Homeಮುಖಪುಟತಲೆಕೆಳಗಾದ ಎಕ್ಸಿಟ್ ಪೋಲ್ ಸಮೀಕ್ಷೆ: ಲೈವ್ ಟಿವಿಯಲ್ಲಿ ಕಣ್ಣೀರಿಟ್ಟ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್ ಗುಪ್ತಾ

ತಲೆಕೆಳಗಾದ ಎಕ್ಸಿಟ್ ಪೋಲ್ ಸಮೀಕ್ಷೆ: ಲೈವ್ ಟಿವಿಯಲ್ಲಿ ಕಣ್ಣೀರಿಟ್ಟ ಆಕ್ಸಿಸ್ ಮೈ ಇಂಡಿಯಾದ ಪ್ರದೀಪ್ ಗುಪ್ತಾ

- Advertisement -
- Advertisement -

ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ವಿಫಲವಾದ ಹಿನ್ನೆಲೆ ‘ಆಕ್ಸಿಸ್ ಮೈ ಇಂಡಿಯಾ’ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಲೈವ್ ಟಿವಿಯಲ್ಲಿ ಕಣ್ಣೀರಿಟ್ಟಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 361-401 ಸ್ಥಾನಗಳು, ಇಂಡಿಯಾ ಮೈತ್ರಿಕೂಟ 131-166 ಸ್ಥಾನಗಳು ಮತ್ತು ಇತರರು 8-20 ಸ್ಥಾನಗಳನ್ನು ಗೆಲ್ಲಬಹುದು ಎಂದು ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಹೇಳಿತ್ತು.

ಆದರೆ, ಎಕ್ಸಿಟ್ ಪೋಲ್ ಸಂಪೂರ್ಣ ತಲೆಕೆಳಗಾಗಿದೆ. ಇದುವರೆಗಿನ ಮತ ಎಣಿಕೆಯ ಪ್ರಕಾರ, ಎನ್‌ಡಿಎ ಒಕ್ಕೂಟ 293, ಇಂಡಿಯಾ ಮೈತ್ರಿಕೂಟ 233 ಮತ್ತು ಇತರರು 17 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗಾಗಿ, ಇಂಡಿಯಾ ಟುಡೇ ವಾಹಿನಿಯ ಲೈವ್‌ ಟಿವಿ ಡಿಬೇಟ್‌ನಲ್ಲಿ ಪ್ರದೀಪ್ ಗುಪ್ತಾ ಕಣ್ಣೀರಿಟ್ಟಿದ್ದಾರೆ.

ಮತ ಎಣಿಕೆಯ ಮುನ್ನಾದಿನ (ಜೂನ್ 3) ಎಎನ್‌ಐ ಜೊತೆ ಮಾತನಾಡಿದ್ದ ಪ್ರದೀಪ್ ಗುಪ್ತಾ, “ಆಕ್ಸಿಸ್ ಮೈ ಇಂಡಿಯಾ ಕಳೆದ 10 ವರ್ಷಗಳಿಂದ ನಿರಂತರವಾಗಿ ಎಕ್ಸಿಟ್ ಪೋಲ್‌ಗಳನ್ನು ಮಾಡಿದೆ. ಎರಡು ಲೋಕಸಭೆ ಚುನಾವಣೆ ಸೇರಿದಂತೆ 69 ಚುನಾವಣೆಗಳಿಗೆ ಎಕ್ಸಿಟ್ ಪೋಲ್ ಸಮೀಕ್ಷೆ ನಡೆಸಿದ್ದೇವೆ. ಇದುವರೆಗೆ 65 ಬಾರಿ ನಮ್ಮ ಊಹೆ ಸರಿಯಾಗಿದೆ” ಎಂದಿದ್ದರು.

“ಎಕ್ಸಿಟ್ ಪೋಲ್ ವಿಶ್ವಾಸಾರ್ಹತೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತುವ ಜನರು ನಮ್ಮ ದಾಖಲೆಯನ್ನು ನೋಡಬೇಕು. ಅವರು ತೃಪ್ತರಾಗುತ್ತಾರೆ” ಎಂದು ಹೇಳಿದ್ದರು.

ಜೂನ್ 1ರಂದು ಶನಿವಾರದ ಅಂತಿಮ ಸುತ್ತಿನ ಮತದಾನದ ನಂತರ ಪ್ರಕಟಗೊಂಡ ಬಹುಪಾಲು ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ ಭಾರೀ ಮುನ್ನಡೆ ಸಾಧಿಸಲಿದೆ ಎಂದು ಹೇಳಿತ್ತು. ವರದಿಗಳ ಪ್ರಕಾರ, ಒಟ್ಟು 14 ಎಕ್ಸಿಟ್ ಪೋಲ್‌ಗಳನ್ನು ಒಟ್ಟುಗೂಡಿಸಿ ನಡೆಸಿದ ಪೋಲ್‌ ಆಫ್‌ ಪೋಲ್‌ನಲ್ಲೂ ಎನ್‌ಡಿಎ 365 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿತ್ತು.

ಇದನ್ನೂ ಓದಿ : ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ: ಬೆಂಗಳೂರಿನ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...