Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

- Advertisement -
- Advertisement -

ಲೋಕಸಭೆ ಚುನಾವಣೆ 2024ರ ಫಲಿತಾಂಶ ನಿನ್ನೆ( ಜೂನ್ 4) ಪ್ರಕಟಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿಗೆ ಹಿನ್ನಡೆಯಾಗಿದೆ. ಬಿಜೆಪಿ ಕೇವಲ 243 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಗಳಿಸಲು ವಿಫಲವಾಗಿದೆ.

ಈ ನಡುವೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದರೂ ಮೋದಿಗೆ ಅಥವಾ ಬಿಜೆಪಿಗೆ ಮತ ಹಾಕದ ಹಿಂದೂಗಳನ್ನು ಮುಸ್ಲಿಂ ವ್ಯಕ್ತಿಯೊಬ್ಬ ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಜೂನ್‌ 4ರಂದು ‘dhirendra_raghav_79’ಎಂಬ ಹೆಸರಿನ ವೆರಿಫೈಡ್ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವೈರಲ್ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದ ಜೊತೆಗೆ “ಮಂದಿರದ ಬದಲಿಗೆ ಮಸೀದಿ ನಿರ್ಮಿಸಲಾಗುವುದು” ಎಂದು ಬರೆಯಲಾಗಿದೆ. ಅಲ್ಲದೆ #dhokha #hindutemple #bjp ಎಂಬ ಹ್ಯಾಷ್‌ ಟ್ಯಾಗ್‌ಗಳನ್ನು ಕೊಡಲಾಗಿದೆ.

ವಿಡಿಯೋ ಅಪ್ಲೋಡ್ ಮಾಡಿರುವ ಇನ್‌ಸ್ಟಾಗ್ರಾಂ ಖಾತೆಯ ಬಯೋ ಪರಿಶೀಲಿಸಿದಾಗ, ಅಲ್ಲಿ ‘ಧೀರೇಂದ್ರ ರಾಘವ್’ಕಲಾವಿದ ಎಂದು ಬರೆದಿರುವುದು ಕಂಡು ಬಂದಿದೆ. ಖಾತೆಯಲ್ಲಿ ಧೀರೇಂದ್ರ ರಾಘವ್ ಸಂದರ್ಭಕ್ಕೆ ತಕ್ಕಂತೆ ವೇಷ ತೊಟ್ಟು ಮಾಡಿರುವ ಹಲವು ವಿಡಿಯೋಗಳು ಇವೆ. ಮುಸ್ಲಿಂ ವ್ಯಕ್ತಿಯಂತೆ ವೇಷ ತೊಟ್ಟು ಮಾಡಿರುವ ವಿಡಿಯೋಗಳೂ ಇವೆ.

ಅವುಗಳ ಲಿಂಕ್ ಇಲ್ಲಿದೆ, ಇಲ್ಲಿದೆ 

ಧೀರೇಂದ್ರ ರಾಘವ್ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಆತನ ಫೇಸ್‌ಬುಕ್ ಖಾತೆಯೂ ಕಂಡು ಬಂದಿದೆ. ಅದರಲ್ಲಿ ಆತ ಉತ್ತರ ಪ್ರದೇಶದ ಆಗ್ರಾದವರು ಎಂದು ಬರೆಯಲಾಗಿದೆ. ಮುಸ್ಲಿಂ ವ್ಯಕ್ತಿಯಂತೆ ವೇಷ ತೊಟ್ಟು ಹಿಂದೂಗಳಿಗೆ ಬೈದಿರುವ ವೈರಲ್ ವಿಡಿಯೋ ಕೂಡ ಆತನ ಫೇಸ್‌ಬುಕ್‌ ಖಾತೆಯಲ್ಲಿ ಕಂಡು ಬಂದಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದ ವಿಷಯವೇನೆಂದರೆ, ” ರಾಮ ಮಂದಿರ ನಿರ್ಮಾಣದ ಬಳಿಕವೂ ಮೋದಿಗೆ ಮತ ಹಾಕದ ಹಿಂದೂಗಳಿಗೆ ಮುಸ್ಲಿಂ ವ್ಯಕ್ತಿ ಬೈದಿದ್ದಾರೆ ಎಂದು ವೈರಲ್ ಮಾಡಲಾಗಿರುವ ವಿಡಿಯೋದಲ್ಲಿರುವುದು ಮುಸ್ಲಿಂ ವ್ಯಕ್ತಿಯಲ್ಲ. ಅಲ್ಲಿರುವುದು ಇದೇ ಕಲಾವಿದ ಧೀರೇಂದ್ರ ರಾಘವ್. ಈತ ಬಿಜೆಪಿ ಮತ್ತು ಹಿಂದುತ್ವದ ಪರವಾಗಿ ಆಗಾಗ ವಿಡಿಯೋ ಮಾಡುತ್ತಿರುತ್ತಾನೆ.

ಈ ಬಾರಿ ಬಿಜೆಪಿ ಬಹುಮತ ಪಡೆಯದಿರಲು ಮತ್ತು ಅಯೋಧ್ಯೆಯಲ್ಲೇ ಬಿಜೆಪಿ ಅಭ್ಯರ್ಥಿ ಸೋಲಲು ಹಿಂದೂಗಳು ಮತ ಹಾಕದಿರುವುದೇ ಕಾರಣ. ಹೀಗೆ ಆದರೆ, ಕಾಂಗ್ರೆಸ್ ಸರ್ಕಾರ ಬರಲಿದೆ. ಮಂದಿರದ ಜಾಗದಲ್ಲಿ ಮುಸ್ಲಿಮರು ಮಸೀದಿ ನಿರ್ಮಿಸಲಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ವೇಷ ತೊಟ್ಟು ಧೀರೇಂದ್ರ ರಾಘವ್ ಹೇಳಿದ್ದಾರೆ.

ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝಬೈರ್ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಧೀರೇಂದ್ರ ರಾಘವ್ ಅವರದ್ದು, ಈತ ಮುಸ್ಲಿಂ ವ್ಯಕ್ತಿಯ ವೇಷ ತೊಟ್ಟು ಹಿಂದೂ-ಮುಸ್ಲಿಂ ನಡುವೆ ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾನೆ ಎಂದಿದ್ದು, ಉತ್ತರ ಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಹೇಟ್ ಡಿಟೆಕ್ಟರ್ (Hate Detector) ಎಕ್ಸ್ ಖಾತೆಯಲ್ಲೂ ವೈರಲ್ ವಿಡಿಯೋ ಪೋಸ್ಟ್ ಮಾಡಲಾಗಿದ್ದು, “ಧೀರೇಂದ್ರ ರಾಘವ್ ಟೋಪಿ ಧರಿಸಿ ಮುಸ್ಲಿಂ ವ್ಯಕ್ತಿಯಂತೆ ನಟಿಸಿ ಹಿಂದೂಗಳನ್ನು ನಿಂದಿಸುವ ವಿಡಿಯೋವನ್ನು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಕೋಮುವಾದಿ ಹೇಳಿಕೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ” ಎಂದು ಬರೆದುಕೊಂಡಿದೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...