Homeಮುಖಪುಟಗರಿಗೆದರಿದ ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದಿಲ್ಲಿಗೆ ಹೊರಟ ನಿತೀಶ್ ಕುಮಾರ್, ತೇಜಸ್ವಿ ಯಾದವ್

ಗರಿಗೆದರಿದ ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದಿಲ್ಲಿಗೆ ಹೊರಟ ನಿತೀಶ್ ಕುಮಾರ್, ತೇಜಸ್ವಿ ಯಾದವ್

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ, ಇದೀಗ ಕೇಂದ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಗರಿಗೆದರಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ಆರಂಭಿಸಿವೆ.

ಇದು ನವದೆಹಲಿಯಲ್ಲಿ ಎರಡೂ ಒಕ್ಕೂಟಗಳ ಮಹತ್ವದ ಸಭೆ ನಡೆಯಲಿದೆ. ಬಿಜೆಪಿ ಬಹುಮತ ದಾಟದಿದ್ದರೂ, ಎನ್‌ಡಿಎ ಒಕ್ಕೂಟ ಬಹುಮತ ಪಡೆದಿರುವ ಹಿನ್ನೆಲೆ ಎನ್‌ಡಿಎಗೆ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಆದರೆ, ಮೈತ್ರಿ ಪಕ್ಷಗಳನ್ನು ಹಿಡಿದಿಟ್ಟುಕೊಳ್ಳುವುದು ಬಿಜೆಪಿ ಸವಾಲಾಗಿದೆ.

ಇತ್ತ, ಬಹುಮತಕ್ಕೆ ಸುಮಾರು 40 ಸ್ಥಾನಗಳ ಕೊರತೆ ಇದ್ದರೂ, ಶತಾಯಗತಾಯ ಸರ್ಕಾರ ರಚನೆ ಮಾಡಿಯೇ ತೀರುತ್ತೇವೆ ಎಂಬ ಹುಮ್ಮಸ್ಸಿನಲ್ಲಿರುವ ಇಂಡಿಯಾ ಒಕ್ಕೂಟ, ಹಳೆಯ ಮಿತ್ರರಾದ ಜೆಡಿಯು ಮತ್ತು ಟಿಡಿಪಿಯನ್ನು ತನ್ನತ್ತ ಸೆಳೆಯಲು ಗಾಳ ಹಾಕಿದೆ.

ಒಟ್ಟು 543 ಲೋಕಸಭೆ ಸ್ಥಾನಗಳ ಪೈಕಿ ಎನ್‌ಡಿಎ ಒಕ್ಕೂಟ 294 ಸ್ಥಾನಗಳನ್ನು ಪಡೆದು 272ರ ಮ್ಯಾಜಿಕ್ ನಂಬರ್‌ಗಿಂತ 22 ಹೆಚ್ಚುವರಿ ಸ್ಥಾನಗಳನ್ನ ಪಡೆದಿದೆ. ಇಂಡಿಯಾ ಒಕ್ಕೂಟ 234 ಸ್ಥಾನಗಳನ್ನು ಪಡೆದಿದ್ದು, ಬಹುಮತಕ್ಕೆ 38 ಸ್ಥಾನಗಳ ಕೊರತೆ ಇದೆ. ಇದನ್ನು ತುಂಬಲು ಹಳೆಯ ಮಿತ್ರರಾದ ಜೆಡಿಯುನ ನಿತೀಶ್ ಕುಮಾರ್ ಮತ್ತು ಟಿಡಿಪಿಯ ಚಂದ್ರಬಾಬು ನಾಯ್ಡುವನ್ನು ಮನವೊಲಿಸಲು ಇಂಡಿಯಾ ನಾಯಕರು ಕಸರತ್ತು ಆರಂಭಿಸಿದ್ದಾರೆ.

ಇಂದಿನ ಸಭೆಯಲ್ಲಿ ಏನು ಬೆಳವಣಿಗೆ ನಡೆಯಲಿದೆ ಎಂಬುವುದು ಕುತೂಹಲ ಮೂಡಿಸಿದೆ. ಎರಡೂ ಒಕ್ಕೂಟಗಳ ಸಭೆಯತ್ತ ಇಡೀ ದೇಶದ ಚಿತ್ತ ನೆಟ್ಟಿದೆ.

ನಿನ್ನೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಇಂಡಿಯಾ ಒಕ್ಕೂಟದ ಪಾಲುದಾರರೊಂದಿಗೆ ಮಾತನಾಡಿದ ಬಳಿಕವಷ್ಟೇ ಟಿಡಿಪಿ ಮತ್ತು ಜೆಡಿಯು ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ತರಿಸುತ್ತೇನೆ” ಎಂದಿದ್ದಾರೆ.

ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದರೂ, ಬಿಜೆಪಿಗೆ ಬಹುಮತ ಬಂದಿಲ್ಲ. ಆದ್ದರಿಂದ ಬಿಜೆಪಿ ಈ ಬಾರಿ ತನ್ನ ಮೈತ್ರಿಕೂಟದ ಪಕ್ಷಗಳ ನಿರ್ಧಾರಕ್ಕೆ ತಲೆ ಬಾಗುವ ಅನಿವಾರ್ಯತೆ ಎದುರಾಗಿದೆ. ಮತ್ತೊಂದೆಡೆ ತನ್ನ ಮಿತ್ರ ಪಕ್ಷಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳುವ ಸಂಕಷ್ಟಕ್ಕೆ ಸಿಲುಕಿದೆ.

ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ ನಿತೀಶ್ ಕುಮಾರ್-ತೇಜಸ್ವಿ ಯಾದವ್

ಎನ್‌ಡಿಎ ಮೈತ್ರಿಕೂಟದ ನಾಯಕ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕ ಹಾಗೂ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದರಿಂದ ಇಂದಿನ ಮೈತ್ರಿಕೂಟಗಳ ಸಭೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...