Homeಮುಖಪುಟಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ದೂರವಿಡಬೇಕು, ಆದ್ದರಿಂದ ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್‌ ಅವರಿಗೆ ಆಗ್ರಹಿಸಿದ್ದಾರೆ.

ಮೋದಿ ನೇತೃತ್ವದ ಯಾವುದೇ ಸರ್ಕಾರವನ್ನು ಬೆಂಬಲಿಸಬೇಡಿ ಎಂದು ಮಮತಾ ಬ್ಯಾನರ್ಜಿ ಎನ್‌ಡಿಎ ಮೈತ್ರಿಕೂಟದ ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದ್ದಾರೆ. ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿನ ಒಳ್ಳೆಯ ಜನರಿಗೆ ನಾನು ಸಾರ್ವಜನಿಕ ಮನವಿಯನ್ನು ಮಾಡುತ್ತೇನೆ ಮತ್ತು ಸೂಕ್ತ ನಿರ್ಧಾರಕ್ಕೆ ಇದು ಸರಿಯಾದ ಸಮಯ ಎಂದು ಹೇಳಿದ್ದಾರೆ.

ನಾನು ಇಂಡಿಯಾ ಮೈತ್ರಿಕೂಟದ ತಂಡಕ್ಕೆ ಸಹಾಯ ಮಾಡುತ್ತೇನೆ ಮತ್ತು ಮೋದಿ ಹೊರಗಿದ್ದಾರೆ ಮತ್ತು ಇಂಡಿಯಾ ಮೈತ್ರಿಕೂಟವು ಒಳಗಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ. ಏಕೆಂದರೆ ಇಂಡಿಯಾ ಮೈತ್ರಿಯು ಒಳಗಿದ್ದರೆ, ಜನರು ಸುರಕ್ಷಿತವಾಗಿರುತ್ತಾರೆ, ದೇಶವು ಸುರಕ್ಷಿತವಾಗಿರುತ್ತದೆ ಮತ್ತು ಇಂಡಿಯಾ ಮೈತ್ರಿಯು ದೇಶವನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಅಭಿಷೇಕ್ ಬ್ಯಾನರ್ಜಿ ಪಾಲ್ಗೊಳ್ಳಲಿದ್ದಾರೆ. ನಾನು ಅಭಿಷೇಕ್‌ನನ್ನು ಸಭೆಗೆ ಹೋಗಲು ಕೇಳುತ್ತೇನೆ. ಆದರೆ ಹೋಗುವ ಮೊದಲು, ಅವರು ವೈಯಕ್ತಿಕವಾಗಿ ನಾಯಕರನ್ನು ಭೇಟಿ ಮಾಡಬೇಕು. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎಸ್‌ಪಿ) ನಾಯಕ ಶರದ್ ಪವಾರ್ ಸೇರಿದಂತೆ ವಿರೋಧ ಪಕ್ಷದ ಹಲವಾರು ನಾಯಕರನ್ನು ಸಂಪರ್ಕಿಸಿದ್ದೇನೆ ಮತ್ತು ಕಾಂಗ್ರೆಸ್ ನಾಯಕರಿಗೆ ಅಭಿನಂದನಾ ಪತ್ರವನ್ನು ಕಳುಹಿಸಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ, ಅವರು ಕೂಡಲೇ ರಾಜೀನಾಮೆ ನೀಡಬೇಕು. ಭಾರತ ಗೆದ್ದಿದೆ, ಮೋದಿ ಸೋತಿದ್ದಾರೆ. ಪ್ರಧಾನಿ ಅನೇಕ ಪಕ್ಷಗಳನ್ನು ವಿಭಜನೆ ಮಾಡಿದರು, ಈಗ ಜನರು ಅವರ ಬೆನ್ನುಮೂಳೆಯನ್ನು ಮುರಿದಿದ್ದಾರೆ. ಸರ್ಕಾರ ರಚಿಸಲು ಮೋದಿ ಈಗ ಟಿಡಿಪಿ ಮತ್ತು ನಿತೀಶ್ ಕುಮಾರ್‌ ಅವರ ಬೆನ್ನು ಬಿದ್ದಿದ್ದಾರೆ. ಎನ್‌ಡಿಎಯಲ್ಲಿನ ಜನತಾ ದಳ (ಯುನೈಟೆಡ್) ಮತ್ತು ತೆಲುಗು ದೇಶಂ ಪಕ್ಷದಂತಹ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಬೆಂಬಲಿಸಬಾರದು ಎಂದು ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಮಮತಾ ಬ್ಯಾನರ್ಜಿ, ಬಸಿರ್‌ಹತ್ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷದ ಗೆಲುವನ್ನು ಶ್ಲಾಘಿಸಿದರು. ನಮ್ಮ ತಾಯಂದಿರು ಮತ್ತು ಸಹೋದರಿಯರ ಬಗ್ಗೆ ಅಪಪ್ರಚಾರದ ಹೊರತಾಗಿಯೂ ಸಂದೇಶಖಾಲಿ ಇರುವ ಬಸಿರ್ಹತ್ ಲೋಕಸಭಾ ಸ್ಥಾನವನ್ನು ನಾವು ಗೆದ್ದಿದ್ದೇವೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕತ್ವವು ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತನ್ನ ಮುಖ್ಯ ಚುನಾವಣಾ ಅಸ್ತ್ರವಾಗಿ ಬಳಸಿಕೊಂಡಿದೆ. ಆದರೆ ಬಿಜೆಪಿ ಬಸಿರ್‌ಹತ್‌ನಲ್ಲಿ ಮಾತ್ರವಲ್ಲದೆ ದಕ್ಷಿಣ ಬಂಗಾಳದ ಹಲವು ಸ್ಥಳಗಳಲ್ಲಿ ಸೋಲನುಭವಿಸಿದೆ. ಇಷ್ಟೆಲ್ಲ ದೌರ್ಜನ್ಯ, ಭಾರಿ ಮೊತ್ತದ ವೆಚ್ಚ, ಮೋದಿ ಹಾಗೂ ಅಮಿತ್ ಶಾ ಅವರ ಈ ದುರಹಂಕಾರದ ಹೊರತಾಗಿಯೂ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿದೆ ಹಾಗೂ ಮೋದಿ ಪರಾಭವಗೊಂಡಿದ್ದಾರೆ. ಅವರು ಅಯೋಧ್ಯೆಯಲ್ಲೂ ಪರಾಭವಗೊಂಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನು ಓದಿ: 2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...