Homeಮುಖಪುಟ2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

- Advertisement -
- Advertisement -

ಲೋಕಸಭಾ ಚುನಾವಣೆ ಸಂಫೂರ್ಣ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 293 ಸ್ಥಾನಗಳನ್ನು, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 233 ಸ್ಥಾನಗಳನ್ನು ಮತ್ತು ಇತರರು 17 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಎನ್‌ಡಿಎಗೆ ಸರಕಾರ ರಚನೆಗೆ ಬಹುಮತ ಸಿಕ್ಕಿದ್ದರೂ ಬಿಜೆಪಿಯ ವಿಜಯದ ನಾಗಲೋಟಕ್ಕೆ ಇಂಡಿಯಾ ಮೈತ್ರಿಕೂಟ ಬ್ರೇಕ್‌ ಹಾಕಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಸಂಪೂರ್ಣ ಬಹುಮತದ ಸರಕಾರವನ್ನು ರಚಿಸಿತ್ತು. ಈ ಬಾರಿ ಬಿಜೆಪಿ ಮತ್ತು ಎನ್‌ಡಿಎ 350ಕ್ಕೂ ಅಧಿಕ ದಾಖಲೆಯ ಅಂಕಿಯನ್ನು ದಾಟಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಜನಾದೇಶದ ಅಂತಿಮ ಫಲಿತಾಂಶವು ಇದೀಗ ಎಲ್ಲವೂ ತಲೆಕೆಳಗಾಗಿರುವುದನ್ನು ಸೂಚಿಸಿದೆ.

2019ರ  ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬಿಜೆಪಿ 63 ಸ್ಥಾನಗಳನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ ಈ ಬಾರಿ 99 ಸ್ಥಾನಗಳನ್ನು ಪಡೆದುಕೊಂಡಿದ್ದು, 2019ರಲ್ಲಿ ಕಾಂಗ್ರೆಸ್‌ ಬರೀ 52 ಸ್ಥಾನಗಳನ್ನು ಪಡೆದುಕೊಂಡಿತ್ತು, ಈ ಬಾರಿ 47 ಸ್ಥಾನಗಳು ಕಾಂಗ್ರೆಸ್‌ಗೆ ಹೆಚ್ಚಳವಾಗಿದೆ. ಇದಲ್ಲದೆ 80 ಕ್ಷೇತ್ರಗಳಿರುವ ಅತಿದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಬಿಜೆಪಿಗೆ 50 ಸ್ಥಾನಗಳು ಸಿಗುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು, ಈ ಫಲಿತಾಂಶಗಳು ಉಲ್ಟಾ ಹೊಡೆದಿದ್ದು, ಬಿಜೆಪಿಗೆ ಉತ್ತರಪ್ರದೇಶದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಉತ್ತರಪ್ರದೇಶದಲ್ಲಿ 43 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು 33 ಸ್ಥಾನಗಳಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ.

ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಎನ್‌ಡಿಎಗೆ 361ರಿಂದ 401 ಸ್ಥಾನಗಳು ಬರಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದ್ದರು. ಆದರೆ, ಜೂನ್ 4ರಂದು AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ ಅವರು ನುಡಿದಿದ್ದ ಭವಿಷ್ಯ ಸುಳ್ಳಾಗಿದೆ. ಇದರಿಂದಾಗಿ ಇಂಡಿಯಾ ಟುಡೇ ಚಾನೆಲ್‌ನ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಜೊತೆಗೆ ಚರ್ಚೆ ನಡೆಸುತ್ತಿದ್ದಾಗ ಪ್ರದೀಪ್ ಗುಪ್ತಾ ಕಣ್ಣೀರು ಹಾಕಿರುವುದನ್ನು ಗಮನಿಸಬಹುದಾಗಿದೆ.

2024ರ ಚುನವಾಣೆಯ ಎಕ್ಸಿಟ್ ಪೋಲ್‌ ಫಲಿತಾಂಶದಲ್ಲಿ  ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಎನ್‌ಡಿಎಗೆ 359 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 371 ಸ್ಥಾನಗಳು, ರಿಪಬ್ಲಿಕ್ ಭಾರತ್ ಮ್ಯಾಟ್ರಿಜ್ 353-368 ಸ್ಥಾನಗಳು, ಟಿವಿ 5 ತೆಲುಗು -359 ಸ್ಥಾನಗಳು, ಜನ್‌ ಕೀ ಬಾತ್‌-362-392 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-365 ಸ್ಥಾನಗಳು, ಲೋಕ್‌ ಪೋಲ್‌-325 ರಿಂದ 333,  ನ್ಯೂಸ್ ನೇಷನ್-342-378 ಸ್ಥಾನಗಳನ್ನು ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿತ್ತು. ಎಕ್ಸಿಟ್‌ ಪೋಲ್‌ ಫಲಿತಾಂಶಗಳಲ್ಲಿ ಇಂಡಿಯಾ ಮೈತ್ರಿಕೂಟವು 155ರ ಗಡಿ ದಾಟುವುದನ್ನು ಯಾವ ಮಾಧ್ಯಮ ಸಮೀಕ್ಷೆಗಳು ಕೂಡ ಹೇಳಿಲ್ಲ. ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಸಮೀಕ್ಷೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ 154 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 125 ಸ್ಥಾನಗಳು, ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -118ರಿಂದ 113 ಸ್ಥಾನಗಳು, ಟಿವಿ 5 ತೆಲುಗು- 154 ಸ್ಥಾನಗಳು, ಜನ್‌ ಕೀ ಬಾತ್‌-141ರಿಂದ 161 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-142 ಸ್ಥಾನಗಳು, ಲೋಕ್‌ ಪೋಲ್‌-155 ರಿಂದ 165, ನ್ಯೂಸ್ ನೇಷನ್-ಇಂಡಿಯಾ 153 ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟಕ್ಕೆ ನೀಡಿತ್ತು. ಆದರೆ ಈ ಫಲಿತಾಂಶಗಳೆಲ್ಲ ಇದೀಗ ಹುಸಿಯಾಗಿದೆ. ಎಕ್ಸಿಟ್‌ ಪೋಲ್‌ಗಳ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಮೂಡಿದೆ.

ಇದನ್ನು ಓದಿ: ಲೋಕಸಭೆ ಫಲಿತಾಂಶ: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...