Homeಮುಖಪುಟಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

ಕಣಿವೆಯಲ್ಲಿ ನಿರ್ಬಂಧ ಸಡಿಲಿಕೆ, ಮೊಬೈಲ್ ರಿಂಗಣ : ಶಾಲಾ-ಕಾಲೇಜು ಉಸ್ತುವಾರಿಗೆ ನ್ಯಾಯಾಧೀಶರ ನೇಮಕ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರು ಅಕ್ಷರಶಃ ಕಾರ್ಗತ್ತಲಲ್ಲಿದ್ದರು. ಉಸಿರಾಟ ನಿಂತು ಹೋಗಿತ್ತು. ಬಾಹ್ಯ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದರು. ಇದಕ್ಕೆ ಕಾರಣ ಕೇಂದ್ರ ಸರ್ಕಾರ. ರಾತ್ರೋರಾತ್ರಿ ಸೇನೆ ನಿಯೋಜಿಸಿ, 370ನೇ ವಿಧಿಯು ರದ್ದುಗೊಳಿಸಿದ್ದು, ಇದರಿಂದ ಎಲ್ಲ ಹಕ್ಕುಗಳು ಮೊಟುಕಾಗಿದ್ದವು. ಹೊರ ಪ್ರಪಂಚದೊಂದಿಗೆ ಸಂಪರ್ಕವೇ ಇರಲಿಲ್ಲ. ಅವರೆಲ್ಲ ಮಾನಸಿಕವಾಗಿ ಜರ್ಝರಿತರಾಗಿದ್ದರು. ಅದೂ 69 ದಿನಗಳ ಕಾಲ. ಎಲ್ಲಿಗೂ ಹೋಗದೆ ಮನೆಯೊಳಗೆ ಇರುವುದೆಂದರೆ ಹಿಂಸೆ. ಸರ್ಕಾರಕ್ಕು ಇದೇ ಬೇಕಾಗಿತ್ತು. ಅದನ್ನು ವ್ಯವಸ್ಥಿತವಾಗಿ ಮಾಡಿತ್ತು.

ಎರಡು ತಿಂಗಳು 10 ದಿನಗಳ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್ ರಿಂಗಣಿಸಿವೆ. ಹೋದ ಜೀವ ಬಂದಂತಾಗಿದೆ. ಮಡುಗಟ್ಟಿದ್ದ ಭಾವನೆಗಳ ಕಟ್ಟೆ ಒಡೆದಿದೆ. ಪಂಜರದಲ್ಲಿದ್ದ ಹಕ್ಕಿಗಳು ಹಾರತೊಡಗಿವೆ. ಬಂಧುಗಳು, ಮಕ್ಕಳು, ಸ್ನೇಹಿತರು ಪ್ರೀತಿಪಾತ್ರರ ಜತೆ ಮಾತು ನಡೆದಿದೆ. ಜೀವ ನಿರಾಳವಾದ ಅನುಭವ. ಇದರ ಬೆನ್ನಲ್ಲೇ ಹೋರಾಟವೂ ಆರಂಭವಾಗಿದೆ. ಪ್ರತಿಭಟನೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ.

ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದಿವೆ. ಆದರೆ ವಿದ್ಯಾರ್ಥಿಗಳ ಸುಳಿವಿಲ್ಲ. ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ಕಾರಣ ಭಯ. ಪೋಷಕರೂ ಕೂಡ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಭಯಪಡುತ್ತಿದ್ದಾರೆ. ಶಾಲೆ-ಕಾಲೇಜುಗಳ ಸುತ್ತಲೂ ಪೊಲೀಸರು, ಸಿಆರ್‍ಪಿಎಫ್ ಯೋಧರ ಸರ್ಪಗಾವಲು. ಪೊಲೀಸರು ಶಾಲೆ, ಕಾಲೇಜು, ವಿವಿ ಆವರಣದೊಳಗೆ ಪ್ರವೇಶಿಸುವಂತಿಲ್ಲ. ಕ್ಯಾಂಪಸ್ ಹೊರಗೆ ಇರಬೇಕು. ಮುನ್ನೆಚ್ಚರಿಕ ಕ್ರಮವಾಗಿ ಶಾಲೆ-ಕಾಲೇಜುಗಳಲ್ಲಿ ಅತ್ಯಾಧುನಿಕ ಹೈರೆಸಲ್ಯೂಷನ್ ಸಿಸಿ ಟಿವಿ ಆಳವಡಿಸಲಾಗಿದೆ. ಪ್ರತಿಯೊಂದು ಶಾಲೆ-ಕಾಲೇಜು ವಿಶ್ವ ವಿದ್ಯಾಲಯಗಳಿಗೆ ನ್ಯಾಯಾಧೀಶರ ನೇಮಕ ಮಾಡಿದೆ ಸರ್ಕಾರ. ಆದರೂ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿಲ್ಲ.

ಸ್ಥಳೀಯ ಪತ್ರಕರ್ತ ಅಹಮದ್ ಬರೆಯುತ್ತಾರೆ. 2017ರಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಹಲವು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ಪದವಿ ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದವು. ಇದೇ ಕಾರಣಕ್ಕೆ ಮೊದಲ ಬಾರಿಗೆ ಶಾಲೆಗಳು-ಕಾಲೇಜುಗಳ ಉಸ್ತುವಾರಿಗೆ ನ್ಯಾಯಾಧೀಶರ ನೇಮಕ ಮಾಡಿದೆ. ನ್ಯಾಯಾಧೀಶರು ಮಕ್ಕಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ನಿರ್ಬಂಧ ಸಡಿಲಿಕೆಯಾಗಿದ್ದರೂ ವಿದ್ಯಾರ್ಥಿಗಳು ತರಗತಿಗಳಿಂದ ದೂರವೇ ಉಳಿದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಗಳತ್ತ ಕರೆತರುವ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರ ಶಾಲೆಗಳನ್ನು ಪುನರ್ ಆರಂಭಿಸಿರುವುದು ರಾಜಕೀಯ ಪ್ರೇರಿತ ಎಂಬ ಭಾವನೆ ಜನರಲ್ಲಿದೆ. ಭಯವೂ ಮೂಡಿದೆ. ಮಕ್ಕಳನ್ನು ಶಾಲೆಗಳಿಗೆ ಕಳಿಸಿದರೆ ಅವರು ಮತ್ತೆ ವಾಪಸ್ ಮನೆಗೆ ಬರುತ್ತಾರೆಂಬ ಭರವಸೆ ಹೊರಟು ಹೋಗಿದೆ. ಜನ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಗೆ ಹಿಡಿದು ತರಲು ಆಗುತ್ತಿಲ್ಲ ಎನ್ನುತ್ತಾರೆ ಪತ್ರಕರ್ತ ಅಹಮದ್.

ಈ ನಡುವೆ ಸರ್ಕಾರ ಅಕ್ಟೋಬರ್ 23 ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಘೋಷಣೆ ಮಾಡಿದೆ. ಪದವಿ ಪೂರ್ವ ಕೋರ್ಸ್‍ಗಳಿಗೆ ನವೆಂಬರ್‍ನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ ತರಗತಿಗಳೇ ನಡೆದಿಲ್ಲ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿಲ್ಲ. ಬೋಧಿಸಬೇಕಾದ ಸಿಲಬಸ್ ಅಪೂರ್ಣಗೊಂಡಿದೆ. ಈ ಕಾರಣದಿಂದ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕಾದ ಅನಿವಾರ್ಯತೆ ಬಂದೊದಗಿದೆ. ವಿದ್ಯಾರ್ಥಿಗಳು ಪಾಠ ಪ್ರವಚನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪೋಷಕರು ಕೂಡ ಮಕ್ಕಳ ಸುರಕ್ಷತೆ ಬಗ್ಗೆ ಗಮನಹರಿಸಿರುವುದು ಅವರ ನಡವಳಿಕೆಗಳಿಂದ ತಿಳಿದು ಬರುತ್ತದೆ.

ವಿದ್ಯಾರ್ಥಿಗಳ ಹಾಜರಾತಿ ಇಲ್ಲ. ಪಠ್ಯ ಪೂರ್ಣಗೊಂಡಿಲ್ಲ. ಆದರೂ ಸರ್ಕಾರ ಹಾಜರಾತಿ ಇದೆ ಎನ್ನುತ್ತಿದೆ. ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯಿದೆ ಎಂದು ನಂಬಿಸುವ ಪ್ರಯತ್ನ ಮಾಡುತ್ತಿದೆ ಅಷ್ಟೆ. ಸರ್ಕಾರದ ಇಂತಹ ಅವೈಜ್ಞಾನಿಕ ದಿಢೀರ್ ಕ್ರಮಗಳಿಂದ ವಿದ್ಯಾರ್ಥಿಗಳ ಒಂದು ವರ್ಷದ ಶಿಕ್ಷಣ ಅರ್ಧಕ್ಕೆ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಯದ ವಾತಾವರಣ ಮುಂದುವರಿದರೆ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಮಕ್ಕಳ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಸರ್ಕಾರವೇ ಕಿತ್ತುಕೊಂಡಂತಾಗುತ್ತದೆ. ಮುಂದಾದರೂ ಸರ್ಕಾರ ಅಲ್ಲಿನ ಜನರ ಭಾವನೆಗಳಿಗೆ ಸ್ಪಂದಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....