Homeಮುಖಪುಟಮೆಕ್ಸಿಕೋದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಶೀನ್‌ಬಾಮ್ ಆಯ್ಕೆ

ಮೆಕ್ಸಿಕೋದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಶೀನ್‌ಬಾಮ್ ಆಯ್ಕೆ

- Advertisement -
- Advertisement -

ಮೆಕ್ಸಿಕೋದ ಆಡಳಿತಾರೂಢ ಎಡಪಂಥೀಯ ‘ಮೊರೆನಾ’ ಪಕ್ಷದ ಕ್ಲೌಡಿಯಾ ಶೀನ್‌ಬಾಮ್ ಅವರು ದೇಶದ ಮೊದಲ ಮಹಿಳಾ ಅಧ್ಯಕ್ಷೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಮೆಕ್ಸಿಕೋ ನಗರದ ಡೌನ್‌ಟೌನ್‌ ಹೋಟೆಲ್‌ನಲ್ಲಿ ಪ್ರತಿಕ್ರಿಯೆ ನೀಡಿದ ಶೀನ್‌ಬಾಮ್, “ನಾನು ಮೆಕ್ಸಿಕೋದ ಮೊದಲ ಮಹಿಳಾ ಅಧ್ಯಕ್ಷೆಯಾಗಲಿದ್ದೇನೆ. ನಾನು ಈ ಸಾಧನೆಯನ್ನು ಏಕಾಂಕಿಯಾಗಿ ಮಾಡಿಲ್ಲ. ನನ್ನ ತಾಯಂದಿರು, ನಮ್ಮ ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ತಾಯ್ನಾಡನ್ನು ನನಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಅಧ್ಯಕ್ಷೀಯ ಸ್ಥಾನಕ್ಕೆ ನಡೆದ ಚುನಾವಣೆಯ ಕ್ಷಿಪ್ರ ಮಾದರಿ ಮತ ಎಣಿಕೆಯಲ್ಲಿ 60.7 ಶೇಖಡ ಮತಗಳನ್ನು ಪಡೆಯುವ ಮೂಲಕ ಕ್ಲೌಡಿಯಾ ಶೀನ್‌ಬಾಮ್ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಪಿಎನ್‌ ಪಕ್ಷದ ಕ್ಸೊಕಿಟಿ ಗಲ್ವೇಝ್ ಅವರು ಶೇ.58.3ರಷ್ಟು ಮತಗಳನ್ನು ಪಡೆದಿದ್ದಾರೆ. ಇದು ದೇಶದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿಯೇ ಅತ್ಯಧಿಕ ಮತದಾನವಾಗಿದೆ.

ಕ್ಲೌಡಿಯಾ ಶೀನ್‌ಬಾಮ್ ಅವರು ವಿರೋಧ ಪಕ್ಷಗಳ ಒಕ್ಕೂಟವನ್ನು ಪ್ರತಿನಿಧಿಸುವ ಸಂಪ್ರದಾಯವಾದಿ ಪಿಎನ್‌ ಪಕ್ಷದ ಕ್ಸೊಕಿಟಿ ಗಲ್ವೇಝ್ ಅವರನ್ನು ಸೋಲಿಸಿದ್ದಾರೆ. ಕಣದಲ್ಲಿದ್ದ ಮೂರನೇ ಅಭ್ಯರ್ಥಿ ಜಾರ್ಜ್ ಅಲ್ವಾರೆಝ್ ಮೇನೆಜ್ ಅವರು ಮಧ್ಯ-ಎಡ ನಾಗರಿಕರ ಚಳವಳಿಯನ್ನು ಪ್ರತಿನಿಧಿಸಿದ್ದರು.

ಮೆಕ್ಸಿಕೋದ ಇತಿಹಾಸದಲ್ಲೇ ಅತಿ ದೊಡ್ಡ ಚುನಾವಣೆಯು ಹಿಂಸಾಚಾರದಿಂದ ರಕ್ತಸಿಕ್ತವಾಗಿತ್ತು. ಅಧಿಕಾರದಲ್ಲಿರುವವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಕ್ರಿಮಿನಲ್ ಸಂಘಟನೆಗಳಿಂದ ಹಲವಾರು ರಾಜಕೀಯ ಮುಖಂಡರು ಕೊಲ್ಲಲ್ಪಟ್ಟಿದ್ದಾರೆ. ಕನಿಷ್ಠ 38 ಅಭ್ಯರ್ಥಿಗಳು ಸಾವನಪ್ಪಿದ್ದಾರೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಡ್ರಗ್ ಕಾರ್ಟೆಲ್‌ಗಳ ಬೆದರಿಕೆ ಕಳವಳ ಉಂಟು ಮಾಡಿತ್ತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ರಾಷ್ಟ್ರೀಯ ಚುನಾವಣಾ ಸಂಸ್ಥೆಯ ಪ್ರಕಾರ, ಮೈಕೋಕಾನ್ ಮತ್ತು ಚಿಯಾಪಾಸ್‌ ಪ್ರಾಂತ್ಯದಲ್ಲಿ ಭದ್ರತೆಯ ಕಾರಣದಿಂದ ಅದು ಸುಮಾರು 170 ಮತಗಟ್ಟೆಗಳನ್ನು ರದ್ದುಗೊಳಿಸಲಾಗಿದೆ.

ಪ್ಯೂಬ್ಲಾದಲ್ಲಿ ನಾಲ್ವರು ಶಸ್ತ್ರಸಜ್ಜಿತ ದಾಳಿಕೋರರು ಮತಯಂತ್ರಗಳನ್ನು ಕದಿಯಲು ಮತಗಟ್ಟೆಗಳನ್ನು ಸ್ಥಾಪಿಸಿದ ಶಾಲೆಗೆ ನುಗ್ಗಲು ಪ್ರಯತ್ನಿಸಿದ್ದರು. ಪಶ್ಚಿಮ ಮೆಕ್ಸಿಕೋದಲ್ಲಿ ಮತದಾನ ನಡೆಯುವ ಗಂಟೆಗಳ ಮೊದಲು ಜೂನ್ 1ರಂದು ಸ್ಥಳೀಯ ಅಭ್ಯರ್ಥಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಭಾನುವಾರ ನಡೆದ ಚುನಾವಣೆಯಲ್ಲಿ ಸುಮಾರು 100 ಮಿಲಿಯನ್ ಮೆಕ್ಸಿಕನ್ನರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದರು. ಅಧ್ಯಕ್ಷೀಯ ಸ್ಪರ್ಧೆಯನ್ನು ಹೊರತುಪಡಿಸಿ, ಮೆಕ್ಸಿಕೋ ನಗರದ ಮೇಯರ್, ಎಂಟು ಗವರ್ನರ್‌ ಸ್ಥಾನಗಳು ಮತ್ತು ಎರಡು ಸಂಸತ್‌ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸುಮಾರು 1.4 ಮಿಲಿಯನ್ ಮೆಕ್ಸಿಕನ್ನರು ವಿದೇಶದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು ಎಂದು ಸಿಎನ್‌ಎನ್‌ ವರದಿ ಮಾಡಿದೆ. ಸುಮಾರು 20,000 ಸ್ಪರ್ಧಿಗಳು ಕಣದಲ್ಲಿದ್ದರು. ಇದು ಮೆಕ್ಸಿಕೋದ ಇತಿಹಾಸದಲ್ಲಿಯೇ ಅತಿ ಹೆಚ್ಚು ಎಂದು ರಾಯಿಟರ್ಸ್ ವರದಿ ಮಾಡಿದೆ.

ಕ್ಲೌಡಿಯಾ ಶೀನ್‌ಬಾಮ್ ಅಧ್ಯಕ್ಷೆಯಾದ ಬಳಿಕ ದೇಶದಲ್ಲಿ ಸಂಘಟಿತ ಹಿಂಸಾಚಾರವನ್ನು ತಡೆಗಟ್ಟುವ ಸವಾಲು ಹೊಂದಿದ್ದಾರೆ. ಏಕೆಂದರೆ, ಅವರ ಪಕ್ಷದ ಲೋಪೆಝ್ ಒಬ್ರಡಾರ್ ಅವರ ಆಡಳಿತಾವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಜನರು ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಕ್ಲೌಡಿಯಾ ಶೀನ್‌ಬಾಮ್ ಹಿನ್ನೆಲೆ

ಜೂನ್ 24,1962ರಲ್ಲಿ ಜನಿಸಿದ ಕ್ಲೌಡಿಯಾ ಶೀನ್‌ಬಾಮ್ ಪರ್ಡೊ ಮೆಕ್ಸಿಕನ್ ರಾಜಕಾರಣಿ, ವಿಜ್ಞಾನಿ ಮತ್ತು ಶೈಕ್ಷಣಿಕ ತಜ್ಞೆಯಾಗಿದ್ದಾರೆ. ಎಡಪಂಥೀಯ ರಾಜಕೀಯ ಪಕ್ಷ ಮೊರೆನಾದ ಸದಸ್ಯರಾಗಿರುವ ಶೀನ್‌ಬಾಮ್, 2018 ರಿಂದ 2023ರವರೆಗೆ ರಾಜ್ಯ ಗವರ್ನರ್ ಹುದ್ದೆಗೆ ಸಮಾನವಾದ ಮೆಕ್ಸಿಕೋ ಸಿಟಿಯ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಇದೀಗ 2024ರ ಮೆಕ್ಸಿಕನ್ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸುವ ಮೂಲಕ ದೇಶದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಇದನ್ನೂ ಓದಿ : ಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಹಲ್ಲೆ: ಬೆಂಗಳೂರು ಪೊಲೀಸರ ವಿರುದ್ಧ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...