Homeಕರ್ನಾಟಕರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ: ಬೆಂಗಳೂರಿನ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲು

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ: ಬೆಂಗಳೂರಿನ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲು

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್‌ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್‌ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ.

ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್‌ಗೆ ಗೆಲುವು:

ಬೆಂಗಳೂರು ಗ್ರಾಮಾಂತರದಲ್ಲಿ ಹಾಲಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ವಿರುದ್ಧ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ 2,68.094 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಡಿಕೆ ಬ್ರದಸ್‌ ಪ್ರತಿಷ್ಠೆಯ ಕಣವನ್ನಾಗಿ ಸ್ವೀಕರಿಸಿ ಪ್ರಚಾರ ಮಾಡಿದ್ದರು. ಡಿ.ಕೆ ಸುರೇಶ್‌ ಗೆಲುವು ನಿಶ್ಚಿತ ಎಂದು ಹೇಳಲಾಗಿತ್ತು. ಆದರೆ ಫಲಿತಾಂಶ ಇದೀಗ ಕಾಂಗ್ರೆಸ್‌ ಪಾಲಯದಲ್ಲಿ ಅದರಲ್ಲೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರಲ್ಲಿ ನಿರಾಶೆ ಮೂಡಿಸಿದೆ. ಇದಲ್ಲದೆ 10,633 ಮತಗಳು ನೋಟಾಗೆ ಬಿದ್ದಿದ್ದು, ಕ್ಷೇತ್ರದಲ್ಲಿ ಮೂರನೇ ಸ್ಥಾನದಲ್ಲಿ ನೋಟಾ ಇದೆ.

ಬೆಂಗಳೂರು ದಕ್ಷಿಣ:

ಬೆಂಗಳೂರು ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ತೇಜಸ್ವಿ ಸೂರ್ಯ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ  2,68,028 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ 7,27,537 ಮತಗಳು ತೇಜಸ್ವಿ ಸೂರ್ಯಗೆ ಬಿದ್ದಿದ್ದು, 4,59,460 ಮತಗಳನ್ನು ಸೌಮ್ಯ ರೆಡ್ಡಿ ಪಡೆದಿದ್ದಾರೆ. 7,617 ಮತಗಳು ನೋಟಾಕ್ಕೆ ಬಿದ್ದಿದೆ. ಹಾಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ಪರ ಕ್ಷೇತ್ರದಲ್ಲಿ ಒಲವು ಇತ್ತು, ಆದರೆ ಅಂತಿಮವಾಗಿ ತೇಜಸ್ವಿ ಸೂರ್ಯ ಗೆಲುವನ್ನು ಸಾಧಿಸಿದ್ದಾರೆ.

ಬೆಂಗಳೂರು ಉತ್ತರ:

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೋ.ರಾಜೀವ್‌ ಗೌಡ ಎದುರು 2,62,537 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ ಪರವಾಗಿ 9,74,909 ಮತಗಳು ಚಲಾವಣೆಯಾಗಿದ್ದು, ರಾಜೀವ್‌ ಗೌಡಗೆ 7,12,372 ಮತಗಳು ಸಿಕ್ಕಿದೆ. ಕ್ಷೇತ್ರದಲ್ಲಿ 13,375 ಮತಗಳು ನೋಟಾ ಪರ ಚಲಾವಣೆಯಾಗಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಈ ಹಿಂದೆ ಪ್ರತಿನಿಧಿಸುತ್ತಿದ್ದ ಶೋಭಾ ಕರಂದ್ಲಾಜೆಗೆ ಕ್ಷೇತ್ರದಲ್ಲಿ ಕಳಪೆ ಪದರ್ಶನ ಹಿನ್ನೆಲೆ ಪಕ್ಷಬಿಟ್ಟು ಬೆಂಗಳೂರು ಕಡೆಗೆ ಮುಖಮಾಡಿದ್ದರು. ಅವರ ಸೋಲು ಪಕ್ಕಾ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಫಲಿತಾಂಶ ಶೋಭಾ ಕರಂದ್ಲಾಜೆಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ.

ಬೆಂಗಳೂರು ಸೆಂಟ್ರಲ್‌

ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್‌ 27,899 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಆರಂಭದಿಂದ ಮುನ್ನಡೆಯನ್ನು ಕಾಯ್ದುಕೊಂಡ ಮನ್ಸೂರ್‌ ಅಲಿ ಖಾನ್‌ ಒಂದು ಹಂತದಲ್ಲಿ ಗೆಲುವನ್ನು ಸಾಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ವೇಳೆ ಚುನಾವಣೆ ಫಲಿತಾಂಶದ ಚಿತ್ರಣ ಬದಲಾಗಿದ್ದು ಪಿ.ಸಿ ಮೋಹನ್‌ ಗೆಲುವನ್ನು ಸಾಧಿಸಿದ್ದಾರೆ. ಬೆಂಗಳೂರು ಸೆಂಟ್ರಲ್‌ನಲ್ಲೂ ಮೂರನೇ ಸ್ಥಾನದಲ್ಲಿ ನೋಟಾ ಇದ್ದು, ರಾಜ್ಯದಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ನೋಟಾ ಪರ ಮತ ಚಲಾವಣೆಯಾಗಿರುವುದು ಕಂಡು ಬಂದಿದೆ.

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...