇಸ್ರೇಲ್ ನಾಗರಿಕರು ಬೀದಿಗಿಳಿಯುವಂತೆ ಕರೆ ನೀಡಿದೆ. ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್  ‘ಹೊಸ ಪ್ರಸ್ತಾಪವನ್ನು’ ಮುಂದಿಟ್ಟಿದೆ ಎಂದು  ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅಮೆರಿಕದ ಅಧ್ಯಕ್ಷ ಬೈಡೆನ್ ಹೇಳಿದ ನಂತರ, ನೆತನ್ಯಾಹು ಒಪ್ಪಂದಕ್ಕೆ ಅಡ್ಡಿ ಮಾಡುತ್ತಾರೆ ಎಂದು ಒತ್ತೆಯಾಳುಗಳು ಮತ್ತು ನಾಪತ್ತೆಯದವರ ಕಟುಂಬ್ಥರ ವೇದಿಕೆಯು ಸಂಶಯ ವ್ಯಕ್ತಪಡಿಸಿದೆ.

ಅಮೆರಿಕದ ಅಧ್ಯಕ್ಷ ಬಿಡೆನ್ ವಿವರಿಸಿದ ಮೂರು-ಹಂತದ ಒಪ್ಪಂದವು ಗಾಝಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮ,  ಗಾಝಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಇಸ್ರೇಲ್‌ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಹೇಳುತ್ತದೆ. ಹಮಾಸ್ ಪ್ರಸ್ತಾವನೆಗೆ ಸಮ್ಮತಿಸಿದ್ದು, ಇಸ್ರೇಲ್‌ ನಡೆಸುತ್ತಿರುವ ಎಂಟು ತಿಂಗಳ ಯುದ್ಧ ಕೊನೆಗೊಳ್ಳುವ ಭರವಸೆ ಹೆಚ್ಚಳವಾಗಿದೆ.

ಶಾಶ್ವತ ಕದನ ವಿರಾಮ, ಗಾಝಾ ಪಟ್ಟಿಯಿಂದ ಇಸ್ರೇಲ್‌ ಪಡೆಗಳ ವಾಪಾಸ್ಸಾತಿ, ಗಾಝಾ ಪುನರ್ನಿರ್ಮಾಣ, ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕುರಿತ ಪ್ರಸ್ತಾಪದೊಂದಿಗೆ ಸಮ್ಮತಿಗೆ ಸಿದ್ಧವಿರುವುದಾಗಿ ಹಮಾಸ್‌ ಪುನರುಚ್ಚರಿಸಿದೆ. ಯುಎಸ್, ಕತಾರ್ ಮತ್ತು ಈಜಿಪ್ಟ್ ಕೂಡ ಜಂಟಿಯಾಗಿ ಒಪ್ಪಂದವನ್ನು ಅಂತಿಮಗೊಳಿಸಲು ಹಮಾಸ್ ಮತ್ತು ಇಸ್ರೇಲ್‌ಗೆ ಕರೆ ನೀಡಿವೆ. ಆದರೆ ನೆತನ್ಯಾಹು ಮಾತ್ರ ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವು ಕೊನೆಗೊಳ್ಳಬೇಕಾದರೆ, ಹಮಾಸ್‌ನ್ನು ಸಂಪೂರ್ಣವಾಗಿ ನಾಶಪಡಿಸಬೇಕು ಎಂಬ ನಿಲುವನ್ನೇ ಮುಂದುವರಿಸಿದ್ದಾರೆ. ಹಮಾಸ್‌ನ ಮಿಲಿಟರಿ ಮತ್ತು ಆಡಳಿತದ ನಾಶ, ಎಲ್ಲಾ ಒತ್ತೆಯಾಳುಗಳನ್ನು ಮುಕ್ತಗೊಳಿಸುವುದು ಮತ್ತು ಗಾಝಾ ಇನ್ನು ಮುಂದೆ ಇಸ್ರೇಲ್‌ಗೆ ಅಪಾಯವನ್ನುಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವವರೆಗೆ ಯುದ್ಧ ನಿಲ್ಲಿಸುವುದಿಲ್ಲ, ಶಾಶ್ವತ ಕದನ ವಿರಾಮವನ್ನು ಜಾರಿಗೆ ತರುವ ಮೊದಲು ಆ ಷರತ್ತುಗಳನ್ನು ನಾವು ಪೂರೈಸಬೇಕಿದೆ ಎಂದು ನೆತನ್ಯಾಹು ಕಚೇರಿ ಹೇಳಿದೆ.

ಇನ್ನೊಂದು ಕಡೆ ಒಪ್ಪಂದಕ್ಕೆ ಸಮ್ಮತಿಸದಂತೆ ನೆತನ್ಯಾಹು ಸರಕಾರದಲ್ಲೇ ಒತ್ತಡ ಇದೆ ಎನ್ನಲಾಗಿದೆ.  ಅಮೇರಿಕನ್ ಸುದ್ದಿ ಸಂಸ್ಥೆ ಆಕ್ಸಿಯೋಸ್ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪೋಸ್ಟ್‌ನಲ್ಲಿ, ಇಸ್ರೇಲ್‌ನ ಮಂತ್ರಿ ಇಟಾಮರ್ ಬೆನ್-ಗ್ವಿರ್ ಮತ್ತು ಬೆಜಲೆಲ್ ಸ್ಮೊಟ್ರಿಚ್ ಬಿಡೆನ್ ಮಂಡಿಸಿದ ಒತ್ತೆಯಾಳು ಒಪ್ಪಂದದ ಪ್ರಸ್ತಾಪಕ್ಕೆ ಸಮ್ಮತಿಸಿದರೆ ಒಕ್ಕೂಟವನ್ನು ತೊರೆದು ಸರ್ಕಾರವನ್ನು ಉರುಳಿಸುವುದಾಗಿ ನೆತನ್ಯಾಹುಗೆ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಕದನ ವಿರಾಮದ ಪ್ರಸ್ತಾಪದಲ್ಲಿನ ಅಂಶಗಳು:

-6 ವಾರಗಳ ಕಾಲ ಸಂಪೂರ್ಣ ಕದನ ವಿರಾಮ ಮತ್ತು ಗಾಝಾದ ಎಲ್ಲಾ ಜನ ನಿಬಿಡ ಪ್ರದೇಶದಿಂದ ಇಸ್ರೇಲ್‌ ಸೇನೆ ವಾಪಾಸ್ಸಾತಿ

-ಮಹಿಳೆಯರು, ಮಕ್ಕಳು ಸೇರಿ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆಗೊಳಿಸುವುದು, ಮೃತ ಒತ್ತೆಯಾಳುಗಳ ಮೃತದೇಹ ಒದಗಿಸುವುದು, ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಜೈಲಿನಲ್ಲಿರುವ ಪ್ಯಾಲೆಸ್ತೀನ್‌ ಕೈದಿಗಳ ಬಿಡುಗಡೆ

-ಗಾಝಾ ಪಟ್ಟಿಯಿಂದ ವಲಸೆ ಹೋಗಿರುವ ನಿರಾಶ್ರಿತರಿಗೆ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದು. ದಿನಕ್ಕೆ 600 ಟ್ರಕ್‌ಗಳಷ್ಟು ಮಾನವೀಯ ನೆರವು ನೀಡುವುದು.

ಎರಡನೇ ಹಂತ

-6 ವಾರಗಳಿಗೆ ಕದನ ವಿರಾಮ ವಿಸ್ತರಣೆ, ಗಾಝಾದಿಂದ ಇಸ್ರೇಲ್‌ ಸೇನೆಯ ಸಂಪೂರ್ಣ ವಾಪಾಸ್ಸಾತಿ, ಇಸ್ರೇಲ್‌ ಯೋಧರ ಸಹಿತ ಬದುಕುಳಿದ ಎಲ್ಲಾ ಒತ್ತೆಯಾಳುಗಳ ಬಿಡುಗಡೆ

ಎರಡೂ ಕಡೆಯವರು ಈ ಒಪ್ಪಂದದ ಅಂಶಗಳನ್ನು ಪಾಲಿಸಿದರೆ ಯುದ್ಧವು ಕೊನೆಗೊಳ್ಳಲಿದೆ.

-ಮೂರನೇ ಹಂತ

-ಅಮೆರಿಕ ಮತ್ತು ಅಂತರಾಷ್ಟ್ರೀಯ ಸಮುದಾಯದ ಬೆಂಬಲದಿಂದ ಗಾಝಾದ ಪುನರ್‌ನಿರ್ಮಾಣ ಮತ್ತು ಸ್ಥಿರೀಕರಣ ಯೋಜನೆಗೆ ಚಾಲನೆ

-ಮನೆಗಳು, ಶಾಲೆಗಳು, ಆಸ್ಪತ್ರೆಗಳ ನಿರ್ಮಾಣ. ಈ ಪ್ರಕ್ರಿಯೆ 5 ವರ್ಷಗಳ ಕಾಲ ಮುಂದುವರಿಯುವ ನಿರೀಕ್ಷೆ, ಹಮಾಸ್‌ ಮತ್ತೆ ಶಸ್ತ್ರಾಸ್ತ್ರ ಸಂಗ್ರಹಿಸದಂತೆ ನೋಡುವುದು, ಹಮಾಸ್ ಒಪ್ಪಂದಕ್ಕೆ ಬದ್ಧವಾಗಿರದಿದ್ದರೆ ಮತ್ತೆ ಮಿಲಿಟರಿ ಕಾರ್ಯಾಚರಣೆ, ಆದರೆ ಷರತ್ತುಗಳಿಗೆ ಬದ್ಧವಾಗಿರುವಂತೆ ಹಮಾಸ್‌ ಬಗ್ಗೆ ಈಜಿಪ್ಟ್‌ ಮತ್ತು ಖತಾರ್‌ ನಿಗಾ ವಹಿಸಲಿದೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...