Homeಮುಖಪುಟಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

ಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭೆಯಿಂದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದ ಆರು ಜನ ಕಾಂಗ್ರೆಸ್ ಸದಸ್ಯರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಪಕ್ಷದ ವಿಪ್ ಅನ್ನು ಧಿಕ್ಕರಿಸಿ ಬಿಜೆಪಿ ಸೇರಿದ ಆರು ಬಂಡಾಯ ಶಾಸಕರ ಅನರ್ಹತೆಯ ನಂತರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ತನ್ನ ವಶಕ್ಕೆ ಪಡೆದಿದೆ. ಮತ್ತೊಂದೆಡೆ, ಬಿಜೆಪಿ 2 ಸ್ಥಾನಗಳನ್ನು ಗೆದ್ದಿದೆ; ಕಾಂಗ್ರೆಸ್ ಶಾಸಕರ ಸಂಖ್ಯೆ ಈಗ 38ಕ್ಕೆ ತಲುಪಿದೆ.

ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ರಂಜಿತ್ ಸಿಂಗ್ ಅವರು ಸುಜಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಮತ್ತು ಅನುರಾಧ ರಾಣಾ ಹಿಮಾಚಲ ಪ್ರದೇಶದ ಲಾಹೌಲ್ ಮತ್ತು ಸ್ಪಿತಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ಗಾರ್ಗೆಟ್‌ನಿಂದ ಕಾಂಗ್ರೆಸ್‌ನ ರಾಕೇಶ್ ಕಾಲಿಯಾ ಗೆದ್ದಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆಯ ಕುಟ್ಲೆಹಾರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿವೇಕ್ ಶರ್ಮಾ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಸುಧೀರ್ ಶರ್ಮಾ ಮತ್ತು ಇಂದರ್ ದತ್ ಲಖನ್‌ಪಾಲ್ ಕ್ರಮವಾಗಿ ಧರ್ಮಶಾಲಾ ಮತ್ತು ಬಸ್ಸರ್‌ನಲ್ಲಿ ಗೆಲುವು ಸಾಧಿಸಿದ್ದಾರೆ.

ಪಕ್ಷದ ವಿಪ್ ಪಾಲಿಸದ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ನಂತರ ಲೋಕಸಭೆ ಚುನಾವಣೆಯ ಜೊತೆಗೆ ಧರ್ಮಶಾಲಾ, ಲಾಹೌಲ್-ಸ್ಪಿತಿ, ಸುಜಾನ್‌ಪುರ್, ಬರ್ಸರ್, ಗ್ಯಾಗ್ರೆಟ್ ಮತ್ತು ಕುಟ್ಲೆಹಾರ್ ಸೇರಿದಂತೆ ಆರು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗಳು ಅನಿವಾರ್ಯವಾಗಿತ್ತು.

ಶಾಸಕರಾದ ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್‌ಪಾಲ್, ಚೈತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಅವರು ಸದನದಲ್ಲಿ ಹಾಜರಾಗಲು ಮತ್ತು ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ನಿರ್ದೇಶನವನ್ನು ಪಾಲಿಸಲು ನಿರಾಕರಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ನಡೆದ ಹೈವೋಲ್ಟೇಜ್ ಮಾಧ್ಯಮಗಳ ನಾಟಕದ ಮಧ್ಯೆ ಕಾಂಗ್ರೆಸ್‌ನ ಆರು ಶಾಸಕರನ್ನು ಅನರ್ಹಗೊಳಿಸಿದ ನಂತರ ಉಪಚುನಾವಣೆ ನಡೆಸಲಾಯಿತು. ಈ ಆರು ಬಂಡಾಯ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಿದ್ದರು.

ಫೆಬ್ರವರಿ 27 ರಂದು, ಆರು ಬಂಡಾಯ ಕಾಂಗ್ರೆಸ್ ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಹರ್ಷ್ ಮಹಾಜನ್ ಪರ ಮತ ಚಲಾಯಿಸಿದರು. 68 ಸದಸ್ಯ ಬಲದ ಹಿಮಾಚಲದಲ್ಲಿ ಹಳೆಯ ಪಕ್ಷ ಪೂರ್ಣ ಬಹುಮತ ಹೊಂದಿದ್ದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಪರಾಭವಗೊಂಡಿದ್ದಾರೆ. 6 ಕಾಂಗ್ರೆಸ್ ಶಾಸಕರ ಬಂಡಾಯದ ನಂತರ, ಪ್ರತಿಪಕ್ಷ ಬಿಜೆಪಿಯು ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ರಾಜೀನಾಮೆಗೆ ಕರೆ ನೀಡಿದ್ದರಿಂದ ಕಾಂಗ್ರೆಸ್ ಸರ್ಕಾರವು ಬೆದರಿಕೆಯನ್ನು ಎದುರಿಸಿತು.

ಎಲ್ಲ ಆರು ಬಂಡಾಯ ಕಾಂಗ್ರೆಸ್ ಶಾಸಕರು ಬಿಜೆಪಿ ಟಿಕೆಟ್‌ನಲ್ಲಿ ಮತ್ತೆ ಸ್ಪರ್ಧಿಸಿದ್ದಾರೆ. ರಾಜಿಂದರ್ ರಾಣಾ, ಸುಧೀರ್ ಶರ್ಮಾ, ದೇವಿಂದರ್ ಕುಮಾರ್ ಭುಟ್ಟೊ, ಚೈತನ್ಯ ಶರ್ಮಾ, ಇಂದರ್ ದತ್ ಲಖನ್‌ಪಾಲ್ ಮತ್ತು ರವಿ ಠಾಕೂರ್ ಅವರು ಕಣದಲ್ಲಿದ್ದ ಆರು ಬಂಡಾಯ ನಾಯಕರು. ತಮ್ಮ ಪ್ರಾಮಾಣಿಕತೆಯನ್ನು ಬಿಜೆಪಿಗೆ ಮಾರಾಟ ಮಾಡಲು ಕೋಟಿಗಟ್ಟಲೆ ಸ್ವೀಕರಿಸಿದ್ದಾರೆ ಎಂದು ಸಿಎಂ ಸುಖು ಆರೋಪಿಸಿದ್ದಾರೆ.

ಶಾಸಕರ ಬಲಾಬಲ:

ಒಟ್ಟು ಕ್ಷೇತ್ರಗಳು: 68

ಕಾಂಗ್ರೆಸ್: 38

ಬಿಜೆಪಿ: 27

ಖಾಲಿ ಉಳಿದಿರುವ ಸ್ಥಾನ: 3

ಇದನ್ನೂ ಓದಿ; “ನಿಮ್ಮ ಸಹೋದರಿಯಾಗಿರುವುದಕ್ಕೆ ಹೆಮ್ಮೆಪಡುತ್ತೇನೆ..”; ರಾಹುಲ್‌ ಕುರಿತು ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...