Homeಮುಖಪುಟಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

ಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

- Advertisement -
- Advertisement -

ಪ್ರಕ್ಷುಬ್ಧ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ನಡುವೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್(ಎನ್‌ಪಿಎಫ್)ನ್ನು ಸೋಲಿಸುವ ಮೂಲಕ ಪ್ರತಿಪಕ್ಷವಾದ ಕಾಂಗ್ರೆಸ್‌ ಎರಡೂ ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಮಣಿಪುರದ ಕುರಿತು ನಿರ್ಲಕ್ಷ್ಯ ತೋರಿದ ಬಿಜೆಪಿ ಸರಕಾರಕ್ಕೆ ಮಣಿಪುರದ ಜನತೆ ತಕ್ಕ ಪಾಠವನ್ನು ಕಲಿಸಿದ್ದಾರೆ.

ನಮಗೆ ಶಾಶ್ವತ ಭಯ ಮುಕ್ತ ಬದುಕುವ ವಾತಾವರಣ ಬೇಕು, ಶಿಬಿರಗಳಲ್ಲಿ ದಿನದೂಡುತ್ತಿರುವ ನಾವು ಮತದಾನ ಮಾಡುವುದಿಲ್ಲ ಎಂದು ಲೋಕಸಭೆ ಚುನಾವಣೆಗೆ ಈ ಹಿಂದೆ ಮಣಿಪುರದ ನಿರಾಶ್ರಿತರ ಶಿಬಿರದಲ್ಲಿದ್ದ ಜನತೆ ಬಹಿಷ್ಕಾರವನ್ನು ಹಾಕಿದ್ದರು. ಮಣಿಪುರದಲ್ಲಿ ಶಾಂತಿ ಸ್ಥಾಪನೆ, ಪುನರ್ವಸತಿ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಣಿಪುರದಲ್ಲಿ ಎರಡು ಲೋಕಸಭೆ ಕ್ಷೇತ್ರಗಳಿದೆ. ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ರಾಜ್ಯ ಶಿಕ್ಷಣ ಸಚಿವ ಬಿಜೆಪಿಯ ಟಿ ಬಸಂತ ಕುಮಾರ್ ಸಿಂಗ್ ಅವರನ್ನು 109,801 ಮತಗಳಿಂದ ಸೋಲಿಸಿದ್ದಾರೆ. ಹೊರ ಮಣಿಪುರ ಕ್ಷೇತ್ರವು ಬುಡಕಟ್ಟು ಸಮುದಾಯಗಳಿಗೆ ಮೀಸಲಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ಆಲ್‌ಫ್ರೆಡ್ ಕಂಗಮ್ ಆರ್ಥರ್ ಗೆದ್ದುಕೊಂಡಿದ್ದಾರೆ. ಕಂಗಮ್ ಆರ್ಥರ್ ನಿವೃತ್ತ ಕಂದಾಯ ಅಧಿಕಾರಿ ಎನ್‌ಪಿಎಫ್‌ನ ಕಚುಯಿ ತಿಮೋತಿ ಜಿಮಿಕ್ ಅವರನ್ನು 85,418 ಮತಗಳಿಂದ ಸೋಲಿಸಿದ್ದಾರೆ.

2019ರಲ್ಲಿ ಬಿಜೆಪಿ ಇನ್ನರ್ ಮಣಿಪುರ ಸ್ಥಾನವನ್ನು ಗೆದ್ದಿತ್ತು, ಎನ್‌ಪಿಎಫ್ ಹೊರ ಮಣಿಪುರವನ್ನು ಗೆದ್ದುಕೊಂಡಿತ್ತು. ಈ ಬಾರಿ ಇನ್ನರ್ ಮಣಿಪುರದಲ್ಲಿ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಹೊರ ಮಣಿಪುರದಲ್ಲಿ ಎನ್‌ಪಿಎಫ್‌ಗೆ ಬೆಂಬಲ ನೀಡಿತ್ತು.

ಮಣಿಪುರ ಕಳೆದ ಒಂದು ವರ್ಷ ವ್ಯಾಪಕ ಹಿಂಸಾಚಾರದಿಂದ ಪ್ರಕ್ಷುಬ್ಧವಾಗಿತ್ತು. ಆದರೆ ಪ್ರಧಾನಿ ಮೋದಿ ಒಂದೇ ಒಂದು ಬಾರಿ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ. ಹಿಂಸಾಚಾರವನ್ನು ತಡೆಯುವಲ್ಲಿ ಯಾವುದೇ ಪರಿಣಾಮಕಾರಿ ಪ್ರಯತ್ನವನ್ನು ಮಣಿಪುರ ಬಿಜೆಪಿ ಬೆಂಬಲಿತ ಸರಕಾರವಾಗಲೀ, ಕೇಂದ್ರ ಸರಕಾರವಾಗಲೀ ಮಾಡಿರಲಿಲ್ಲ. ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿರೇನ್‌ ಸಿಂಗ್‌ ನೇತೃತ್ವದ ಸರ್ಕಾರ ಪಕ್ಷಪಾತಿಯಾಗಿ ವರ್ತಿಸಿದೆ. ಅಲ್ಪಸಂಖ್ಯಾತರಾದ, ಮುಖ್ಯವಾಗಿ ಕ್ರೈಸ್ತ ಧರ್ಮಕ್ಕೆ ಸೇರಿದ ಕುಕಿ ಬುಡಕಟ್ಟು ಜನರು ಮತ್ತು ಬಹುಸಂಖ್ಯಾತರಾದ ಮೈತೇಯಿ ಸಮುದಾಯದ ಜನರು ಹಿಂಸಾಕೃತ್ಯಗಳನ್ನು ನಡೆಸಿದ್ದಾರೆ. ಎರಡೂ ಸಮುದಾಯಗಳ ನಡುವಣ ವೈರತ್ವಕ್ಕೆ ಹಲವು ದಶಕಗಳ ಇತಿಹಾಸ ಇದೆ. ಆದರೆ ಹಿಂದೆಂದೂ ಈ ರೀತಿ ನಡೆದಿರಲಿಲ್ಲ. ಮೈತೈ ಸಮುದಾಯದ ತೀವ್ರಗಾಮಿ ಗುಂಪು ಅರಂಬಾಯಿ ತೆಂಗೊಲ್‌ಗೆ ರಾಜ್ಯ ಸರ್ಕಾರವು ಪೂರ್ಣ ಸ್ವಾತಂತ್ರ್ಯವನ್ನೇ ಕೊಟ್ಟಿದ್ದು ಹಿಂಸಾಚಾರದ ತೀವ್ರತೆ ಹೆಚ್ಚಲು ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮಣಿಪುರವು ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ ಮತ್ತು ಜನರು ಬಳಲುತ್ತಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಇದನ್ನು ಪರಿಹರಿಸಲು ವಿಫಲವಾಗಿವೆ. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪರ ತೀರ್ಪು ರಾಜ್ಯದಾದ್ಯಂತ ಮತದಾರರ ಹತಾಶೆಯನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ನಡೆಯುತ್ತಿದ್ದರೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಆದರೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದಲೇ ಆರಂಭಿಸಿದ್ದಾರೆ, ಮಣಿಪುರದ ಜನರಿಗೆ ಧೈರ್ಯ ತುಂಬಿದ್ದಾರೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ ಮೇಘಚಂದ್ರ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...