Homeಮುಖಪುಟಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

ಹಿಮಾಚಲ ಅಸೆಂಬ್ಲಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಸೇರಿದ್ದ 6 ಜನರಲ್ಲಿ ನಾಲ್ವರಿಗೆ ಸೋಲು

- Advertisement -
- Advertisement -

ಹಿಮಾಚಲ ಪ್ರದೇಶ ವಿಧಾನಸಭೆಯಿಂದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದ ಆರು ಜನ ಕಾಂಗ್ರೆಸ್ ಸದಸ್ಯರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಪಕ್ಷದ ವಿಪ್ ಅನ್ನು ಧಿಕ್ಕರಿಸಿ ಬಿಜೆಪಿ ಸೇರಿದ ಆರು ಬಂಡಾಯ ಶಾಸಕರ ಅನರ್ಹತೆಯ ನಂತರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ತನ್ನ ವಶಕ್ಕೆ ಪಡೆದಿದೆ. ಮತ್ತೊಂದೆಡೆ, ಬಿಜೆಪಿ 2 ಸ್ಥಾನಗಳನ್ನು ಗೆದ್ದಿದೆ; ಕಾಂಗ್ರೆಸ್ ಶಾಸಕರ ಸಂಖ್ಯೆ ಈಗ 38ಕ್ಕೆ ತಲುಪಿದೆ.

ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ರಂಜಿತ್ ಸಿಂಗ್ ಅವರು ಸುಜಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಮತ್ತು ಅನುರಾಧ ರಾಣಾ ಹಿಮಾಚಲ ಪ್ರದೇಶದ ಲಾಹೌಲ್ ಮತ್ತು ಸ್ಪಿತಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ಗಾರ್ಗೆಟ್‌ನಿಂದ ಕಾಂಗ್ರೆಸ್‌ನ ರಾಕೇಶ್ ಕಾಲಿಯಾ ಗೆದ್ದಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆಯ ಕುಟ್ಲೆಹಾರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿವೇಕ್ ಶರ್ಮಾ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಸುಧೀರ್ ಶರ್ಮಾ ಮತ್ತು ಇಂದರ್ ದತ್ ಲಖನ್‌ಪಾಲ್ ಕ್ರಮವಾಗಿ ಧರ್ಮಶಾಲಾ ಮತ್ತು ಬಸ್ಸರ್‌ನಲ್ಲಿ ಗೆಲುವು ಸಾಧಿಸಿದ್ದಾರೆ.

ಪಕ್ಷದ ವಿಪ್ ಪಾಲಿಸದ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ನಂತರ ಲೋಕಸಭೆ ಚುನಾವಣೆಯ ಜೊತೆಗೆ ಧರ್ಮಶಾಲಾ, ಲಾಹೌಲ್-ಸ್ಪಿತಿ, ಸುಜಾನ್‌ಪುರ್, ಬರ್ಸರ್, ಗ್ಯಾಗ್ರೆಟ್ ಮತ್ತು ಕುಟ್ಲೆಹಾರ್ ಸೇರಿದಂತೆ ಆರು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗಳು ಅನಿವಾರ್ಯವಾಗಿತ್ತು.

ಶಾಸಕರಾದ ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್‌ಪಾಲ್, ಚೈತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಅವರು ಸದನದಲ್ಲಿ ಹಾಜರಾಗಲು ಮತ್ತು ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ನಿರ್ದೇಶನವನ್ನು ಪಾಲಿಸಲು ನಿರಾಕರಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ನಡೆದ ಹೈವೋಲ್ಟೇಜ್ ಮಾಧ್ಯಮಗಳ ನಾಟಕದ ಮಧ್ಯೆ ಕಾಂಗ್ರೆಸ್‌ನ ಆರು ಶಾಸಕರನ್ನು ಅನರ್ಹಗೊಳಿಸಿದ ನಂತರ ಉಪಚುನಾವಣೆ ನಡೆಸಲಾಯಿತು. ಈ ಆರು ಬಂಡಾಯ ಶಾಸಕರು ಬಿಜೆಪಿಯಿಂದ ಸ್ಪರ್ಧಿಸಿದ್ದರು.

ಫೆಬ್ರವರಿ 27 ರಂದು, ಆರು ಬಂಡಾಯ ಕಾಂಗ್ರೆಸ್ ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಹರ್ಷ್ ಮಹಾಜನ್ ಪರ ಮತ ಚಲಾಯಿಸಿದರು. 68 ಸದಸ್ಯ ಬಲದ ಹಿಮಾಚಲದಲ್ಲಿ ಹಳೆಯ ಪಕ್ಷ ಪೂರ್ಣ ಬಹುಮತ ಹೊಂದಿದ್ದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಪರಾಭವಗೊಂಡಿದ್ದಾರೆ. 6 ಕಾಂಗ್ರೆಸ್ ಶಾಸಕರ ಬಂಡಾಯದ ನಂತರ, ಪ್ರತಿಪಕ್ಷ ಬಿಜೆಪಿಯು ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ರಾಜೀನಾಮೆಗೆ ಕರೆ ನೀಡಿದ್ದರಿಂದ ಕಾಂಗ್ರೆಸ್ ಸರ್ಕಾರವು ಬೆದರಿಕೆಯನ್ನು ಎದುರಿಸಿತು.

ಎಲ್ಲ ಆರು ಬಂಡಾಯ ಕಾಂಗ್ರೆಸ್ ಶಾಸಕರು ಬಿಜೆಪಿ ಟಿಕೆಟ್‌ನಲ್ಲಿ ಮತ್ತೆ ಸ್ಪರ್ಧಿಸಿದ್ದಾರೆ. ರಾಜಿಂದರ್ ರಾಣಾ, ಸುಧೀರ್ ಶರ್ಮಾ, ದೇವಿಂದರ್ ಕುಮಾರ್ ಭುಟ್ಟೊ, ಚೈತನ್ಯ ಶರ್ಮಾ, ಇಂದರ್ ದತ್ ಲಖನ್‌ಪಾಲ್ ಮತ್ತು ರವಿ ಠಾಕೂರ್ ಅವರು ಕಣದಲ್ಲಿದ್ದ ಆರು ಬಂಡಾಯ ನಾಯಕರು. ತಮ್ಮ ಪ್ರಾಮಾಣಿಕತೆಯನ್ನು ಬಿಜೆಪಿಗೆ ಮಾರಾಟ ಮಾಡಲು ಕೋಟಿಗಟ್ಟಲೆ ಸ್ವೀಕರಿಸಿದ್ದಾರೆ ಎಂದು ಸಿಎಂ ಸುಖು ಆರೋಪಿಸಿದ್ದಾರೆ.

ಶಾಸಕರ ಬಲಾಬಲ:

ಒಟ್ಟು ಕ್ಷೇತ್ರಗಳು: 68

ಕಾಂಗ್ರೆಸ್: 38

ಬಿಜೆಪಿ: 27

ಖಾಲಿ ಉಳಿದಿರುವ ಸ್ಥಾನ: 3

ಇದನ್ನೂ ಓದಿ; “ನಿಮ್ಮ ಸಹೋದರಿಯಾಗಿರುವುದಕ್ಕೆ ಹೆಮ್ಮೆಪಡುತ್ತೇನೆ..”; ರಾಹುಲ್‌ ಕುರಿತು ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಪೋಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...