Homeಮುಖಪುಟಸ್ಮೃತಿ ಇರಾನಿ, ಅಜಯ್ ಮಿಶ್ರಾ ಸೇರಿ 16 ಹಾಲಿ ಕೇಂದ್ರ ಸಚಿವರಿಗೆ ಸೋಲುಣಿಸಿದ ಮತದಾರರು

ಸ್ಮೃತಿ ಇರಾನಿ, ಅಜಯ್ ಮಿಶ್ರಾ ಸೇರಿ 16 ಹಾಲಿ ಕೇಂದ್ರ ಸಚಿವರಿಗೆ ಸೋಲುಣಿಸಿದ ಮತದಾರರು

- Advertisement -
- Advertisement -

ಲೋಕಸಭೆ ಚುನಾವಣೆಯ ಸಂಪೂರ್ಣ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೊಡ್ಡ ಹೊಡೆತ ಬಿದ್ದಿದೆ. ಈ ಬಾರಿ ಕೇಂದ್ರದ ಹಾಲಿ 16 ಸಚಿವರು ಸೋಲನ್ನು ಕಂಡಿದ್ದಾರೆ.

ಅಮೇಥಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್‌ ಅಭ್ಯರ್ಥಿ ಕಿಶೋರಿ ಲಾಲ್‌ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಮೋಹನ್‌ಲಾಲ್‌ಗಂಜ್ ಕ್ಷೇತ್ರದಲ್ಲಿ ಕೇಂದ್ರ ವಸತಿ ಖಾತೆ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಸಮಾಜವಾದಿ ಪಕ್ಷದ ಆರ್.ಕೆ. ಚೌಧರಿ ವಿರುದ್ಧ ಸೋಲನ್ನು ಕಂಡುಕೊಂಡಿದ್ದಾರೆ. ಚಂದೌಲಿ ಕ್ಷೇತ್ರದಲ್ಲಿ ಕೈಗಾರಿಕೆ ಖಾತೆ ಸಚಿವ ಮಹೇಂದ್ರ ನಾಥ್ ಪಾಂಡೆ ಸಮಾಜವಾದಿ ಪಕ್ಷ ಎಸ್‌ಪಿಯ ಬೀರೇಂದ್ರ ಸಿಂಗ್ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ.

ತಿರುವನಂತಪುರಂ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಹಾಲಿ ಸಚಿವರಾದ ರಾಜೀವ್ ಚಂದ್ರಶೇಖರ್ ಕಾಂಗ್ರೆಸ್‌ ನಾಯಕ ಶಶಿತರೂರ್‌ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಲಖಿಂಪುರ ಖೇರಿ ಕ್ಷೇತ್ರದಲ್ಲಿ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ.

ಬಂಕುರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್, ತೃಣಮೂಲ ಕಾಂಗ್ರೆಸ್‌ನ ಅಭ್ಯರ್ಥಿ ಅರೂಪ್ ಚಕ್ರವರ್ತಿ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಕುಂತಿ ಲೋಕಸಭೆ ಕ್ಷೇತ್ರದಲ್ಲಿ ಕೇಂದ್ರ ರೈತ ಮತ್ತು ಕೃಷಿ ಕಲ್ಯಾಣೆ ಖಾತೆ ಸಚಿವ ಅರ್ಜುನ್ ಮುಂಡಾ ಕಾಂಗ್ರೆಸ್‌ನ ಕಾಳಿಚರಣ್ ಮುಂಡಾ ವಿರುದ್ಧ ಸೋತಿದ್ದಾರೆ.

ಬೀದರ್‌ನಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿ ಸಾಗರ್ ಖಂಡ್ರೆ ಸೋಲಿಸಿದ್ದಾರೆ. ರಾಜಸ್ಥಾನದ ಬಾರ್ಮರ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಮ್‌ ಬೆನಿವಾಲ್‌ ವಿರುದ್ಧ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಸೋಲನ್ನು ಕಂಡಿದ್ದು, ಮೂರನೇ ಸ್ಥಾನಕ್ಕೆ ತಲ್ಲಲ್ಪಟ್ಟಿದ್ದಾರೆ.

ಕೂಚ್ ಬೆಹಾರ್ ಕ್ಷೇತ್ರದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಟಿಎಂಸಿಯ ಜಗದೀಶ್ ಚಂದ್ರ ಬಸುನಿಯಾ ವಿರುದ್ಧ ಸೋಲನ್ನು ಕಂಡಿದ್ದಾರೆ. ಮುಜಾಫರ್ ನಗರದಲ್ಲಿ ಸಮಾಜವಾದಿ ಪಕ್ಷದ ಹರೇಂದ್ರ ಸಿಂಗ್ ಮಲಿಕ್ ವಿರುದ್ಧ ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಸೋಲನ್ನು ಅನುಭವಿಸಿದ್ದಾರೆ. ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು ಕೇರಳದ ತಿರುವನಂತಪುರಂನಲ್ಲಿ ಸೋಲು ಕಂಡಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಎಲ್ ಮುರುಗನ್ ಅವರು ತಮಿಳುನಾಡಿನ ನೀಲಗಿರಿಯಲ್ಲಿ ಡಿಎಂಕೆಯ ಎ ರಾಜಾ ವಿರುದ್ಧ 2,40,585 ಮತಗಳ ಗಣನೀಯ ಅಂತರದಿಂದ ಸೋತಿದ್ದಾರೆ.

ಕೇಂದ್ರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಯುಪಿಯ ಫತೇಪುರ್‌ನಲ್ಲಿ ಸೋತಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರು ಮಹಾರಾಷ್ಟ್ರದ ಜಲ್ನಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಲ್ಯಾಣ ವೈಜನಾಥ್ ರಾವ್ ಕಾಳೆ ವಿರುದ್ಧ ಸೋತಿದ್ದಾರೆ. ಸಂಪುಟ ಸಚಿವ ಆರ್‌ಕೆ ಸಿಂಗ್ ಅವರು ಬಿಹಾರದ ಅರ್ರಾದಿಂದ ಸಿಪಿಐ(ಎಂಎಲ್)ನ ಸುದಾಮ ಪ್ರಸಾದ್ ವಿರುದ್ಧ ಸೋತಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...