Homeಸಿನಿಮಾಕ್ರೀಡೆಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

ಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

- Advertisement -
- Advertisement -

ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಬಿಸಿಸಿಐಗೆ ಅಧ್ಯಕ್ಷರಾಗಿ ಆಯ್ಕೆಯೇನೊ ಆಗಿದ್ದಾರೆ. ಆದರೆ ಆ ಆಯ್ಕೆಯ ಹಿಂದೆ ತಡರಾತ್ರಿವರೆಗೆ ನಡೆದ ವಿದ್ಯಮಾನಗಳು ಈಗ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಅಕ್ಟೋಬರ್ 14ರ ರಾತ್ರಿ ಸುಮಾರು 10.30ರವರೆಗೆ ಬಿಸಿಬಿಸಿ ಚರ್ಚೆಗಳು ನಡೆದ ನಂತರವೇ ಗಂಗೂಲಿ ಮತ್ತು ಬ್ರಿಜೇಶ್ ಪಟೇಲ್ ನಡುವಿನ ಉಮೇದುವಾರಿಕೆ ಇತ್ಯರ್ಥಕ್ಕೆ ಬಂದು ದಾದಾ ಬಿಸಿಸಿಐ ಅಧ್ಯಕ್ಷರೆಂದು ಆಯ್ಕೆಯಾಯ್ತು. ಆದರೆ ಅವತ್ತು ಸಂಜೆಯವರೆಗೂ ಅಧ್ಯಕ್ಷಗಿರಿಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದದ್ದು ಕರ್ನಾಟಕದ ಬ್ರಿಜೇಶ್ ಪಟೇಲ್ ಹೆಸರು. ಯಾಕೆಂದರೆ ಬ್ರಿಜೇಶ್ ಪಟೇಲ್ ಗೆ ಬೆನ್ನೆಲುಬಾಗಿ ನಿಂತದ್ದು ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್. ಇವತ್ತಿಗೂ ಇಂಡಿಯಾ ಕ್ರಿಕೆಟ್ ಅಡ್ಮಿನಿಸ್ಟ್ರೇಷನ್ ಮೇಲೆ ಶ್ರೀನಿವಾಸನ್ ಅವರಿಗೆ ಬಿಗಿ ಹಿಡಿತವಿದೆ. ಹಾಗಾಗಿಯೇ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ಪೂರ್ವ ಭಾರತದ ಹಲವು ರಾಜ್ಯಗಳ ಕ್ರಿಕೆಟ್ ಅಸೋಸಿಯೇಷನ್ ಗಳು ಬ್ರಿಜೇಶ್ ಪಟೇಲ್ ಗೆ ಬೆಂಬಲ ಸೂಚಿಸಿದ್ದವು.

ಸ್ವತಃ ಗಂಗೂಲಿಗೇ ತಾನು ಆಯ್ಕೆಯಾಗುವ ವಿಶ್ವಾಸ ಇರಲಿಲ್ಲ ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.”ರಾತ್ರಿ ಹತ್ತೂವರೆಗೆ ನನಗೆ ಫೋನ್ ಮಾಡಿ ಹೇಳಿದಾಗ ನಂಬಲೇ ಆಗಲಿಲ್ಲ. ಅಲ್ಲಿವರೆಗೂ ನಾನು ಚೇರ್ಮನ್ ಆಗ್ತೀನಿ ಅನ್ನೋ ವಿಶ್ವಾಸ ಇರಲಿಲ್ಲ” ಎಂಬ ಗಂಗೂಲಿಯ ಮಾತುಗಳು ಇಡೀ ಆಯ್ಕೆಯನ್ನು ಅನುಮಾನಿಸುವಂತೆ ಮಾಡುತ್ತವೆ. ಹಾಗಿದ್ದರೆ ಕೊನೇ ಕ್ಷಣದಲ್ಲಿ ಇಡೀ ಸಿನೇರಿಯಾವನ್ನೇ ಬದಲಾಯಿಸಿದ್ದು ಯಾರು? ಯಾವ ಲಾಭಕ್ಕಾಗಿ? ಇದರ ಹಿಂದೆ ಏನಾದರು ರಾಜಕೀಯ ಲೆಕ್ಕಾಚಾರಗಳಿವೆಯೇ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವಾಗಿ ನಿಲ್ಲೋದು ಕೇಂದ್ರ ಸಚಿವ ಅನುರಾಗ್ ಠಾಕೂರ್!

ಮೋದಿಯವರ ಸಂಪುಟದಲ್ಲಿ ಹಣಕಾಸು ರಾಜ್ಯ ಖಾತೆ ಸಚಿವರಾಗಿರುವ ಅನುರಾಗ್ ಠಾಕೂರ್ ಈ ಹಿಂದೆ ಇದೇ ಬಿಸಿಸಿಐನ ಅಧ್ಯಕ್ಷರಾಗಿದ್ದಂತವರು. ಹಾಗಾಗಿ ಅವತ್ತು ನಡೆದ ಸಭೆಗೆ ಹೋಗುವ ಹಕ್ಕು, ಅರ್ಹತೆಗಳು ಅವರಿಗಿದ್ದವು. ಅವರು ಸಭೆಗೆ ಬಂದ ನಂತರವೇ ಇಡೀ ವಾತಾವರಣ ತಲೆಕೆಳಗಾಯಿತು ಎನ್ನುತ್ತಿವೆ ಮೂಲಗಳು. ಮೇಲಿನಿಂದ ಆದೇಶವನ್ನು ಹೊತ್ತು ತಂದಂತಿದ್ದ ಅವರ ದೃಢ ನಿಲುವು ಗಂಗೂಲಿ ಪರ ವ್ಯಕ್ತವಾಗುತ್ತಿದ್ದಂತೆಯೇ ಬ್ರಿಜೇಶ್ ಪಟೇಲ್ ಪರವಾಗಿ ನಿಂತಿದ್ದವರು ಒಬ್ಬೊಬ್ಬರಾಗಿ ಗಂಗೂಲಿ ಬೆನ್ನ ಹಿಂದಕ್ಕೆ ಸರಿದುಕೊಂಡಿದ್ದರು. ಸ್ವತಃ ಶ್ರೀನಿವಾಸನ್ ಅಸಹಾಯಕರಾಗಬೇಕಾಗಿ ಬಂತು ಎನ್ನುತ್ತಾರೆ ಸಭೆಯಲ್ಲಿ ಭಾಗಿಯಾಗಿದ್ದವರೊಬ್ಬರು. ಅಲ್ಲಿಂದಾಚೆಗೆ ಶ್ರೀನಿವಾಸನ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಮುಖಕ್ಕೆ ಮುಖ ಕೊಟ್ಟು ಮಾತಾಡಲಿಲ್ಲವಾದರು ಗಂಗೂಲಿ ಅವಿರೋಧ ಆಯ್ಕೆಗೆ ಸಮ್ಮತಿ ಸೂಚಿಸಿದರು ಎನ್ನುವ ಮೂಲಗಳು, ಒಂದು ಹಂತದಲ್ಲಿ ಏಕಪಕ್ಷೀಯ ತೀರ್ಪು ನೀಡುವಂತೆ “ಗಂಗೂಲಿ ಬಿಸಿಸಿಐ ಪ್ರೆಸಿಡೆಂಟ್ ಆಗಲು ಸಹಕಾರ ಕೊಡಿ, ಅದಕ್ಕೆ ಬದಲಾಗಿ ನೀವು (ಬ್ರಿಜೇಶ್ ರತ್ತ ಬೆರಳು ತೋರಿ) ಐಪಿಎಲ್ ಚೇರ್ಮನ್ ಆಗಿ” ಎಂಬ ಸಂಧಾನ ಸೂತ್ರವನ್ನು ಮುಂದಿಟ್ಟಾಗ ಎಲ್ಲರೂ ಒಪ್ಪಿಕೊಳ್ಳಬೇಕಾಯ್ತು ಎಂಬುದನ್ನೂ ಬಯಲುಗೊಳಿಸಿವೆ.

ಅನುರಾಗ್ ಠಾಕೂರ್ ವಿರುದ್ಧ ಸಿಡಿದೇಳಬಹುದಾದ ಎಲ್ಲಾ ಸಾಮರ್ಥ್ಯವೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮೂಲದ ಶ್ರೀನಿವಾಸನ್ ಅವರಿಗೆ ಇದ್ದವು. ಆದರೆ ಈ ಇಬ್ಬರೂ ಒಂದು ವಿಚಾರದಲ್ಲಿ ಸಮಾನ ಮನಸ್ಕರೂ ಹೌದು. ಬಿಸಿಸಿಐನಲ್ಲಿ ಹಣದ ಹರಿದಾಟ ಹೆಚ್ಚಾದಂತೆ ಭ್ರಷ್ಟಾಚಾರವೂ ಮಿತಿ ಮೀರಿತ್ತು. ಐಪಿಎಲ್ ಕಾಲಿಟ್ಟ ನಂತರವಂತೂ ಹಣದ ಹೊಳೆಯೇ ಹರಿದಾಡಲು ಶುರುವಾಗಿತ್ತು. ಆಗ ಮಧ್ಯಪ್ರವೇಶಿಸಿದ್ದ ಸುಪ್ರೀಂ ಕೋರ್ಟ್ 2017ರಲ್ಲಿ ನಾಲ್ಕು ಜನರ ಕಮಿಟಿ ಆಫ್ ಅಡ್ಮಿನಿಸ್ಟ್ರೇಟರ್'  ಅನ್ನು ರಚಿಸಿ, ಅವರ ನಿಗಾವಣೆಯಲ್ಲೆ ಆಡಳಿತ ನಡೆಸಬೇಕು, ಮುಖ್ಯವಾಗಿ ಲೋಧಾ ಸಮಿತಿಯ ಶಿಫಾರಸ್ಸುಗಳು ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದಿತ್ತು. ಮಾಜಿ ಮಹಾ ಲೇಖಪಾಲಕರಾದ ವಿನೋದ್ ರೈ ನೇತೃತ್ವದ ಸಮಿತಿಗೆ ರಾಮಚಂದ್ರ ಗುಹಾ, ವಿಕ್ರಂ ಲಿಮಾಯೆ ಮತ್ತು ಡಯಾನಾ ಎಡುಲ್ಜಿಯವರನ್ನು ಸದಸ್ಯರನ್ನಾಗಿ ನ್ಯಾಯಾಲಯವೇ ನೇಮಕ ಮಾಡಿತ್ತು. ಆ ಸಮಿತಿ ಬಂದ ನಂತರ ಬಿಸಿಸಿಐನ ಘಟಾನುಘಟಿಗಳ ಕೈಕಟ್ಟಿ ಹಾಕಿದಂತಾಗಿತ್ತು. ಸಾಕಷ್ಟು `ಬಿಸಿಸಿಐ ಬಿಗ್ ಹ್ಯಾಂಡ್’ಗಳು ಈ ಸಮಿತಿ ತೊಲಗಿದರೆ ಸಾಕು ಎಂದು ಕನವರಿಸುತ್ತಿದ್ದಾರೆ. ಅಂತವರಲ್ಲಿ ಠಾಕೂರ್ ಮತ್ತು ಶ್ರೀನಿವಾಸ್ ಕೂಡಾ ಇದ್ದಾರೆ. ಸಮಿತಿಯೇ ನಿಜವಾದ ದುಶ್ಮನ್ ಆಗಿರುವಾಗ, ಅದರ ವಿರುದ್ಧ ಹೋರಾಡಲು ಸಜ್ಜಾಗುತ್ತಿರುವ ಸಂದರ್ಭದಲ್ಲಿ ನಮ್ಮನಮ್ಮಲ್ಲೆ ಮನಸ್ತಾಪವೇಕೆ ಎಂಬ ಸೂತ್ರದಡಿ ಶ್ರೀನಿವಾಸನ್ ಕೂಡಾ ಠಾಕೂರ್ ಗೆ ಎದುರಾಡದೆ ಕೊಟ್ಟು-ತೆಗೆದುಕೊಳ್ಳುವ ಆಫರ್ ಗೆ ಒಪ್ಪಿ ಕೊಂಡಿದ್ದಾರೆ.

ಅದೇನೊ ಸರಿ, ಆದ್ರೆ ಅನುರಾಗ್ ಠಾಕೂರ್ ಗಂಗೂಲಿ ಬರ ಬ್ಯಾಟಿಂಗ್ ಮಾಡಿದ್ದೇಕೆ? ಇದೇ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹಸಚಿವರ ಅಮಿತ್ ಶಾರ ಮಗ ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೂ ಇದಕ್ಕೂ ಏನಾದರು ನಂಟಿದೆಯಾ?

ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಆಯ್ಕೆ ಖಚಿತವಾಗುವುದಕ್ಕೂ ಹಿಂದಿನ ದಿನವಷ್ಟೇ ಮುಂಬೈ ನಗರಿಯಲ್ಲಿ ಅಮಿತ್ ಶಾ, ಗಂಗೂಲಿಯನ್ನು ಭೇಟಿಯಾಗಿ ಚರ್ಚಿಸಿದ್ದೇ ಈ ಎಲ್ಲಾ ಪ್ರಶ್ನೆಗಳು ಹುಟ್ಟಲು ಮೂಲ ಕಾರಣ. 2021ರಲ್ಲಿ ಎದುರಾಗಲಿರುವ ಗಂಗೂಲಿಯ ತವರು ರಾಜ್ಯ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಮಣ್ಣು ಮುಕ್ಕಿಸಲು ಗಂಗೂಲಿಯನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ಗಾಳ ಹಾಕಿದೆಯಾ? ಅದರ ಭಾಗವಾಗಿಯೇ ಬಿಸಿಸಿಐ ಅಧ್ಯಕ್ಷಗಿರಿಯನ್ನು ಗಂಗೂಲಿಗೆ ಕೊಟ್ಟು ಬಂಗಾಳಿಗರ ಮನಗೆಲ್ಲುವ ಜೊತೆಗೆ, ಬಿಜೆಪಿಯಿಂದ ಅವರನ್ನು ಕಣಕ್ಕಿಳಿಸಿ, ಸ್ಟಾರ್ ಪ್ರಚಾರಕರನ್ನಾಗೂ ಬಳಸುವ ಯೋಜನೆ ಶಾ ಭೇಟಿಯ ಹಿಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಈ ವಾದವನ್ನು ತಳ್ಳಿಹಾಕಿರುವ ಗಂಗೂಲಿ “ನಾನು ಅಮಿತ್ ಶಾರನ್ನು ಇದೇ ಮೊದಲ ಬಾರಿಗೆ ಭೇಟಿಯಾದದ್ದೇನೊ ನಿಜ. ಆದರೆ ಬಿಸಿಸಿಐ ಹುದ್ದೆಯ ಚರ್ಚೆಯೇ ಅಲ್ಲಿ ನಡೆಯಲಿಲ್ಲ. ನೀವು ಈ ಉಪಕಾರ ಮಾಡಿದ್ರ ನಾವು ಆ ಉಪಕಾರ ಮಾಡ್ತೀವಿ' ಅನ್ನೋ ಮಾತುಕತೆಯೇ ಅಲ್ಲಿ ನಡೆಯಲಿಲ್ಲ" ಎಂದಿದ್ದಾರೆ. ಅದೇನೆ ಆಗಲಿ ಬಿಸಿಸಿಐ ಅಧ್ಯಕ್ಷರಾಗಿರುವ ದಾದಾನ ಟೀಮಿನಲ್ಲಿ, ಶಾರ ಮಗ ಜಯ್ ಶಾ ಪ್ರಧಾನ ಪಾತ್ರ ವಹಿಸಲಿದ್ದಾರೆ.

`ಸರ್ವಂ ರಾಜಕೀಯಂ’ ಎನ್ನುವಂತಾಗಿರುವ ಇವತ್ತಿನ ಸಂದರ್ಭದಲ್ಲಿ ಬಿಸಿಸಿಐ ಅಂಗಳದಿಂದ ಎದ್ದು ಬರುತ್ತಿರುವ ಯಾವ ಸುದ್ದಿಯನ್ನೂ ತಳ್ಳಿಹಾಕಲಿಕ್ಕಾಗುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...