Homeಸಿನಿಮಾಕ್ರೀಡೆಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

ಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

- Advertisement -
- Advertisement -

ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಬಿಸಿಸಿಐಗೆ ಅಧ್ಯಕ್ಷರಾಗಿ ಆಯ್ಕೆಯೇನೊ ಆಗಿದ್ದಾರೆ. ಆದರೆ ಆ ಆಯ್ಕೆಯ ಹಿಂದೆ ತಡರಾತ್ರಿವರೆಗೆ ನಡೆದ ವಿದ್ಯಮಾನಗಳು ಈಗ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಅಕ್ಟೋಬರ್ 14ರ ರಾತ್ರಿ ಸುಮಾರು 10.30ರವರೆಗೆ ಬಿಸಿಬಿಸಿ ಚರ್ಚೆಗಳು ನಡೆದ ನಂತರವೇ ಗಂಗೂಲಿ ಮತ್ತು ಬ್ರಿಜೇಶ್ ಪಟೇಲ್ ನಡುವಿನ ಉಮೇದುವಾರಿಕೆ ಇತ್ಯರ್ಥಕ್ಕೆ ಬಂದು ದಾದಾ ಬಿಸಿಸಿಐ ಅಧ್ಯಕ್ಷರೆಂದು ಆಯ್ಕೆಯಾಯ್ತು. ಆದರೆ ಅವತ್ತು ಸಂಜೆಯವರೆಗೂ ಅಧ್ಯಕ್ಷಗಿರಿಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದದ್ದು ಕರ್ನಾಟಕದ ಬ್ರಿಜೇಶ್ ಪಟೇಲ್ ಹೆಸರು. ಯಾಕೆಂದರೆ ಬ್ರಿಜೇಶ್ ಪಟೇಲ್ ಗೆ ಬೆನ್ನೆಲುಬಾಗಿ ನಿಂತದ್ದು ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್. ಇವತ್ತಿಗೂ ಇಂಡಿಯಾ ಕ್ರಿಕೆಟ್ ಅಡ್ಮಿನಿಸ್ಟ್ರೇಷನ್ ಮೇಲೆ ಶ್ರೀನಿವಾಸನ್ ಅವರಿಗೆ ಬಿಗಿ ಹಿಡಿತವಿದೆ. ಹಾಗಾಗಿಯೇ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ಪೂರ್ವ ಭಾರತದ ಹಲವು ರಾಜ್ಯಗಳ ಕ್ರಿಕೆಟ್ ಅಸೋಸಿಯೇಷನ್ ಗಳು ಬ್ರಿಜೇಶ್ ಪಟೇಲ್ ಗೆ ಬೆಂಬಲ ಸೂಚಿಸಿದ್ದವು.

ಸ್ವತಃ ಗಂಗೂಲಿಗೇ ತಾನು ಆಯ್ಕೆಯಾಗುವ ವಿಶ್ವಾಸ ಇರಲಿಲ್ಲ ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.”ರಾತ್ರಿ ಹತ್ತೂವರೆಗೆ ನನಗೆ ಫೋನ್ ಮಾಡಿ ಹೇಳಿದಾಗ ನಂಬಲೇ ಆಗಲಿಲ್ಲ. ಅಲ್ಲಿವರೆಗೂ ನಾನು ಚೇರ್ಮನ್ ಆಗ್ತೀನಿ ಅನ್ನೋ ವಿಶ್ವಾಸ ಇರಲಿಲ್ಲ” ಎಂಬ ಗಂಗೂಲಿಯ ಮಾತುಗಳು ಇಡೀ ಆಯ್ಕೆಯನ್ನು ಅನುಮಾನಿಸುವಂತೆ ಮಾಡುತ್ತವೆ. ಹಾಗಿದ್ದರೆ ಕೊನೇ ಕ್ಷಣದಲ್ಲಿ ಇಡೀ ಸಿನೇರಿಯಾವನ್ನೇ ಬದಲಾಯಿಸಿದ್ದು ಯಾರು? ಯಾವ ಲಾಭಕ್ಕಾಗಿ? ಇದರ ಹಿಂದೆ ಏನಾದರು ರಾಜಕೀಯ ಲೆಕ್ಕಾಚಾರಗಳಿವೆಯೇ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವಾಗಿ ನಿಲ್ಲೋದು ಕೇಂದ್ರ ಸಚಿವ ಅನುರಾಗ್ ಠಾಕೂರ್!

ಮೋದಿಯವರ ಸಂಪುಟದಲ್ಲಿ ಹಣಕಾಸು ರಾಜ್ಯ ಖಾತೆ ಸಚಿವರಾಗಿರುವ ಅನುರಾಗ್ ಠಾಕೂರ್ ಈ ಹಿಂದೆ ಇದೇ ಬಿಸಿಸಿಐನ ಅಧ್ಯಕ್ಷರಾಗಿದ್ದಂತವರು. ಹಾಗಾಗಿ ಅವತ್ತು ನಡೆದ ಸಭೆಗೆ ಹೋಗುವ ಹಕ್ಕು, ಅರ್ಹತೆಗಳು ಅವರಿಗಿದ್ದವು. ಅವರು ಸಭೆಗೆ ಬಂದ ನಂತರವೇ ಇಡೀ ವಾತಾವರಣ ತಲೆಕೆಳಗಾಯಿತು ಎನ್ನುತ್ತಿವೆ ಮೂಲಗಳು. ಮೇಲಿನಿಂದ ಆದೇಶವನ್ನು ಹೊತ್ತು ತಂದಂತಿದ್ದ ಅವರ ದೃಢ ನಿಲುವು ಗಂಗೂಲಿ ಪರ ವ್ಯಕ್ತವಾಗುತ್ತಿದ್ದಂತೆಯೇ ಬ್ರಿಜೇಶ್ ಪಟೇಲ್ ಪರವಾಗಿ ನಿಂತಿದ್ದವರು ಒಬ್ಬೊಬ್ಬರಾಗಿ ಗಂಗೂಲಿ ಬೆನ್ನ ಹಿಂದಕ್ಕೆ ಸರಿದುಕೊಂಡಿದ್ದರು. ಸ್ವತಃ ಶ್ರೀನಿವಾಸನ್ ಅಸಹಾಯಕರಾಗಬೇಕಾಗಿ ಬಂತು ಎನ್ನುತ್ತಾರೆ ಸಭೆಯಲ್ಲಿ ಭಾಗಿಯಾಗಿದ್ದವರೊಬ್ಬರು. ಅಲ್ಲಿಂದಾಚೆಗೆ ಶ್ರೀನಿವಾಸನ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಮುಖಕ್ಕೆ ಮುಖ ಕೊಟ್ಟು ಮಾತಾಡಲಿಲ್ಲವಾದರು ಗಂಗೂಲಿ ಅವಿರೋಧ ಆಯ್ಕೆಗೆ ಸಮ್ಮತಿ ಸೂಚಿಸಿದರು ಎನ್ನುವ ಮೂಲಗಳು, ಒಂದು ಹಂತದಲ್ಲಿ ಏಕಪಕ್ಷೀಯ ತೀರ್ಪು ನೀಡುವಂತೆ “ಗಂಗೂಲಿ ಬಿಸಿಸಿಐ ಪ್ರೆಸಿಡೆಂಟ್ ಆಗಲು ಸಹಕಾರ ಕೊಡಿ, ಅದಕ್ಕೆ ಬದಲಾಗಿ ನೀವು (ಬ್ರಿಜೇಶ್ ರತ್ತ ಬೆರಳು ತೋರಿ) ಐಪಿಎಲ್ ಚೇರ್ಮನ್ ಆಗಿ” ಎಂಬ ಸಂಧಾನ ಸೂತ್ರವನ್ನು ಮುಂದಿಟ್ಟಾಗ ಎಲ್ಲರೂ ಒಪ್ಪಿಕೊಳ್ಳಬೇಕಾಯ್ತು ಎಂಬುದನ್ನೂ ಬಯಲುಗೊಳಿಸಿವೆ.

ಅನುರಾಗ್ ಠಾಕೂರ್ ವಿರುದ್ಧ ಸಿಡಿದೇಳಬಹುದಾದ ಎಲ್ಲಾ ಸಾಮರ್ಥ್ಯವೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮೂಲದ ಶ್ರೀನಿವಾಸನ್ ಅವರಿಗೆ ಇದ್ದವು. ಆದರೆ ಈ ಇಬ್ಬರೂ ಒಂದು ವಿಚಾರದಲ್ಲಿ ಸಮಾನ ಮನಸ್ಕರೂ ಹೌದು. ಬಿಸಿಸಿಐನಲ್ಲಿ ಹಣದ ಹರಿದಾಟ ಹೆಚ್ಚಾದಂತೆ ಭ್ರಷ್ಟಾಚಾರವೂ ಮಿತಿ ಮೀರಿತ್ತು. ಐಪಿಎಲ್ ಕಾಲಿಟ್ಟ ನಂತರವಂತೂ ಹಣದ ಹೊಳೆಯೇ ಹರಿದಾಡಲು ಶುರುವಾಗಿತ್ತು. ಆಗ ಮಧ್ಯಪ್ರವೇಶಿಸಿದ್ದ ಸುಪ್ರೀಂ ಕೋರ್ಟ್ 2017ರಲ್ಲಿ ನಾಲ್ಕು ಜನರ ಕಮಿಟಿ ಆಫ್ ಅಡ್ಮಿನಿಸ್ಟ್ರೇಟರ್'  ಅನ್ನು ರಚಿಸಿ, ಅವರ ನಿಗಾವಣೆಯಲ್ಲೆ ಆಡಳಿತ ನಡೆಸಬೇಕು, ಮುಖ್ಯವಾಗಿ ಲೋಧಾ ಸಮಿತಿಯ ಶಿಫಾರಸ್ಸುಗಳು ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದಿತ್ತು. ಮಾಜಿ ಮಹಾ ಲೇಖಪಾಲಕರಾದ ವಿನೋದ್ ರೈ ನೇತೃತ್ವದ ಸಮಿತಿಗೆ ರಾಮಚಂದ್ರ ಗುಹಾ, ವಿಕ್ರಂ ಲಿಮಾಯೆ ಮತ್ತು ಡಯಾನಾ ಎಡುಲ್ಜಿಯವರನ್ನು ಸದಸ್ಯರನ್ನಾಗಿ ನ್ಯಾಯಾಲಯವೇ ನೇಮಕ ಮಾಡಿತ್ತು. ಆ ಸಮಿತಿ ಬಂದ ನಂತರ ಬಿಸಿಸಿಐನ ಘಟಾನುಘಟಿಗಳ ಕೈಕಟ್ಟಿ ಹಾಕಿದಂತಾಗಿತ್ತು. ಸಾಕಷ್ಟು `ಬಿಸಿಸಿಐ ಬಿಗ್ ಹ್ಯಾಂಡ್’ಗಳು ಈ ಸಮಿತಿ ತೊಲಗಿದರೆ ಸಾಕು ಎಂದು ಕನವರಿಸುತ್ತಿದ್ದಾರೆ. ಅಂತವರಲ್ಲಿ ಠಾಕೂರ್ ಮತ್ತು ಶ್ರೀನಿವಾಸ್ ಕೂಡಾ ಇದ್ದಾರೆ. ಸಮಿತಿಯೇ ನಿಜವಾದ ದುಶ್ಮನ್ ಆಗಿರುವಾಗ, ಅದರ ವಿರುದ್ಧ ಹೋರಾಡಲು ಸಜ್ಜಾಗುತ್ತಿರುವ ಸಂದರ್ಭದಲ್ಲಿ ನಮ್ಮನಮ್ಮಲ್ಲೆ ಮನಸ್ತಾಪವೇಕೆ ಎಂಬ ಸೂತ್ರದಡಿ ಶ್ರೀನಿವಾಸನ್ ಕೂಡಾ ಠಾಕೂರ್ ಗೆ ಎದುರಾಡದೆ ಕೊಟ್ಟು-ತೆಗೆದುಕೊಳ್ಳುವ ಆಫರ್ ಗೆ ಒಪ್ಪಿ ಕೊಂಡಿದ್ದಾರೆ.

ಅದೇನೊ ಸರಿ, ಆದ್ರೆ ಅನುರಾಗ್ ಠಾಕೂರ್ ಗಂಗೂಲಿ ಬರ ಬ್ಯಾಟಿಂಗ್ ಮಾಡಿದ್ದೇಕೆ? ಇದೇ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹಸಚಿವರ ಅಮಿತ್ ಶಾರ ಮಗ ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೂ ಇದಕ್ಕೂ ಏನಾದರು ನಂಟಿದೆಯಾ?

ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಆಯ್ಕೆ ಖಚಿತವಾಗುವುದಕ್ಕೂ ಹಿಂದಿನ ದಿನವಷ್ಟೇ ಮುಂಬೈ ನಗರಿಯಲ್ಲಿ ಅಮಿತ್ ಶಾ, ಗಂಗೂಲಿಯನ್ನು ಭೇಟಿಯಾಗಿ ಚರ್ಚಿಸಿದ್ದೇ ಈ ಎಲ್ಲಾ ಪ್ರಶ್ನೆಗಳು ಹುಟ್ಟಲು ಮೂಲ ಕಾರಣ. 2021ರಲ್ಲಿ ಎದುರಾಗಲಿರುವ ಗಂಗೂಲಿಯ ತವರು ರಾಜ್ಯ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಮಣ್ಣು ಮುಕ್ಕಿಸಲು ಗಂಗೂಲಿಯನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ಗಾಳ ಹಾಕಿದೆಯಾ? ಅದರ ಭಾಗವಾಗಿಯೇ ಬಿಸಿಸಿಐ ಅಧ್ಯಕ್ಷಗಿರಿಯನ್ನು ಗಂಗೂಲಿಗೆ ಕೊಟ್ಟು ಬಂಗಾಳಿಗರ ಮನಗೆಲ್ಲುವ ಜೊತೆಗೆ, ಬಿಜೆಪಿಯಿಂದ ಅವರನ್ನು ಕಣಕ್ಕಿಳಿಸಿ, ಸ್ಟಾರ್ ಪ್ರಚಾರಕರನ್ನಾಗೂ ಬಳಸುವ ಯೋಜನೆ ಶಾ ಭೇಟಿಯ ಹಿಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಈ ವಾದವನ್ನು ತಳ್ಳಿಹಾಕಿರುವ ಗಂಗೂಲಿ “ನಾನು ಅಮಿತ್ ಶಾರನ್ನು ಇದೇ ಮೊದಲ ಬಾರಿಗೆ ಭೇಟಿಯಾದದ್ದೇನೊ ನಿಜ. ಆದರೆ ಬಿಸಿಸಿಐ ಹುದ್ದೆಯ ಚರ್ಚೆಯೇ ಅಲ್ಲಿ ನಡೆಯಲಿಲ್ಲ. ನೀವು ಈ ಉಪಕಾರ ಮಾಡಿದ್ರ ನಾವು ಆ ಉಪಕಾರ ಮಾಡ್ತೀವಿ' ಅನ್ನೋ ಮಾತುಕತೆಯೇ ಅಲ್ಲಿ ನಡೆಯಲಿಲ್ಲ" ಎಂದಿದ್ದಾರೆ. ಅದೇನೆ ಆಗಲಿ ಬಿಸಿಸಿಐ ಅಧ್ಯಕ್ಷರಾಗಿರುವ ದಾದಾನ ಟೀಮಿನಲ್ಲಿ, ಶಾರ ಮಗ ಜಯ್ ಶಾ ಪ್ರಧಾನ ಪಾತ್ರ ವಹಿಸಲಿದ್ದಾರೆ.

`ಸರ್ವಂ ರಾಜಕೀಯಂ’ ಎನ್ನುವಂತಾಗಿರುವ ಇವತ್ತಿನ ಸಂದರ್ಭದಲ್ಲಿ ಬಿಸಿಸಿಐ ಅಂಗಳದಿಂದ ಎದ್ದು ಬರುತ್ತಿರುವ ಯಾವ ಸುದ್ದಿಯನ್ನೂ ತಳ್ಳಿಹಾಕಲಿಕ್ಕಾಗುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...