Homeಕರ್ನಾಟಕರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ: ಬೆಂಗಳೂರಿನ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲು

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ: ಬೆಂಗಳೂರಿನ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲು

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್‌ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್‌ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ.

ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್‌ಗೆ ಗೆಲುವು:

ಬೆಂಗಳೂರು ಗ್ರಾಮಾಂತರದಲ್ಲಿ ಹಾಲಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ವಿರುದ್ಧ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ 2,68.094 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಡಿಕೆ ಬ್ರದಸ್‌ ಪ್ರತಿಷ್ಠೆಯ ಕಣವನ್ನಾಗಿ ಸ್ವೀಕರಿಸಿ ಪ್ರಚಾರ ಮಾಡಿದ್ದರು. ಡಿ.ಕೆ ಸುರೇಶ್‌ ಗೆಲುವು ನಿಶ್ಚಿತ ಎಂದು ಹೇಳಲಾಗಿತ್ತು. ಆದರೆ ಫಲಿತಾಂಶ ಇದೀಗ ಕಾಂಗ್ರೆಸ್‌ ಪಾಲಯದಲ್ಲಿ ಅದರಲ್ಲೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರಲ್ಲಿ ನಿರಾಶೆ ಮೂಡಿಸಿದೆ. ಇದಲ್ಲದೆ 10,633 ಮತಗಳು ನೋಟಾಗೆ ಬಿದ್ದಿದ್ದು, ಕ್ಷೇತ್ರದಲ್ಲಿ ಮೂರನೇ ಸ್ಥಾನದಲ್ಲಿ ನೋಟಾ ಇದೆ.

ಬೆಂಗಳೂರು ದಕ್ಷಿಣ:

ಬೆಂಗಳೂರು ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ತೇಜಸ್ವಿ ಸೂರ್ಯ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ  2,68,028 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ 7,27,537 ಮತಗಳು ತೇಜಸ್ವಿ ಸೂರ್ಯಗೆ ಬಿದ್ದಿದ್ದು, 4,59,460 ಮತಗಳನ್ನು ಸೌಮ್ಯ ರೆಡ್ಡಿ ಪಡೆದಿದ್ದಾರೆ. 7,617 ಮತಗಳು ನೋಟಾಕ್ಕೆ ಬಿದ್ದಿದೆ. ಹಾಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ಪರ ಕ್ಷೇತ್ರದಲ್ಲಿ ಒಲವು ಇತ್ತು, ಆದರೆ ಅಂತಿಮವಾಗಿ ತೇಜಸ್ವಿ ಸೂರ್ಯ ಗೆಲುವನ್ನು ಸಾಧಿಸಿದ್ದಾರೆ.

ಬೆಂಗಳೂರು ಉತ್ತರ:

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೋ.ರಾಜೀವ್‌ ಗೌಡ ಎದುರು 2,62,537 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ ಪರವಾಗಿ 9,74,909 ಮತಗಳು ಚಲಾವಣೆಯಾಗಿದ್ದು, ರಾಜೀವ್‌ ಗೌಡಗೆ 7,12,372 ಮತಗಳು ಸಿಕ್ಕಿದೆ. ಕ್ಷೇತ್ರದಲ್ಲಿ 13,375 ಮತಗಳು ನೋಟಾ ಪರ ಚಲಾವಣೆಯಾಗಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಈ ಹಿಂದೆ ಪ್ರತಿನಿಧಿಸುತ್ತಿದ್ದ ಶೋಭಾ ಕರಂದ್ಲಾಜೆಗೆ ಕ್ಷೇತ್ರದಲ್ಲಿ ಕಳಪೆ ಪದರ್ಶನ ಹಿನ್ನೆಲೆ ಪಕ್ಷಬಿಟ್ಟು ಬೆಂಗಳೂರು ಕಡೆಗೆ ಮುಖಮಾಡಿದ್ದರು. ಅವರ ಸೋಲು ಪಕ್ಕಾ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಫಲಿತಾಂಶ ಶೋಭಾ ಕರಂದ್ಲಾಜೆಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ.

ಬೆಂಗಳೂರು ಸೆಂಟ್ರಲ್‌

ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್‌ 27,899 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಆರಂಭದಿಂದ ಮುನ್ನಡೆಯನ್ನು ಕಾಯ್ದುಕೊಂಡ ಮನ್ಸೂರ್‌ ಅಲಿ ಖಾನ್‌ ಒಂದು ಹಂತದಲ್ಲಿ ಗೆಲುವನ್ನು ಸಾಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ವೇಳೆ ಚುನಾವಣೆ ಫಲಿತಾಂಶದ ಚಿತ್ರಣ ಬದಲಾಗಿದ್ದು ಪಿ.ಸಿ ಮೋಹನ್‌ ಗೆಲುವನ್ನು ಸಾಧಿಸಿದ್ದಾರೆ. ಬೆಂಗಳೂರು ಸೆಂಟ್ರಲ್‌ನಲ್ಲೂ ಮೂರನೇ ಸ್ಥಾನದಲ್ಲಿ ನೋಟಾ ಇದ್ದು, ರಾಜ್ಯದಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ನೋಟಾ ಪರ ಮತ ಚಲಾವಣೆಯಾಗಿರುವುದು ಕಂಡು ಬಂದಿದೆ.

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...