Homeಫ್ಯಾಕ್ಟ್‌ಚೆಕ್ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್!!

- Advertisement -
- Advertisement -

| ಮುತ್ತುರಾಜ್ |

1. ಮೋದಿಗಿಂತ ಮನಮೋಹನ್ ಸಿಂಗ್ ಅತಿ ಹೆಚ್ಚು ವಿದೇಶಿ ಪ್ರವಾಸ ಮಾಡಿದ್ದಾರೆ: ಅಮಿತ್ ಶಾ

ಸುಳ್ಳು: ಮನಮೋಹನ್ ಸಿಂಗ್‍ಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರು ಕಡಿಮೆ ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದ ಕೈತಾಲ್‍ನಲ್ಲಿ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ.

ಸತ್ಯ: ಆದರೆ ಈ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಎರಡೂ ನಾಯಕರ ಮೊದಲ ಐದು ವರ್ಷಗಳ ಅವಧಿಯ ಸರ್ಕಾರಿ ಡೇಟಾವನ್ನು ಪರಿಶೀಲಿಸಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮನಮೋಹನ್ ಸಿಂಗ್ ಗಿಂತ ಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಕಂಡುಬಂದಿದೆ.

ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ದತ್ತಾಂಶ ಪಟ್ಟಿ ನೋಡಿದಾಗ,
ಮನಮೋಹನ್ ಸಿಂಗ್ ರವರು ಒಟ್ಟು 10 ವರ್ಷಗಳ ಆಡಳಿತದಲ್ಲಿ 72 ಬಾರಿ 93 ದೇಶಗಳಿಗೆ ಪ್ರವಾಸ ಮಾಡಿದ್ದಾರೆ

ಆದರೆ ಮೋದಿಯವರು ತಮ್ಮ ಮೊದಲ ಐದು ವಷಗಳ ಅವಧಿಯಲ್ಲಿಯೇ 49 ಬಾರಿ ಪ್ರವಾಸ ಮಾಡಿದ್ದು 93 ದೇಶಗಳಿಗೆ ಭೇಟಿ ನೀಡಿದ್ದಾರೆ. ಅಂದರೆ ಮನಮೋಹನ್‍ಸಿಂಗ್‍ಗಿಂತ ಹೆಚ್ಚು ಪ್ರವಾಸ ಮತ್ತು ಹೆಚ್ಚು ಖರ್ಚು ಕೂಡ ಮಾಡಿದ್ದಾರೆ. ಆದರೆ ಅಮಿತ್ ಶಾ ಚುನಾವಣಾ ದೃಷ್ಟಿಯಿಂದ ಸುಳ್ಳು ಹೇಳಿದ್ದಾರೆ.

2. ಗೋ ಬ್ಯಾಕ್ ಮೋದಿ ಟ್ವೀಟ್‍ಗಳು ಪಾಕಿಸ್ತಾನದಿಂದ ಮಾಡಲ್ಪಡುತ್ತಿವೆ

ಅಕ್ಟೋಬರ್ 11ರಂದು ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ಕೊಟ್ಟಾಗ ಎಂದಿನಂತೆ #GoBackModi ಎಂಬ ಟ್ವೀಟುಗಳು ಮೊಳಗಿದವು. ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಟ್ವೀಟ್‍ಗಳು ದಾಖಲಾಗಿ ನಂಬರ್1 ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಇದರಿಂದ ಸಹಜವಾಗಿ ಮೋದಿ ಮತ್ತವರ ಅಭಿಮಾನಿಗಳಿಗೆ ಮುಜುಗರವಾಗಿತ್ತು.

ಕೂಡಲೇ ವಾಟ್ಸಾಪ್ ಯೂನಿವರ್ಸಿಟಿಯ ಸಂಚುಕೋರರು ಈ ಟ್ವೀಟ್‍ಗಳು ಪಾಕಿಸ್ತಾನದಲ್ಲಿ ಆಗುತ್ತಿವೆ ಎಂದು ಸುಳ್ಳು ಹಬ್ಬಿಸಿದರು. ಇದಕ್ಕೆ ಬಕೆಟ್ ಪತ್ರಕರ್ತರು ಮತ್ತು ಗೋದಿ ಮೀಡಿಯಾಗಳು ಸಹ ಕೈ ಜೋಡಿಸಿದರು.

ವಾಸ್ತವ ಏನೆಂದರೆ 98% ಟ್ವೀಟ್ ಗಳು ಭಾರತದಿಂದಲೇ ಟ್ವೀಟಾಗಿದ್ದವು. ತಮಿಳುನಾಡು ರಾಜ್ಯವೊಂದರಲ್ಲೇ 78,000 ಟ್ವೀಟ್ ದಾಖಲಾಗಿತ್ತು. ದೆಹಲಿಯಿಂದ 45,000 ಟ್ವೀಟ್‍ಗಳು ಬಂದಿದ್ದವು… ಚಿತ್ರ ನೋಡಿ…

3 ಕನಕಪುರದ ಮರಿಗೌಡನ ದೊಡ್ಡಿಯಲ್ಲಿ ಕಾಣಿಸಿಕೊಂಡ ಏಳ್ಹೆಡೆ ಕಾಳಿಂಗನ ಪೊರೆ..

ಎರಡು ತಲೆ ಸರ್ಪ ಇದೆ, ಮೂರು ತಲೆ, ಏಳು ತಲೆ ಸರ್ಪ ಇದೆ ಎಂಬ ಸುದ್ದಿಗಳನ್ನು ಅಲ್ಲಲ್ಲಿ ಓದಿರುತ್ತೇವೆ. ಈ ಇಂಟರ್‍ನೆಟ್ ಯುಗದಲ್ಲಂತೂ ಮೊಬೈಲ್‍ನಲ್ಲಿ ಆ ರೀತಿಯ ಫೋಟೊಗಳು ಕಾಣಿಸಿಕೊಳ್ಳುತ್ತವೆ. ಜನ ಕುತೂಹಲದಿಂದ ನೋಡುವುದಲ್ಲದೇ ಫಾರ್ವಡ್ ಕೂಡ ಮಾಡಿಬಿಡುತ್ತಾರೆ. ಅಂತದ್ದೇ ಸುದ್ದಿ ರಾಮನಗರ ಜಿಲ್ಲೆಯಿಂದ ಹೊರಟಿದೆ.

ಏಳ್ಹೆಡೆ ಕಾಳಿಂಗನ ಪೊರೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಎಲ್ಲಡೆ ವೈರಲ್ ಆಗಿದೆ. ವೈಜ್ಞಾನಿಕ ಸತ್ಯ ಏನೆಂದರೆ ಒಂದಕ್ಕಿಂತ ಹೆಚ್ಚು ತಲೆಯ ಜೀವಿಗಳು ಹುಟ್ಟುತ್ತಲೇ ಸಾಯುತ್ತವೆ. ಏಕೆಂದರೆ ಒಂದು ಜೀವಿಗೆ ಒಂದಕ್ಕಿಂತ ಹೆಚ್ಚು ತಲೆಗಳಿದ್ದರೆ ಅದಕ್ಕೆ ಬಹಳಷ್ಟು ತೊಂದರೆಯಾಗುತ್ತದೆ. ಅದು ಓಡಾಡಲು ಸಾಧ್ಯವಿಲ್ಲ, ಆಹಾರ ಸೇವಿಸಲು ಸಾಧ್ಯವಿಲ್ಲ. ಹಾಗಾಗಿ ಅದು ಬಹುಬೇಗ ಸಾಯುತ್ತದೆ.

ಆದರೆ ಈ ಫೋಟೊಗಳು ಎಲ್ಲಿಯವು ಎಂದು ಹಲವರಿಗೆ ಅನುಮಾನವಿರುತ್ತದೆ. ಇದು ಫೋಟೊಶಾಪ್ ಚಿತ್ರ. ಕೆಲವು ವಿಕೃತರು ಈ ರೀತಿ ಮಾಡಿ ಹರಿಯಬಿಡುತ್ತಿದ್ದಾರೆ ಅಷ್ಟೇ..

ಒಂದು ಹಾವಿನ ಅಸಲಿ ಫೋಟೋ ಮೇಲೆ ಫೋಟೋಶಾಪ್‍ನ ಕ್ಲೋನ್ ಸ್ಟಾಂಪ್ ಟೂಲ್ ಬಳಸಿ ಒಂದೊಂದಾಗಿ ಏಳಲ್ಲ, ಹತ್ತು, ನೂರು ತಲೆಗಳನ್ನು ಬೇಕಾದರೂ ಕೂರಿಸಬಹುದಾಗಿದೆ.

4. ಇಲ್ಲಿದ್ದು ಪ್ರಯೋಜನವಿಲ್ಲ; ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ- ರಾಹುಲ್ ಗಾಂಧಿ..

ಸುಳ್ಳು: ಭಾರತದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ನನ್ನ ಬಳಿ ಕೋಟ್ಯಾಂತರ ರೂ ಹಣವಿದೆ. ಯಾವುದೇ ಸಮಯದಲ್ಲಿ ಬೇಕಾದರೂ ಲಂಡನ್‍ಗೆ ಹೋಗಿ ಸೆಟ್ಲ್ ಆಗುತ್ತೇನೆ. ನನ್ನ ಮಕ್ಕಳು ಅಮೆರಿಕದಲ್ಲಿ ಓದುತ್ತಾರೆ.. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ವಿಡಿಯೋ ಈ ವಾರ ವೈರಲ್ ಆಗಿದೆ.

ಸತ್ಯ: ಆದರೆ ಇದು ತಿರುಚಿದ ವಿಡಿಯೋವಾಗಿದೆ. ವರ್ಷದ ಹಿಂದೆ ರಾಹುಲ್ ಗಾಂಧಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರನ್ನು ಉದ್ದೇಶಿಸಿ ಮಾಡಿದ ಭಾಷಣವಾಗಿದೆ. ಆದರೆ ಆರಂಭದ 11 ಸೆಕೆಂಡ್ ವಿಡಿಯೋವನ್ನು ಕತ್ತರಿಸಿ ರಾಹುಲ್ ಗಾಂಧಿಯ ಬಗ್ಗೆ ಅಪಪ್ರಚಾರ ನಡೆಸಲು ಈ ವಿಡಿಯೋ ತಯಾರಿಸಲಾಗಿದೆ. ಹತ್ತಾರು ಮಂದಿ ಟ್ವಿಟ್ಟರ್‍ನಲ್ಲಿ ಈ ನಕಲಿ ವಿಡಿಯೋ ಲಗತ್ತಿಸಿದ್ದು ಸಾವಿರಾರು ಜನ ವೀಕ್ಷಿಸಿದ್ದಾರೆ.

5. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್

ಅಕ್ಟೋಬರ್ 11 ರಂದು ಭಾರತದ ಚನ್ನೈಗೆ ಕ್ಸಿ ಜಿನ್‍ಪಿಂಗ್ ಭೇಟಿ ಕೊಟ್ಟಾಗ ಮೋದಿಯವರು ಸಾಂಪ್ರದಾಯಿಕ ಬಿಳಿ ಅಂಗಿ ಬಿಳಿ ಲುಂಗಿ ಧರಿಸಿದ್ದರು.

ಇದನ್ನೇ ನೆಪಮಾಡಿಕೊಂಡ ಭಕ್ತರು ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಇರುವ ಹಳೆಯ ಫೋಟೊವೊಂದನ್ನು ಫೋಟೊಶಾಪ್ ಮಾಡಿ ಕ್ಸಿ ಜಿನ್‍ಪಿಂಗ್‍ಗೂ ಬಿಳಿ ಅಂಗಿ ಲುಂಗಿ ತೊಡಿಸಿಬಿಟ್ಟಿದ್ದಾರೆ. ಮೋದಿಯಿಂದ ಪ್ರಭಾವಿತನಾಗಿ ಲುಂಗಿಯಲ್ಲಿ ಪಾಕ್‍ಗೆ ಭೇಟಿಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎಂದು ಸುಳ್ಳು ಹರಡಿದ್ದಾರೆ. ಮೋದಿಯ ಇಮೇಜ್ ಅನ್ನು ಹೆಚ್ಚಿಸಲು ಇಲ್ಲಿ ಕ್ಸಿ ಜಿನ್‍ಪಿಂಗ್ ಇಮೇಜ್‍ಅನ್ನು ಫೋಟೊಶಾಪ್ ಮಾಡಲಾಗಿದೆ ಅಷ್ಟೇ.. ವಾಸ್ತವವೆಂದರೆ ಚೀನಾಗೆ ಭಾರತಕ್ಕಿಂತ ಪಾಕ್ ಅಚ್ಚುಮೆಚ್ಚಿನ ರಾಷ್ಟ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...