Homeಮುಖಪುಟವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ 'ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ'

ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’ (ವಿವಾಹ ಪೂರ್ವ ಕಾರ್ಯಕ್ರಮ) ವಿದೇಶಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜುಲೈ 12, 2024ರಂದು ಉದ್ಯಮಿ ವಿರೇನ್ ಮರ್ಚೆಂಟ್ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ನಡೆಯಲಿದೆ. ಅದಕ್ಕೂ ಮುನ್ನ ವಿವಿಧ ರೀತಿಯಲ್ಲಿ ಅದ್ದೂರಿ ವಿವಾಹ ಪೂರ್ವ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ.

ಮೊದಲ ವಿವಾಹ ಪೂರ್ವ ಕಾರ್ಯಕ್ರಮ ಅಂಬಾನಿ ಕುಟುಂಬದ ಮೂಲ ಸ್ಥಳ ಗುಜರಾತ್‌ನ ಜಾಮಾನಗರದಲ್ಲಿ ಅದ್ದೂರಿಯಾಗಿನ ನಡೆದಿತ್ತು. ಇದಕ್ಕಾಗಿ ಭಾರತೀಯ ವಾಯುನೆಲೆಯ ಅತಿ ಸೂಕ್ಷ್ಮ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಿ ದುರ್ಬಳಕೆ ಮಾಡಿಕೊಂಡಿರುವುದು ಗೊತ್ತೇ ಇದೆ.

ವರದಿಗಳ ಪ್ರಕಾರ, ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ 1,200ಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಂಡಿದ್ದರು. ಬೆಜ್ವೆಲ್ಡ್ ಆನೆಗಳು ಮತ್ತು ಅಮೆರಿಕನ್ ಗಾಯಕಿ ರಿಹಾನ್ನಾ ಅವರ ಪ್ರದರ್ಶನ ಸೇರಿದಂತೆ ವಿವಿಧ ರೀತಿಯಲ್ಲಿ ಈ ಕಾರ್ಯಕ್ರಮಕ್ಕೆ ಅಂಬಾನಿ ಸುಮಾರು 150 ಮಿಲಿಯನ್ ಡಾಲರ್ ಖರ್ಚು ಮಾಡಿದ್ದಾರೆ.

ಎರಡನೇ ಕಾರ್ಯಕ್ರಮ ‘ಕ್ರೂಸ್ ಪಾರ್ಟಿ’

ಜಾಮಾನಗರದಲ್ಲಿ ಒಂದು ವಿವಾಹ ಪೂರ್ವ ಕಾರ್ಯಕ್ರಮ ಮುಗಿಸಿದ್ದ ಅಂಬಾನಿ ಕುಟುಂಬ, ಮೆಡಿಟರೇನಿಯನ್ ಸಮುದ್ರದಲ್ಲಿ ಐಷರಾಮಿ ಕ್ರೂಸ್‌ನಲ್ಲಿ ಎರಡನೇ ಕಾರ್ಯಕ್ರಮ ಆಯೋಜಿಸಿತ್ತು. ಈ ಕ್ರೂಸ್ ವಿವಿಧ ದೇಶಗಳನ್ನು ಸುತ್ತಾಡಿದೆ.

ಇಟಲಿಯ ದ್ವೀಪ ಸಿಸಿಲಿಯ ರಾಜಧಾನಿಯಾದ ಪಲೆರ್ಮೊದಿಂದ ಫ್ರಾನ್ಸ್‌ನ ದಕ್ಷಿಣಕ್ಕೆ 4 ದಿನಗಳ ಕ್ರೂಸ್ ಪಾರ್ಟಿ ಆಯೋಜಿಸಲಾಗಿತ್ತು. ನಾಲ್ಕು ದಿನಗಳಲ್ಲಿ ರೋಮ್, ಪೋರ್ಟೊಫಿನೋ, ಜಿನೋವಾ ಮತ್ತು ಕೇನ್ಸ್‌ಗಳಲ್ಲಿ ಕ್ರೂಸ್‌ ಸಂಚರಿಸಿದೆ. ಅಲ್ಲಲ್ಲಿ ಕಡಲ ತೀರಗಳಲ್ಲಿ ಪಾರ್ಟಿ ನಡೆದಿದೆ.

ಮೇ 29ರಂದು ಪಲೆರ್ಮೊದಿಂದ ಹೊರಟ ಕ್ರೂಸ್, ಇಟಾಲಿಯನ್ ಬೇಸಿಗೆಯನ್ನು ಅನುಭವಿಸುವ ಗುರಿಯೊಂದಿಗೆ ‘ಲಾ ಡೊಲ್ಸ್ ವೀಟಾ’ ಎಂಬ ಶೀರ್ಷಿಕೆಯ ಪಾರ್ಟಿಗಾಗಿ ಜೂನ್ 1ರಂದು ಆಗ್ನೆಯ ಜಿನೋವಾದ ಪೋರ್ಟೊಫಿನೋ ಬಂದರಿಗೆ ತಲುಪಿತ್ತು.

ಪೋರ್ಟೊಫಿನೋದಲ್ಲಿ ನಡೆದ ಪಾರ್ಟಿಯ ವಿಡಿಯೋ ಎಲ್ಲೂ ಸೋರಿಕೆಯಾಗದಂತೆ ತಡೆಯಲು ಮೊಬೈಲ್ ಫೋನ್ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಆದರೂ, ಕೆಲವೊಂದು ವಿಡಿಯೋಗಳು ಸೋರಿಕೆಯಾಗಿವೆ. ಅದರ ಪ್ರಕಾರ, ಅಮೆರಿಕನ್ ಬ್ಯಾಂಡ್ ಬ್ಯಾಕ್‌ಸ್ಟ್ರೀಟ್ ಬಾಯ್ಸ್ ಮತ್ತು ಗಾಯಕಿ ಕೇಟಿ ಪೆರ್ರಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸುಮಾರು 800 ಜನರು ಇದರಲ್ಲಿ ಪಾಲ್ಗೊಂಡಿದ್ದರು.

ಕ್ರೂಸ್ ಪಾರ್ಟಿ ವಿರುದ್ದ ಆಕ್ರೋಶಗೊಂಡ ಸ್ಥಳೀಯ ಜನರು

ಅಂಬಾನಿ ಮಗನ ವಿವಾವ ಪೂರ್ವ ಕ್ರೂಸ್ ಪಾರ್ಟಿಯ ವಿರುದ್ದ ಪೋರ್ಟೊಫಿನೋದ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಕಾರಣ, ಕ್ರೂಸ್ ಪಾರ್ಟಿಯ ದಿನ ಅಲ್ಲಿನ ಸ್ಥಳೀಯ ನಿವಾಸಿಗಳು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಐ‍‍‍‍‍ಷಾರಾಮಿ ಪಾರ್ಟಿಗಾಗಿ ಪೋರ್ಟೊಫಿನೋ ಬಂದರಿಗೆ ಜನರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಪೋರ್ಟೊಫಿನೋದಲ್ಲಿ ಈ ಹಿಂದೆಯೂ ಹಲವಾರು ಶ್ರೀಮಂತರ ಮದುವೆಗಳು ನಡೆದಿವೆ. ಆದರೆ, ಜನರಿಗೆ ತೊಂದರೆ ಕೊಟ್ಟಿರಲಿಲ್ಲ. ಆಸ್ಟ್ರೇಲಿಯನ್ ಗಾಯಕ ಸಿಯಾ ಮತ್ತು ರಿಯಾಲಿಟಿ ಟಿವಿ ತಾರೆ ಕೌರ್ಟ್ನಿ ಕಾರ್ಡಶಿಯಾನ್ ಇದೇ ಸ್ಥಳದಲ್ಲಿ ಮದುವೆ ಮಾಡಿಕೊಂಡಿದ್ದರು. ಆದರೆ, ಸ್ಥಳೀಯ ಜನರಿಗೆ ಯಾವುದೇ ತೊಂದರೆಯಾಗಿರಲಿಲ್ಲ.

ವರದಿಗಳ ಪ್ರಕಾರ, ಪೋರ್ಟೊಫಿನೋದ ಕಾರ್ಯಕ್ರಮದ ಆಹಾರಕ್ಕಾಗಿ ಅಲ್ಲಿನ ಸ್ಥಳೀಯ 10ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳಿಗೆ 7 ಸಾವಿರ ಡಾಲರ್‌ನಿಂದ 10 ಸಾವಿರ ಅಮೆರಿಕನ್ ಡಾಲರ್ ನೀಡಲಾಗಿದೆ.

ಅಂಬಾನಿ ಮಗನ ವಿವಾಹ ಪೂರ್ವ ಕಾರ್ಯಕ್ರಮದ ಕುರಿತು ಪೋರ್ಟೊಫಿನೋದ ಸ್ಥಳೀಯರು ಮತ್ತು ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋರ್ಟೊಫಿನೋದಲ್ಲಿ ಇದುವರೆಗೆ ಹಲವಾರು ಸೆಲೆಬ್ರೆಟಿಗಳ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿವೆ. ಆದರೆ, ಇದುವರೆಗೆ ಯಾರೂ ಸ್ಥಳೀಯರಿಗೆ ತೊಂದರೆ ಕೊಟ್ಟಿಲ್ಲ. ಅಂಬಾನಿ ಕುಟುಂಬದ ಖಾಸಗಿ ಕಾರ್ಯಕ್ರಮಕ್ಕೆ ಇಡೀ ಪಟ್ಟಣವನ್ನು ಮುಚ್ಚಲಾಗಿತ್ತು. ಇದರಿಂದ ಜನರಿಗೆ ಬಹಳ ತೊಂದರೆಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಕ್ರೂಸ್ ಪಾರ್ಟಿಯಲ್ಲಿದ್ದವರು ನಡೆದುಕೊಂಡಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಜೂನ್ 2ರಂದು ಇಡೀ ರಾತ್ರಿ ಜೋರಾಗಿ ಮ್ಯೂಸಿಕ್ ಇಟ್ಟು, ಕುಣಿದು ಕುಪ್ಪಳಿಸುವ ಮೂಲಕ ಪಾರ್ಟಿಯಲ್ಲಿದ್ದವರು ಕಿರಿ ಕಿರಿ ಉಂಟು ಮಾಡಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

‘tadkeshwari (@ladytadkeshwari) ಎಂಬ ಎಕ್ಸ್ ಬಳಕೆದಾರರೊಬ್ಬರು ಕಾರ್ಯಕ್ರಮದ ಕುರಿತ ಪತ್ರಿಕಾ ವರದಿಯನ್ನು ಹಂಚಿಕೊಂಡು “ಹಣದಿಂದ ಶಿಷ್ಟಾಚಾರ ಮತ್ತು ಗುಣನಡತೆಯನ್ನು ಖರೀದಿಸಲು ಸಾಧ್ಯವಿಲ್ಲ! ಶೇಮ್ ಶೇಮ್ ಶೇಮ್!” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ, ವಿಭಿನ್ನವಾಗಿ ಐಷಾರಾಮಿ ಕ್ರೂಸ್ ಶಿಪ್‌ನಲ್ಲಿ ವಿವಾಹಪೂರ್ವ ಕಾರ್ಯಕ್ರಮ ಆಯೋಜಿಸಿದ್ದ ಅಂಬಾನಿ ಕುಟುಂಬ, ಸ್ಥಳೀಯರಿಗೆ ತೊಂದರೆ ಕೊಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸಿದೆ.

ಇದನ್ನೂ ಓದಿ : ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...