Homeಮುಖಪುಟ'ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ': ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಪ್ರತಿಕ್ರಿಯಿಸಿದ ಎಡರಂಗದ ಎರಡು ಪಕ್ಷಗಳು ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆಗಿನ ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ. ಮುಂದೆ ರಾಜ್ಯದಲ್ಲಿ  ಕಾಂಗ್ರೆಸ್‌ ಜೊತೆ ಯಾವುದೇ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್(AIFB) ಮತ್ತು ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP) ಜೂನ್ 5ರಂದು ಭವಿಷ್ಯದಲ್ಲಿ ಎಡರಂಗ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಮೈತ್ರಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಎಡರಂಗವು ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. ಮಾಲ್ಡಾ ದಕ್ಷಿಣದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಮಾತ್ರ ಪಡೆದುಕೊಂಡಿದೆ. ತೃಣಮೂಲ ಕಾಂಗ್ರೆಸ್ 42ರಲ್ಲಿ 29 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಡರಂಗವು 33 ಸ್ಥಾನಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿತ್ತು, ಉಳಿದ ಒಂಬತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಎಐಎಫ್‌ಬಿ ರಾಜ್ಯ ಕಾರ್ಯದರ್ಶಿ ನರೇನ್ ಚಟರ್ಜಿ ಈ ಕುರಿತು ಮಾತನಾಡಿದ್ದು, 2019 ಮತ್ತು 2024ರ ಎರಡೂ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವಿನ ಮೈತ್ರಿ ಕೆಲಸ ಮಾಡಲಿಲ್ಲ. ಎಐಎಫ್‌ಬಿ ಸ್ಪರ್ಧಿಸಿದ್ದ ಬರಾಸತ್, ಪುರುಲಿಯಾ ಮತ್ತು ಕೂಚ್‌ಬೆಹಾರ್‌ಗಳ ಎಲ್ಲಾ ಮೂರು ಕ್ಷೇತ್ರಗಳಲ್ಲಿ ಸೋತಿದೆ. ಪಶ್ಚಿಮ ಬಂಗಾಳದಾದ್ಯಂತ 0.24% ಮತಗಳಿತ್ತು. ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರೂ ಪುರುಲಿಯಾ ಮತ್ತು ಕೂಚ್‌ಬೆಹರ್ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಎಂದು ಹೇಳಿದ್ದಾರೆ.

ಎಡರಂಗ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯನ್ನು ಸಿಪಿಐ(ಎಂ) ನಿರ್ಧರಿಸಿದೆ, ನಮ್ಮನ್ನು ಸಂಪರ್ಕಿಸಿಲ್ಲ. ಈ ಹಿಂದೆ ಬಂಗಾಳದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸಗಳ ಹೊರೆಯನ್ನು ಎಡಪಕ್ಷಗಳಾದ ನಾವೇಕೆ ಹೊರಬೇಕು? ನಾವು ಮೈತ್ರಿ ಮಾಡಿಕೊಂಡರೆ, ಜವಾಬ್ದಾರಿಯನ್ನು ಹಂಚಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಸೈದ್ಧಾಂತಿಕವಾಗಿ ವಿರೋಧಿಸುವ ಕಾಂಗ್ರೆಸ್ ಜೊತೆ ಸೀಟು ಹಂಚಿಕೊಳ್ಳುವ ಉದ್ದೇಶ ನಮ್ಮ ಪಕ್ಷಕ್ಕಿಲ್ಲ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಯಾವಾಗಲೂ ಜಗಳವಾಡುತ್ತಿವೆ. ನಾವು ಇದನ್ನು ಸಂಪೂರ್ಣವಾಗಿ ಎಡರಂಗ ಮತ್ತು ವಿಶೇಷವಾಗಿ ಸಿಪಿಐ(ಎಂ) ಜೊತೆ ಚರ್ಚಿಸುತ್ತೇವೆ ಮತ್ತು ಈ ಮೈತ್ರಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳುತ್ತೇವೆ ಎಂದು ಚಟರ್ಜಿ ಹೇಳಿದ್ದಾರೆ.

ಇದನ್ನು ಓದಿ: ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ವಾಪಾಸ್ಸಾಗಲು ಮುಂದಾದ ಅಜಿತ್‌ ಬಣದ ಬಹುಪಾಲು ಶಾಸಕರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...