Homeಮುಖಪುಟಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ದೂರವಿಡಬೇಕು, ಆದ್ದರಿಂದ ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್‌ ಅವರಿಗೆ ಆಗ್ರಹಿಸಿದ್ದಾರೆ.

ಮೋದಿ ನೇತೃತ್ವದ ಯಾವುದೇ ಸರ್ಕಾರವನ್ನು ಬೆಂಬಲಿಸಬೇಡಿ ಎಂದು ಮಮತಾ ಬ್ಯಾನರ್ಜಿ ಎನ್‌ಡಿಎ ಮೈತ್ರಿಕೂಟದ ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದ್ದಾರೆ. ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿನ ಒಳ್ಳೆಯ ಜನರಿಗೆ ನಾನು ಸಾರ್ವಜನಿಕ ಮನವಿಯನ್ನು ಮಾಡುತ್ತೇನೆ ಮತ್ತು ಸೂಕ್ತ ನಿರ್ಧಾರಕ್ಕೆ ಇದು ಸರಿಯಾದ ಸಮಯ ಎಂದು ಹೇಳಿದ್ದಾರೆ.

ನಾನು ಇಂಡಿಯಾ ಮೈತ್ರಿಕೂಟದ ತಂಡಕ್ಕೆ ಸಹಾಯ ಮಾಡುತ್ತೇನೆ ಮತ್ತು ಮೋದಿ ಹೊರಗಿದ್ದಾರೆ ಮತ್ತು ಇಂಡಿಯಾ ಮೈತ್ರಿಕೂಟವು ಒಳಗಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ. ಏಕೆಂದರೆ ಇಂಡಿಯಾ ಮೈತ್ರಿಯು ಒಳಗಿದ್ದರೆ, ಜನರು ಸುರಕ್ಷಿತವಾಗಿರುತ್ತಾರೆ, ದೇಶವು ಸುರಕ್ಷಿತವಾಗಿರುತ್ತದೆ ಮತ್ತು ಇಂಡಿಯಾ ಮೈತ್ರಿಯು ದೇಶವನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಅಭಿಷೇಕ್ ಬ್ಯಾನರ್ಜಿ ಪಾಲ್ಗೊಳ್ಳಲಿದ್ದಾರೆ. ನಾನು ಅಭಿಷೇಕ್‌ನನ್ನು ಸಭೆಗೆ ಹೋಗಲು ಕೇಳುತ್ತೇನೆ. ಆದರೆ ಹೋಗುವ ಮೊದಲು, ಅವರು ವೈಯಕ್ತಿಕವಾಗಿ ನಾಯಕರನ್ನು ಭೇಟಿ ಮಾಡಬೇಕು. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎಸ್‌ಪಿ) ನಾಯಕ ಶರದ್ ಪವಾರ್ ಸೇರಿದಂತೆ ವಿರೋಧ ಪಕ್ಷದ ಹಲವಾರು ನಾಯಕರನ್ನು ಸಂಪರ್ಕಿಸಿದ್ದೇನೆ ಮತ್ತು ಕಾಂಗ್ರೆಸ್ ನಾಯಕರಿಗೆ ಅಭಿನಂದನಾ ಪತ್ರವನ್ನು ಕಳುಹಿಸಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ, ಅವರು ಕೂಡಲೇ ರಾಜೀನಾಮೆ ನೀಡಬೇಕು. ಭಾರತ ಗೆದ್ದಿದೆ, ಮೋದಿ ಸೋತಿದ್ದಾರೆ. ಪ್ರಧಾನಿ ಅನೇಕ ಪಕ್ಷಗಳನ್ನು ವಿಭಜನೆ ಮಾಡಿದರು, ಈಗ ಜನರು ಅವರ ಬೆನ್ನುಮೂಳೆಯನ್ನು ಮುರಿದಿದ್ದಾರೆ. ಸರ್ಕಾರ ರಚಿಸಲು ಮೋದಿ ಈಗ ಟಿಡಿಪಿ ಮತ್ತು ನಿತೀಶ್ ಕುಮಾರ್‌ ಅವರ ಬೆನ್ನು ಬಿದ್ದಿದ್ದಾರೆ. ಎನ್‌ಡಿಎಯಲ್ಲಿನ ಜನತಾ ದಳ (ಯುನೈಟೆಡ್) ಮತ್ತು ತೆಲುಗು ದೇಶಂ ಪಕ್ಷದಂತಹ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಬೆಂಬಲಿಸಬಾರದು ಎಂದು ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಮಮತಾ ಬ್ಯಾನರ್ಜಿ, ಬಸಿರ್‌ಹತ್ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷದ ಗೆಲುವನ್ನು ಶ್ಲಾಘಿಸಿದರು. ನಮ್ಮ ತಾಯಂದಿರು ಮತ್ತು ಸಹೋದರಿಯರ ಬಗ್ಗೆ ಅಪಪ್ರಚಾರದ ಹೊರತಾಗಿಯೂ ಸಂದೇಶಖಾಲಿ ಇರುವ ಬಸಿರ್ಹತ್ ಲೋಕಸಭಾ ಸ್ಥಾನವನ್ನು ನಾವು ಗೆದ್ದಿದ್ದೇವೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕತ್ವವು ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತನ್ನ ಮುಖ್ಯ ಚುನಾವಣಾ ಅಸ್ತ್ರವಾಗಿ ಬಳಸಿಕೊಂಡಿದೆ. ಆದರೆ ಬಿಜೆಪಿ ಬಸಿರ್‌ಹತ್‌ನಲ್ಲಿ ಮಾತ್ರವಲ್ಲದೆ ದಕ್ಷಿಣ ಬಂಗಾಳದ ಹಲವು ಸ್ಥಳಗಳಲ್ಲಿ ಸೋಲನುಭವಿಸಿದೆ. ಇಷ್ಟೆಲ್ಲ ದೌರ್ಜನ್ಯ, ಭಾರಿ ಮೊತ್ತದ ವೆಚ್ಚ, ಮೋದಿ ಹಾಗೂ ಅಮಿತ್ ಶಾ ಅವರ ಈ ದುರಹಂಕಾರದ ಹೊರತಾಗಿಯೂ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿದೆ ಹಾಗೂ ಮೋದಿ ಪರಾಭವಗೊಂಡಿದ್ದಾರೆ. ಅವರು ಅಯೋಧ್ಯೆಯಲ್ಲೂ ಪರಾಭವಗೊಂಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನು ಓದಿ: 2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...