Homeಕರ್ನಾಟಕದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಟಾ ಪರ 15,000ಕ್ಕೂ ಅಧಿಕ ಮತ ಚಲಾವಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಟಾ ಪರ 15,000ಕ್ಕೂ ಅಧಿಕ ಮತ ಚಲಾವಣೆ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 295 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 230 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 19 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ವಿರುದ್ಧ 1,14,000ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15, 239ಕ್ಕೂ ಅಧಿಕ ನೋಟಾ ಮತಗಳ ಚಲಾವಣೆಯಾಗಿದ್ದು, ನೋಟ ಮೂರನೇ ಸ್ಥಾನದಲ್ಲಿದೆ.

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ.  ಮಿಝರೋಂನ 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ.  ನಾಗಲ್ಯಾಂಡ್ನ 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಪುದುಚೇರಿಯ 1 ಕ್ಷೇತ್ರದಲ್ಲಿ ಕಾಂಗ್ರೆಸ್‌  ಮುನ್ನಡೆಯನ್ನು ಸಾಧಿಸಿದೆ. ಸಿಕ್ಕಿಂನ ಒಂದು ಕ್ಷೇತ್ರದಲ್ಲಿ ಎಸ್‌ಕೆಎಂ ಮುನ್ನಡೆಯನ್ನು ಸಾಧಿಸಿದೆ. ಅಂಡೋಮಾನ್‌ ನಿಕೋಬರ್‌ ದ್ವೀಪದ 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ.  ಮಣಿಪುರ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಮೇಘಾಲಯದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನೊಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ.  ಗೋವಾದ ಎರಡು ಕ್ಷೇತ್ರದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಇನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ದಾದ್ರಾ ಮತ್ತು ನಾಗರ್‌ ಅವೇಲಿಯಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಮತ್ತು ಪಕ್ಷೇತರ ಅಭ್ಯರ್ಥಿ ಇನ್ನೊಂದು ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಒಡಿಶಾ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು, ಒಡಿಶಾದಲ್ಲಿ ಬಿಜೆಡಿ 51 ಕ್ಷೇತ್ರಗಳಲ್ಲಿ ಮತ್ತು  ಬಿಜೆಪಿ 74 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್‌ 13 ಕ್ಷೇತ್ರಗಳಲ್ಲಿ ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿಗೆ ಹಿನ್ನಡೆ ಕಂಡು ಬರುತ್ತಿದೆ.

ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ದ.ಕನ್ನಡ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿಕಾಂತ್‌ ಸೆಂಥಿಲ್‌ ಡಿಎಂಡಿಕೆಯ ನಲ್ಲತಂಬಿ ವಿರುದ್ಧ  42,000ಕ್ಕೂ ಅಧಿಕ ಮತಗಳ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ.

ಬಿಜೆಪಿ ದೇಶದಲ್ಲಿ ಒಟ್ಟು 243 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್‌ ಏಕಾಂಗಿಯಾಗಿ 100 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಎನ್‌ಡಿಎ ಮೈತ್ರಿ ಪಕ್ಷಗಳಾದ ಟಿಡಿಪಿ 15 ಕ್ಷೇತ್ರಗಳಲ್ಲಿ ಮತ್ತು ಶಿವಸೇನೆ(ಏಕನಾಥ್‌ ಬಣ) ಜೆಡಿಯು 7 ಕ್ಷೇತ್ರಗಳಲ್ಲಿ ಎಲ್‌ಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಕಾಂಗ್ರೆಸ್‌ ಏಕಾಂಗಿಯಾಗಿ 101 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಎಸ್ಪಿ 33 ಕ್ಷೇತ್ರಗಳಲ್ಲಿ, ಟಿಎಂಸಿ 21 ಕ್ಷೇತ್ರಗಳಲ್ಲಿ ಡಿಎಂಕೆ 20 ಕ್ಷೇತ್ರಗಳಲ್ಲಿ  ಶಿವಸೇನೆ ಉದ್ಧವ್ ಬಣ 8 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಅಮೇಥಿಯಲ್ಲಿ ಬಿಜೆಪಿ ನಾಯಕಿ, ಕೇಂದ್ರ ಸಚಿವ ಸ್ಮೃತಿ ಇರಾನಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ  ಕಿಶೋರ್‌ ಲಾಲ್‌ ಮುನ್ನಡೆಯನ್ನು ಸಾಧಿಸಿದ್ದಾರೆ.  ಹೈದ್ರಾಬಾದ್‌ ಸೆಂಟ್ರಲ್‌ನಲ್ಲಿ ಮಾಧವಿ ಲತಾಗೆ ಭಾರೀ ಹಿನ್ನಡೆಯಾಗಿದ್ದು, ಅಸಾದುದ್ದೀನ್ ಒವೈಸಿ ಮುನ್ನಡೆಯನ್ನು ಸಾಧಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...