Homeಮುಖಪುಟಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

ಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

- Advertisement -
- Advertisement -

ಇಸ್ರೇಲ್ ಗಾಝಾದಲ್ಲಿ ನರಮೇಧವನ್ನು ಮುಂದುವರಿಸಿದ್ದು, ಗಾಝಾ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಗೆ  27 ನಿರಾಶ್ರಿತರು ಬಲಿಯಾಗಿದ್ದಾರೆ. ಅಕ್ಟೋಬರ್ 7ರ ದಾಳಿಯಲ್ಲಿ ಭಾಗಿಯಾಗಿರುವ ಹಮಾಸ್‌ ಸಶಸ್ತ್ರದಾರಿಗಳನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್‌ ಹೇಳಿದರೆ, ಅಮಾಯಕ ನಿರಾಶ್ರಿತರನ್ನು ಹತ್ಯೆ ಮಾಡಲಾಗಿದೆ ಎಂದು ಗಾಝಾ ಮಾಧ್ಯಮಗಳು ವರದಿ ಮಾಡಿದೆ.

ಮಧ್ಯ ಗಾಝಾದ ನುಸಿರಾತ್‌ನಲ್ಲಿರುವ ಯುಎನ್ ಶಾಲೆಯಲ್ಲಿ ಹಮಾಸ್ ಕಮಾಂಡ್ ಪೋಸ್ಟ್ ಅಡಗಿಕೊಂಡಿದೆ ಎಂಬ ಇಸ್ರೇಲ್‌ನ ಹೇಳಿಕೆಗಳನ್ನು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿಯ ನಿರ್ದೇಶಕ ಇಸ್ಮಾಯಿಲ್ ಅಲ್-ತವಾಬ್ತಾ ತಿರಸ್ಕರಿಸಿದ್ದಾರೆ. ಡಜನ್‌ಗಟ್ಟಲೆ ನಿರಾಶ್ರಿತ ಜನರ ವಿರುದ್ಧ ನಡೆಸಿದ ಕ್ರೂರ ಅಪರಾಧವನ್ನು ಸಮರ್ಥಿಸಲು ಸುಳ್ಳು ಕಪೋಲಕಲ್ಪಿತ ಕಥೆಗಳನ್ನು ಇಸ್ರೇಲ್‌ ಹೇಳುತ್ತಿದೆ ಎಂದು ತವಾಬ್ತಾ ಹೇಳಿದ್ದಾರೆ.

ಇಸ್ರೇಲ್‌ ಫೈಟರ್ ಜೆಟ್‌ ದಾಳಿಯ ಮೊದಲು, ನಾಗರಿಕರಿಗೆ ಹಾನಿಯಾಗುವ ಅಪಾಯವನ್ನು ಕಡಿಮೆ ಮಾಡಲು ಮಿಲಿಟರಿ ಕ್ರಮಗಳನ್ನು ತೆಗೆದುಕೊಂಡಿದೆ. ಕದನ ವಿರಾಮ ಮಾತುಕತೆ ಸಂದರ್ಭದಲ್ಲಿ ದಾಳಿಗೆ ಯಾವುದೇ ಅಡ್ಡಿ ಇಲ್ಲ ಎಂದು ಇಸ್ರೇಲ್ ಹೇಳಿದೆ.

ಈ ಬೆಳವಣಿಗೆ ಕಳೆದ ವಾರ ಯುಎಸ್ ಅಧ್ಯಕ್ಷ ಜೋ ಬಿಡೆನ್ ಪ್ರಸ್ತಾಪಿಸಿದ ಒಪ್ಪಂದದ ಪ್ರಸ್ತಾಪಕ್ಕೆ ಸ್ಪಷ್ಟವಾದ ಹೊಡೆತವಾಗಿದೆ. ಹಮಾಸ್ ನಾಯಕ ಗಾಝಾದಲ್ಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಇಸ್ರೇಲ್‌ ಸೇನಾ ವಾಪಸಾತಿಗೆ ಆಗ್ರಹಿಸಿದ್ದರು.

ಕದನ ವಿರಾಮ ಒಪ್ಪಂದವನ್ನು ವಾಷಿಂಗ್ಟನ್ ಬಲವಾಗಿ ಸಮರ್ಥಿಸಿದೆ. CIA ನಿರ್ದೇಶಕ ವಿಲಿಯಂ ಬರ್ನ್ಸ್ ಕದನ ವಿರಾಮ ಪ್ರಸ್ತಾಪದ ಕುರಿತು ಚರ್ಚಿಸಲು ಮಧ್ಯವರ್ತಿಗಳಾದ ಕತಾರ್ ಮತ್ತು ಈಜಿಪ್ಟ್‌ನ ಹಿರಿಯ ಅಧಿಕಾರಿಗಳನ್ನು ಬುಧವಾರ ದೋಹಾದಲ್ಲಿ ಭೇಟಿಯಾಗಿದ್ದಾರೆ.

ನವೆಂಬರ್‌ನಲ್ಲಿ ಸಂಕ್ಷಿಪ್ತ ಕದನ ವಿರಾಮದ ನಂತರ ಕದನ ವಿರಾಮದ ಎಲ್ಲಾ ಪ್ರಯತ್ನಗಳು ಈವರೆಗೆ ವಿಫಲವಾಗಿವೆ. ಹಮಾಸ್ ಸಂಘರ್ಷಕ್ಕೆ ಶಾಶ್ವತ ಅಂತ್ಯದ ಬೇಡಿಕೆಯನ್ನು ಒತ್ತಾಯಿಸುತ್ತದೆ, ಆದರೆ ಇಸ್ರೇಲ್ ಹಮಾಸ್‌ನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದಾಗಿ ಹೇಳಿಕೊಂಡಿದೆ. ಕಳೆದ ಹಲವು ದಿನಗಳಿಂದ ಕದನ ವಿರಾಮಗಳ ಬಗ್ಗೆ ಬಿಡೆನ್ ಪದೇ ಪದೇ ಘೋಷಿಸಿದ್ದಾರೆ. ಆದರೆ ಯಾವುದೇ ಕದನ ವಿರಾಮ ಕಾರ್ಯರೂಪಕ್ಕೆ ಬಂದಿಲ್ಲ ಎನ್ನುವುದನ್ನು ಗಮನಿಸಬಹುದಾಗಿದೆ.

ಹಮಾಸ್ ಅ.7ರಂದು ಇಸ್ರೇಲ್‌ ಮೇಲೆ ದಾಳಿ ಮಾಡಿದ ಬಳಿಕ ಯುದ್ಧ ಘೋಷಿಸಿ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಗೆ 36,000ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...