Homeಮುಖಪುಟಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

ಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

- Advertisement -
- Advertisement -

ಪ್ರಕ್ಷುಬ್ಧ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ನಡುವೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್(ಎನ್‌ಪಿಎಫ್)ನ್ನು ಸೋಲಿಸುವ ಮೂಲಕ ಪ್ರತಿಪಕ್ಷವಾದ ಕಾಂಗ್ರೆಸ್‌ ಎರಡೂ ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಮಣಿಪುರದ ಕುರಿತು ನಿರ್ಲಕ್ಷ್ಯ ತೋರಿದ ಬಿಜೆಪಿ ಸರಕಾರಕ್ಕೆ ಮಣಿಪುರದ ಜನತೆ ತಕ್ಕ ಪಾಠವನ್ನು ಕಲಿಸಿದ್ದಾರೆ.

ನಮಗೆ ಶಾಶ್ವತ ಭಯ ಮುಕ್ತ ಬದುಕುವ ವಾತಾವರಣ ಬೇಕು, ಶಿಬಿರಗಳಲ್ಲಿ ದಿನದೂಡುತ್ತಿರುವ ನಾವು ಮತದಾನ ಮಾಡುವುದಿಲ್ಲ ಎಂದು ಲೋಕಸಭೆ ಚುನಾವಣೆಗೆ ಈ ಹಿಂದೆ ಮಣಿಪುರದ ನಿರಾಶ್ರಿತರ ಶಿಬಿರದಲ್ಲಿದ್ದ ಜನತೆ ಬಹಿಷ್ಕಾರವನ್ನು ಹಾಕಿದ್ದರು. ಮಣಿಪುರದಲ್ಲಿ ಶಾಂತಿ ಸ್ಥಾಪನೆ, ಪುನರ್ವಸತಿ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಣಿಪುರದಲ್ಲಿ ಎರಡು ಲೋಕಸಭೆ ಕ್ಷೇತ್ರಗಳಿದೆ. ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ರಾಜ್ಯ ಶಿಕ್ಷಣ ಸಚಿವ ಬಿಜೆಪಿಯ ಟಿ ಬಸಂತ ಕುಮಾರ್ ಸಿಂಗ್ ಅವರನ್ನು 109,801 ಮತಗಳಿಂದ ಸೋಲಿಸಿದ್ದಾರೆ. ಹೊರ ಮಣಿಪುರ ಕ್ಷೇತ್ರವು ಬುಡಕಟ್ಟು ಸಮುದಾಯಗಳಿಗೆ ಮೀಸಲಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ಆಲ್‌ಫ್ರೆಡ್ ಕಂಗಮ್ ಆರ್ಥರ್ ಗೆದ್ದುಕೊಂಡಿದ್ದಾರೆ. ಕಂಗಮ್ ಆರ್ಥರ್ ನಿವೃತ್ತ ಕಂದಾಯ ಅಧಿಕಾರಿ ಎನ್‌ಪಿಎಫ್‌ನ ಕಚುಯಿ ತಿಮೋತಿ ಜಿಮಿಕ್ ಅವರನ್ನು 85,418 ಮತಗಳಿಂದ ಸೋಲಿಸಿದ್ದಾರೆ.

2019ರಲ್ಲಿ ಬಿಜೆಪಿ ಇನ್ನರ್ ಮಣಿಪುರ ಸ್ಥಾನವನ್ನು ಗೆದ್ದಿತ್ತು, ಎನ್‌ಪಿಎಫ್ ಹೊರ ಮಣಿಪುರವನ್ನು ಗೆದ್ದುಕೊಂಡಿತ್ತು. ಈ ಬಾರಿ ಇನ್ನರ್ ಮಣಿಪುರದಲ್ಲಿ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಹೊರ ಮಣಿಪುರದಲ್ಲಿ ಎನ್‌ಪಿಎಫ್‌ಗೆ ಬೆಂಬಲ ನೀಡಿತ್ತು.

ಮಣಿಪುರ ಕಳೆದ ಒಂದು ವರ್ಷ ವ್ಯಾಪಕ ಹಿಂಸಾಚಾರದಿಂದ ಪ್ರಕ್ಷುಬ್ಧವಾಗಿತ್ತು. ಆದರೆ ಪ್ರಧಾನಿ ಮೋದಿ ಒಂದೇ ಒಂದು ಬಾರಿ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ. ಹಿಂಸಾಚಾರವನ್ನು ತಡೆಯುವಲ್ಲಿ ಯಾವುದೇ ಪರಿಣಾಮಕಾರಿ ಪ್ರಯತ್ನವನ್ನು ಮಣಿಪುರ ಬಿಜೆಪಿ ಬೆಂಬಲಿತ ಸರಕಾರವಾಗಲೀ, ಕೇಂದ್ರ ಸರಕಾರವಾಗಲೀ ಮಾಡಿರಲಿಲ್ಲ. ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿರೇನ್‌ ಸಿಂಗ್‌ ನೇತೃತ್ವದ ಸರ್ಕಾರ ಪಕ್ಷಪಾತಿಯಾಗಿ ವರ್ತಿಸಿದೆ. ಅಲ್ಪಸಂಖ್ಯಾತರಾದ, ಮುಖ್ಯವಾಗಿ ಕ್ರೈಸ್ತ ಧರ್ಮಕ್ಕೆ ಸೇರಿದ ಕುಕಿ ಬುಡಕಟ್ಟು ಜನರು ಮತ್ತು ಬಹುಸಂಖ್ಯಾತರಾದ ಮೈತೇಯಿ ಸಮುದಾಯದ ಜನರು ಹಿಂಸಾಕೃತ್ಯಗಳನ್ನು ನಡೆಸಿದ್ದಾರೆ. ಎರಡೂ ಸಮುದಾಯಗಳ ನಡುವಣ ವೈರತ್ವಕ್ಕೆ ಹಲವು ದಶಕಗಳ ಇತಿಹಾಸ ಇದೆ. ಆದರೆ ಹಿಂದೆಂದೂ ಈ ರೀತಿ ನಡೆದಿರಲಿಲ್ಲ. ಮೈತೈ ಸಮುದಾಯದ ತೀವ್ರಗಾಮಿ ಗುಂಪು ಅರಂಬಾಯಿ ತೆಂಗೊಲ್‌ಗೆ ರಾಜ್ಯ ಸರ್ಕಾರವು ಪೂರ್ಣ ಸ್ವಾತಂತ್ರ್ಯವನ್ನೇ ಕೊಟ್ಟಿದ್ದು ಹಿಂಸಾಚಾರದ ತೀವ್ರತೆ ಹೆಚ್ಚಲು ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮಣಿಪುರವು ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ ಮತ್ತು ಜನರು ಬಳಲುತ್ತಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಇದನ್ನು ಪರಿಹರಿಸಲು ವಿಫಲವಾಗಿವೆ. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪರ ತೀರ್ಪು ರಾಜ್ಯದಾದ್ಯಂತ ಮತದಾರರ ಹತಾಶೆಯನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ನಡೆಯುತ್ತಿದ್ದರೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಆದರೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದಲೇ ಆರಂಭಿಸಿದ್ದಾರೆ, ಮಣಿಪುರದ ಜನರಿಗೆ ಧೈರ್ಯ ತುಂಬಿದ್ದಾರೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ ಮೇಘಚಂದ್ರ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...