Homeಮುಖಪುಟಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

ಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

- Advertisement -
- Advertisement -

ಪ್ರಕ್ಷುಬ್ಧ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ನಡುವೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್(ಎನ್‌ಪಿಎಫ್)ನ್ನು ಸೋಲಿಸುವ ಮೂಲಕ ಪ್ರತಿಪಕ್ಷವಾದ ಕಾಂಗ್ರೆಸ್‌ ಎರಡೂ ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಮಣಿಪುರದ ಕುರಿತು ನಿರ್ಲಕ್ಷ್ಯ ತೋರಿದ ಬಿಜೆಪಿ ಸರಕಾರಕ್ಕೆ ಮಣಿಪುರದ ಜನತೆ ತಕ್ಕ ಪಾಠವನ್ನು ಕಲಿಸಿದ್ದಾರೆ.

ನಮಗೆ ಶಾಶ್ವತ ಭಯ ಮುಕ್ತ ಬದುಕುವ ವಾತಾವರಣ ಬೇಕು, ಶಿಬಿರಗಳಲ್ಲಿ ದಿನದೂಡುತ್ತಿರುವ ನಾವು ಮತದಾನ ಮಾಡುವುದಿಲ್ಲ ಎಂದು ಲೋಕಸಭೆ ಚುನಾವಣೆಗೆ ಈ ಹಿಂದೆ ಮಣಿಪುರದ ನಿರಾಶ್ರಿತರ ಶಿಬಿರದಲ್ಲಿದ್ದ ಜನತೆ ಬಹಿಷ್ಕಾರವನ್ನು ಹಾಕಿದ್ದರು. ಮಣಿಪುರದಲ್ಲಿ ಶಾಂತಿ ಸ್ಥಾಪನೆ, ಪುನರ್ವಸತಿ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಣಿಪುರದಲ್ಲಿ ಎರಡು ಲೋಕಸಭೆ ಕ್ಷೇತ್ರಗಳಿದೆ. ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ರಾಜ್ಯ ಶಿಕ್ಷಣ ಸಚಿವ ಬಿಜೆಪಿಯ ಟಿ ಬಸಂತ ಕುಮಾರ್ ಸಿಂಗ್ ಅವರನ್ನು 109,801 ಮತಗಳಿಂದ ಸೋಲಿಸಿದ್ದಾರೆ. ಹೊರ ಮಣಿಪುರ ಕ್ಷೇತ್ರವು ಬುಡಕಟ್ಟು ಸಮುದಾಯಗಳಿಗೆ ಮೀಸಲಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ಆಲ್‌ಫ್ರೆಡ್ ಕಂಗಮ್ ಆರ್ಥರ್ ಗೆದ್ದುಕೊಂಡಿದ್ದಾರೆ. ಕಂಗಮ್ ಆರ್ಥರ್ ನಿವೃತ್ತ ಕಂದಾಯ ಅಧಿಕಾರಿ ಎನ್‌ಪಿಎಫ್‌ನ ಕಚುಯಿ ತಿಮೋತಿ ಜಿಮಿಕ್ ಅವರನ್ನು 85,418 ಮತಗಳಿಂದ ಸೋಲಿಸಿದ್ದಾರೆ.

2019ರಲ್ಲಿ ಬಿಜೆಪಿ ಇನ್ನರ್ ಮಣಿಪುರ ಸ್ಥಾನವನ್ನು ಗೆದ್ದಿತ್ತು, ಎನ್‌ಪಿಎಫ್ ಹೊರ ಮಣಿಪುರವನ್ನು ಗೆದ್ದುಕೊಂಡಿತ್ತು. ಈ ಬಾರಿ ಇನ್ನರ್ ಮಣಿಪುರದಲ್ಲಿ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಹೊರ ಮಣಿಪುರದಲ್ಲಿ ಎನ್‌ಪಿಎಫ್‌ಗೆ ಬೆಂಬಲ ನೀಡಿತ್ತು.

ಮಣಿಪುರ ಕಳೆದ ಒಂದು ವರ್ಷ ವ್ಯಾಪಕ ಹಿಂಸಾಚಾರದಿಂದ ಪ್ರಕ್ಷುಬ್ಧವಾಗಿತ್ತು. ಆದರೆ ಪ್ರಧಾನಿ ಮೋದಿ ಒಂದೇ ಒಂದು ಬಾರಿ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ. ಹಿಂಸಾಚಾರವನ್ನು ತಡೆಯುವಲ್ಲಿ ಯಾವುದೇ ಪರಿಣಾಮಕಾರಿ ಪ್ರಯತ್ನವನ್ನು ಮಣಿಪುರ ಬಿಜೆಪಿ ಬೆಂಬಲಿತ ಸರಕಾರವಾಗಲೀ, ಕೇಂದ್ರ ಸರಕಾರವಾಗಲೀ ಮಾಡಿರಲಿಲ್ಲ. ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿರೇನ್‌ ಸಿಂಗ್‌ ನೇತೃತ್ವದ ಸರ್ಕಾರ ಪಕ್ಷಪಾತಿಯಾಗಿ ವರ್ತಿಸಿದೆ. ಅಲ್ಪಸಂಖ್ಯಾತರಾದ, ಮುಖ್ಯವಾಗಿ ಕ್ರೈಸ್ತ ಧರ್ಮಕ್ಕೆ ಸೇರಿದ ಕುಕಿ ಬುಡಕಟ್ಟು ಜನರು ಮತ್ತು ಬಹುಸಂಖ್ಯಾತರಾದ ಮೈತೇಯಿ ಸಮುದಾಯದ ಜನರು ಹಿಂಸಾಕೃತ್ಯಗಳನ್ನು ನಡೆಸಿದ್ದಾರೆ. ಎರಡೂ ಸಮುದಾಯಗಳ ನಡುವಣ ವೈರತ್ವಕ್ಕೆ ಹಲವು ದಶಕಗಳ ಇತಿಹಾಸ ಇದೆ. ಆದರೆ ಹಿಂದೆಂದೂ ಈ ರೀತಿ ನಡೆದಿರಲಿಲ್ಲ. ಮೈತೈ ಸಮುದಾಯದ ತೀವ್ರಗಾಮಿ ಗುಂಪು ಅರಂಬಾಯಿ ತೆಂಗೊಲ್‌ಗೆ ರಾಜ್ಯ ಸರ್ಕಾರವು ಪೂರ್ಣ ಸ್ವಾತಂತ್ರ್ಯವನ್ನೇ ಕೊಟ್ಟಿದ್ದು ಹಿಂಸಾಚಾರದ ತೀವ್ರತೆ ಹೆಚ್ಚಲು ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮಣಿಪುರವು ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ ಮತ್ತು ಜನರು ಬಳಲುತ್ತಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಇದನ್ನು ಪರಿಹರಿಸಲು ವಿಫಲವಾಗಿವೆ. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪರ ತೀರ್ಪು ರಾಜ್ಯದಾದ್ಯಂತ ಮತದಾರರ ಹತಾಶೆಯನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ನಡೆಯುತ್ತಿದ್ದರೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಆದರೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದಲೇ ಆರಂಭಿಸಿದ್ದಾರೆ, ಮಣಿಪುರದ ಜನರಿಗೆ ಧೈರ್ಯ ತುಂಬಿದ್ದಾರೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ ಮೇಘಚಂದ್ರ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...