Homeಮುಖಪುಟಅರುಣಾಚಲ ವಿಧಾನಸಭಾ ಚುನಾವಣೆ: ಮೂರನೇ ಬಾರಿಗೆ ಅಧಿಕಾರಕ್ಕೇರಿದ ಬಿಜೆಪಿ

ಅರುಣಾಚಲ ವಿಧಾನಸಭಾ ಚುನಾವಣೆ: ಮೂರನೇ ಬಾರಿಗೆ ಅಧಿಕಾರಕ್ಕೇರಿದ ಬಿಜೆಪಿ

- Advertisement -
- Advertisement -

ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, 46 ಸ್ಥಾನಗಳೊಂದಿಗೆ ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆದುಕೊಂಡಿದೆ. ಈ ಮೂಲಕ ಬಿಜೆಪಿ ಮೂರನೇ ಬಾರಿಗೆ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ.

60 ವಿಧಾನಸಭಾ ಕ್ಷೇತ್ರಗಳ ಅರುಣಾಚಲ ವಿಧಾನಸಭೆಗೆ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತದಾನ ನಡೆದಿದೆ. 46 ಸ್ಥಾನಗಳೊಂದಿಗೆ ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆದುಕೊಂಡಿದೆ. ಎನ್‌ಪಿಪಿ ಐದು ಸ್ಥಾನಗಳನ್ನು ಮತ್ತು ಎನ್‌ಸಿಪಿ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ  ಇತರರು ಐದು ಸ್ಥಾನಗಳಲ್ಲಿ ಗೆಲುವನ್ನು ಕಂಡುಕೊಂಡಿದ್ದಾರೆ.

ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಲೋಕಸಭೆ ಚುನಾವಣೆಯೊಂದಿಗೆ ಅರುಣಾಚಲ ವಿಧಾನಸಭಾ ಚುನಾವಣೆಗೆ ಏಕಕಾಲದಲ್ಲಿ ಮತದಾನ ನಡೆದಿದ್ದವು. ಅರುಣಾಚಲ ಪ್ರದೇಶದಲ್ಲಿ ಈ ಬಾರಿ 54.57% ಮತದಾನ ಬಿಜೆಪಿಗೆ ಬಿದ್ದಿದೆ, ಇದು 2019ಕ್ಕೆ ಹೋಲಿಕೆ ಮಾಡಿದರೆ ಬಿಜೆಪಿಯ ಮತ ಹಂಚಿಕೆಯಲ್ಲಿ ಹೆಚ್ಚಳವನ್ನು ತೋರಿಸುತ್ತದೆ. ಇನ್ನು ಕಾಂಗ್ರೆಸ್‌ನ ಮತ ಹಂಚಿಕೆ ಕಡಿಮೆಯಾಗಿದ್ದು, ಅರುಣಾಚಲದಲ್ಲಿ ಕಾಂಗ್ರೆಸ್‌ 5.56% ಮತವನ್ನು ಪಡೆದುಕೊಂಡಿದೆ. ಎನ್‌ಪಿಇಪಿ 16.11% ಮತವನ್ನು ಪಡೆದುಕೊಂಡಿದೆ. ಎನ್‌ಸಿಪಿಗೆ 10.43%    ಮತ್ತು ಇತರರು 5.6% ಮತವನ್ನು ಪಡೆದುಕೊಂಡಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಅರುಣಾಚಲದಲ್ಲಿ ಬಿಜೆಪಿಯು 60ರಲ್ಲಿ 41 ಸ್ಥಾನಗಳನ್ನು ಜಯಿಸಿತ್ತು. ಜೆಡಿಯು 7, ಎನ್‌ಪಿಪಿ 5, ಕಾಂಗ್ರೆಸ್‌ 4 ಮತ್ತು ಪಿಪಿಎ 1 ಸ್ಥಾನ ಗೆದ್ದುಕೊಂಡಿದ್ದರೆ, ಎರಡು ಸ್ಥಾನಗಳಲ್ಲಿ ಪಕ್ಷೇತರರು ಜಯಿಸಿದ್ದರು. ಯಾವುದೇ ಪಕ್ಷ ಬಹುಮತ ಸಾಬೀತು ಮಾಡಲು ಅರುಣಾಚಲ ಪ್ರದೇಶದಲ್ಲಿ 31 ಸ್ಥಾನಗಳ ಅಗತ್ಯವಿರುತ್ತದೆ. ಮುಖ್ಯಮಂತ್ರಿ ಪೇಮಾ ಖಂಡು ಹಾಗೂ ಉಪ ಮುಖ್ಯಮಂತ್ರಿ ಚೌನಾ ಮೈನ್ ತಮ್ಮ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಪಕ್ಷ ಜಯಭೇರಿ ಬಾರಿಸಿದ ಬಳಿಕ ಅಲ್ಲಿನ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಧನ್ಯವಾದಗಳು ಅರುಣಾಚಲ ಪ್ರದೇಶ, ಈ ಅದ್ಭುತ ರಾಜ್ಯದ ಜನರು ಅಭಿವೃದ್ಧಿಯ ರಾಜಕೀಯಕ್ಕೆ ನಿಸ್ಸಂದಿಗ್ಧವಾದ ಜನಾದೇಶವನ್ನು ನೀಡಿದ್ದಾರೆ. ಬಿಜೆಪಿ ಬಗ್ಗೆ ಮತ್ತೊಮ್ಮೆ ತಮ್ಮ ನಂಬಿಕೆಯನ್ನು ಇಟ್ಟಿದ್ದಕ್ಕೆ ನನ್ನ ಕೃತಜ್ಞತೆಗಳು. ನಮ್ಮ ಪಕ್ಷವು ರಾಜ್ಯದಲ್ಲಿ ಇನ್ನೂ ಹೆಚ್ಚಿನ ಚೈತನ್ಯದಿಂದ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಂ) ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇಲ್ಲಿಯವರೆಗೆ ವಿಧಾನಸಭೆಯ 31 ಸ್ಥಾನಗಳಲ್ಲಿ ಆಡಳಿತ ಪಕ್ಷ 26 ಸ್ಥಾನಗಳನ್ನು ಗೆದ್ದಿದೆ. ಉಳಿದ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಗೆಲುವಿಗಾಗಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮುಖ್ಯಮಂತ್ರಿ ತಮಾಂಗ್ ಧನ್ಯವಾದ ತಿಳಿಸಿದ್ದಾರೆ.

ಇದನ್ನು ಓದಿ: ಸಿಕ್ಕಿಂ ವಿಧಾನಸಭಾ ಚುನಾವಣೆ ಫಲಿತಾಂಶ: ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದ ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...