Homeಮುಖಪುಟಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

ಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಯೋಧ್ಯೆಯ ರಾಮಮಂದಿರ ಇರುವ ಉತ್ತರ ಪ್ರದೇಶದ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷ(ಎಸ್‌ಪಿ) ಅವಧೇಶ್ ಪ್ರಸಾದ್ 5,54,289 ಮತಗಳನ್ನು ಪಡೆದರೆ, ಬಿಜೆಪಿಯ ಲಲ್ಲು ಸಿಂಗ್ 4,99,722 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಭಾರತದ ಹಿಂದೂಗಳ ಐನೂರು ವರ್ಷಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣದ ಬಳಿಕವೂ ಬಿಜೆಪಿ ಅಯೋಧ್ಯೆಯಲ್ಲಿ ಹೇಗೆ ಸೋತಿತು? ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಮೋದಿಯ ಕೆಲ ಸಾಮಾಜಿಕ ಜಾಲತಾಣ ಅಭಿಮಾನಿಗಳು ಅಯೋಧ್ಯೆಯ ಜನರಿಗೆ ಹಿಂದೂ ವಿರೋಧಿಗಳ ಪಟ್ಟ ಕಟ್ಟಿಯೂ ಆಗಿದೆ.

ಬಿಜೆಪಿ ಕೇವಲ ಧರ್ಮ ರಾಜಕಾರಣ ಮಾಡಿರುವುದು. ಅಭಿವೃದ್ದಿಯ ಕೊರತೆ ಮತ್ತು ಯುವಜನರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲವಾಗಿರುವುದು ಸೋಲಿಗೆ ಕಾರಣ ಎಂದು ಕೆಲ ಮಾಧ್ಯಮಗಳು ಹೇಳಿವೆ. ಇನ್ನೂ ಕೆಲ ಮಾಧ್ಯಮಗಳು ದಲಿತ ಮತಗಳು ಕೆಲಸ ಮಾಡಿವೆ ಎಂದಿವೆ.

ಆದರೆ, ಧರ್ಮ ರಾಜಕಾರಣ, ಅಭಿವೃದ್ದಿಯ ಕೊರತೆಗಿಂತಲೂ ಮುಖ್ಯವಾಗಿ ಅಯೋಧ್ಯೆಯಲ್ಲಿ ಬಡ ಜನರ ಮನೆಗಳನ್ನು ಸರ್ಕಾರ ಕೆಡವಿರುವುದೇ ಬಿಜೆಪಿಯ ಸೋಲಿಗೆ ಕಾರಣ. ಇದು ತಳಮಟ್ಟದಲ್ಲಿ ಬಿಜೆಪಿಗೆ ಪೆಟ್ಟು ಕೊಟ್ಟಿದೆ ಎಂದು ಅನೇಕ ಜನರು ಹೇಳುತ್ತಿದ್ದಾರೆ.

ರಾಮಮಂದಿರಕ್ಕೆ ಬರುವ ಜನರ ಉಪಯೋಗಕ್ಕೆಂದು ಅಭಿವೃದ್ದಿಯ ಹೆಸರಿನಲ್ಲಿ ಯೋಗಿ ಸರ್ಕಾರ ಬಡ ಜನರ ಮನೆ, ಅಂಗಡಿಗಳ ಮೇಲೆ ಬೇಕಾಬಿಟ್ಟಿ ಬುಲ್ಡೋಝರ್ ಹತ್ತಿಸಿದ್ದಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ, ಅಗಲವಾದ ರಸ್ತೆ, ಸುಂದರ ವೃತ್ತ ನಿರ್ಮಾಣವಾಗಿದೆ. ವಿಶಿಷ್ಟ ದಾರಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಸರಣಿ ವರದಿ ಮಾಡಿದ್ದ ಮುಖ್ಯವಾಹಿನಿ ಮಾಧ್ಯಮಗಳು, ಅಲ್ಲಿ ಇವೆಲ್ಲದಕ್ಕೆ ಕೆಡವಿದ್ದ ಬಡವರ ಜೀವನದ ಕುರಿತು ಎಂದೂ ಮಾತೆತ್ತಿಲ್ಲ. ಆದರೆ, ಕೆಲ ಜನಪರ ಮಾಧ್ಯಮಗಳು ಅಭಿವೃದ್ದಿಯ ಇನ್ನೊಂದು ಮುಖವನ್ನು ತೆರದಿಟ್ಟಿತ್ತು. ಇದೀಗ ಮತದಾರರು ಅದನ್ನು ಸಂಪೂರ್ಣವಾಗಿ ಬಹಿರಂಗಗೊಳಿಸಿದ್ದಾರೆ.

ರಾಮ ಮಂದಿರಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಮನೆ ಕೆಡವುವಾಗ ಕಣ್ಣೀರು ಹಾಕಿದ ತಾಯಂದಿರಿಗೆ ಲೆಕ್ಕವಿಲ್ಲ. ಆದರೆ, ಅಂಧ ಸರ್ಕಾರಕ್ಕೆ ಅದು ಕಾಣಿಸಿರಲಿಲ್ಲ. ಈಗ ತಮ್ಮ ಅಭ್ಯರ್ಥಿ ಸೋತಾಗ ಬಿಜೆಪಿಗೆ ಮನವರಿಕೆಯಾಗಿರಬಹುದು.

millenniumpost.in ವರದಿಯ ಪ್ರಕಾರ, ಅಯೋಧ್ಯೆಯ ರಾಮಮಂದಿರಕ್ಕೆ ತೆರಳುವ ರಸ್ತೆ ಅಗಲೀಕರಣ ಸೇರಿದಂತೆ ಇತರ ಅಭಿವೃದ್ದಿ ಕಾರ್ಯಗಳಿಗೆ, ಅಲ್ಲಿನ ಬಡ ಜನರ ಸುಮಾರು 4 ಸಾವಿರ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗಿದೆ. ಜನರು ರಾಮಮಂದಿರಕ್ಕೆಂದು ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಏಕೆಂದರೆ, ಅವರಿಗೆ ಹಿಂದೂ ವಿರೋಧಿಗಳು ಎಂದೆನಿಸಿಕೊಳ್ಳುವ ಆತಂಕವಿತ್ತು.

ಕೇವಲ ಮನೆ, ಅಂಗಡಿಗಳು ಮಾತ್ರವಲ್ಲದೆ, ದೊಡ್ಡ ಮಂದಿರಕ್ಕಾಗಿ ನೂರಾರು ವರ್ಷ ಹಳೆಯ ಸಣ್ಣ ಮಂದಿರಗಳನ್ನು ಕೆಡವಲಾಗಿದೆ. ಇದೂ ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಮಮಂದಿರದ ಸಂಪೂರ್ಣ ಉಸ್ತುವಾರಿಯನ್ನು ರಾಮಂದಿರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ವಹಿಸಿಕೊಂಡಿತ್ತು. ಅಲ್ಲಿ ಸ್ಥಳೀಯರಿಗೆ, ಹಿಂದೂ ಸನ್ಯಾಸಿಗಳಿಗೆ ಯಾವುದೇ ಮರ್ಯಾದೆ ಇರಲಿಲ್ಲ.

ರಾಮಮಂದಿರ ಉದ್ಘಾಟನೆಯಾದ ಬಳಿಕ ವಾಹನ ಸಂಚಾರಕ್ಕೆ ನಿಯಮಗಳನ್ನು ರೂಪಿಸಲಾಗಿದೆ. ಇದರಿಂದ ಸ್ಥಳೀಯ ಜನರು ಈ ಹಿಂದಿನಂತೆ ಓಡಾಡಲು ಆಗುತ್ತಿಲ್ಲ. ಇವೆಲ್ಲವೂ ಜನರು ಬಿಜೆಪಿ ವಿರುದ್ದ ಅಸಮಾಧಾನಗೊಳ್ಳಲು ಕಾರಣ ಎಂದು millenniumpost.in ಹೇಳಿದೆ.

ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮ ಅಭಿವೃದ್ದಿಯಾಗಿದೆ. ಸಣ್ಣ ಪಟ್ಟಣ ಅಯೋಧ್ಯೆಗೆ 5 ಸ್ಟಾರ್ ಹೋಟೆಲ್, ಹೈಟೆಕ್ ವಿಮಾನ, ರೈಲು ನಿಲ್ದಾಣಗಳು ಬಂದಿವೆ ಎಂದು ಹೊರಗಿನವರು ಕೊಂಡಾಡುತ್ತಿದ್ದಾರೆ. ಆದರೆ, ಇವುಗಳಿಂದ ಅಯೋಧ್ಯೆಯ ಸುಮಾರು 40 ಸಾವಿರ ಜನರು ತಮ್ಮ ಮನೆ, ಮಠ ಜೀವನ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಊಟ, ವಸತಿ, ವಸ್ತ್ರ ಒಬ್ಬ ಮನುಷ್ಯನ ಮೂಲಭೂತ ಅವಶ್ಯಕತೆಗಳು. ಇವುಗಳನ್ನು ದೊರಕಿಸಿಕೊಡುವುದೇ ನಿಜವಾದ ಅಭಿವೃದ್ದಿ. ಕೇವಲ ಮೆಟ್ರೋ ರೈಲುಗಳು, ಸೇತುವೆಗಳು, ಎಕ್ಸ್‌ಪ್ರೆಸ್‌ ವೇಗಳು ಜನರ ಹೊಟ್ಟೆ ತುಂಬಿಸದು. ಅಯೋಧ್ಯೆಯ ಜನರಿಗೆ ಏನು ಬೇಕಿತ್ತು, ನಾವು ಏನು ಕೊಟ್ಟಿದ್ದೇವೆ ಎಂದು ಈ ಚುನಾವಣೆಯ ಬಳಿಕ ಬಿಜೆಪಿಗೆ ಅರ್ಥವಾಗಿರಬಹುದು.

ಇದನ್ನೂ ಓದಿ : ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...