Homeಮುಖಪುಟಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

ಅಭಿವೃದ್ದಿಯ ಹೆಸರಿನಲ್ಲಿ ಬಡ ಜನರ ಮನೆ ಕೆಡವಿರುವುದೇ ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ?

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಯೋಧ್ಯೆಯ ರಾಮಮಂದಿರ ಇರುವ ಉತ್ತರ ಪ್ರದೇಶದ ಫೈಝಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವ ಕುರಿತು ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಫೈಝಾಬಾದ್‌ನಲ್ಲಿ ಸಮಾಜವಾದಿ ಪಕ್ಷ(ಎಸ್‌ಪಿ) ಅವಧೇಶ್ ಪ್ರಸಾದ್ 5,54,289 ಮತಗಳನ್ನು ಪಡೆದರೆ, ಬಿಜೆಪಿಯ ಲಲ್ಲು ಸಿಂಗ್ 4,99,722 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಭಾರತದ ಹಿಂದೂಗಳ ಐನೂರು ವರ್ಷಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣದ ಬಳಿಕವೂ ಬಿಜೆಪಿ ಅಯೋಧ್ಯೆಯಲ್ಲಿ ಹೇಗೆ ಸೋತಿತು? ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಮೋದಿಯ ಕೆಲ ಸಾಮಾಜಿಕ ಜಾಲತಾಣ ಅಭಿಮಾನಿಗಳು ಅಯೋಧ್ಯೆಯ ಜನರಿಗೆ ಹಿಂದೂ ವಿರೋಧಿಗಳ ಪಟ್ಟ ಕಟ್ಟಿಯೂ ಆಗಿದೆ.

ಬಿಜೆಪಿ ಕೇವಲ ಧರ್ಮ ರಾಜಕಾರಣ ಮಾಡಿರುವುದು. ಅಭಿವೃದ್ದಿಯ ಕೊರತೆ ಮತ್ತು ಯುವಜನರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ವಿಫಲವಾಗಿರುವುದು ಸೋಲಿಗೆ ಕಾರಣ ಎಂದು ಕೆಲ ಮಾಧ್ಯಮಗಳು ಹೇಳಿವೆ. ಇನ್ನೂ ಕೆಲ ಮಾಧ್ಯಮಗಳು ದಲಿತ ಮತಗಳು ಕೆಲಸ ಮಾಡಿವೆ ಎಂದಿವೆ.

ಆದರೆ, ಧರ್ಮ ರಾಜಕಾರಣ, ಅಭಿವೃದ್ದಿಯ ಕೊರತೆಗಿಂತಲೂ ಮುಖ್ಯವಾಗಿ ಅಯೋಧ್ಯೆಯಲ್ಲಿ ಬಡ ಜನರ ಮನೆಗಳನ್ನು ಸರ್ಕಾರ ಕೆಡವಿರುವುದೇ ಬಿಜೆಪಿಯ ಸೋಲಿಗೆ ಕಾರಣ. ಇದು ತಳಮಟ್ಟದಲ್ಲಿ ಬಿಜೆಪಿಗೆ ಪೆಟ್ಟು ಕೊಟ್ಟಿದೆ ಎಂದು ಅನೇಕ ಜನರು ಹೇಳುತ್ತಿದ್ದಾರೆ.

ರಾಮಮಂದಿರಕ್ಕೆ ಬರುವ ಜನರ ಉಪಯೋಗಕ್ಕೆಂದು ಅಭಿವೃದ್ದಿಯ ಹೆಸರಿನಲ್ಲಿ ಯೋಗಿ ಸರ್ಕಾರ ಬಡ ಜನರ ಮನೆ, ಅಂಗಡಿಗಳ ಮೇಲೆ ಬೇಕಾಬಿಟ್ಟಿ ಬುಲ್ಡೋಝರ್ ಹತ್ತಿಸಿದ್ದಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ, ಅಗಲವಾದ ರಸ್ತೆ, ಸುಂದರ ವೃತ್ತ ನಿರ್ಮಾಣವಾಗಿದೆ. ವಿಶಿಷ್ಟ ದಾರಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಸರಣಿ ವರದಿ ಮಾಡಿದ್ದ ಮುಖ್ಯವಾಹಿನಿ ಮಾಧ್ಯಮಗಳು, ಅಲ್ಲಿ ಇವೆಲ್ಲದಕ್ಕೆ ಕೆಡವಿದ್ದ ಬಡವರ ಜೀವನದ ಕುರಿತು ಎಂದೂ ಮಾತೆತ್ತಿಲ್ಲ. ಆದರೆ, ಕೆಲ ಜನಪರ ಮಾಧ್ಯಮಗಳು ಅಭಿವೃದ್ದಿಯ ಇನ್ನೊಂದು ಮುಖವನ್ನು ತೆರದಿಟ್ಟಿತ್ತು. ಇದೀಗ ಮತದಾರರು ಅದನ್ನು ಸಂಪೂರ್ಣವಾಗಿ ಬಹಿರಂಗಗೊಳಿಸಿದ್ದಾರೆ.

ರಾಮ ಮಂದಿರಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಮನೆ ಕೆಡವುವಾಗ ಕಣ್ಣೀರು ಹಾಕಿದ ತಾಯಂದಿರಿಗೆ ಲೆಕ್ಕವಿಲ್ಲ. ಆದರೆ, ಅಂಧ ಸರ್ಕಾರಕ್ಕೆ ಅದು ಕಾಣಿಸಿರಲಿಲ್ಲ. ಈಗ ತಮ್ಮ ಅಭ್ಯರ್ಥಿ ಸೋತಾಗ ಬಿಜೆಪಿಗೆ ಮನವರಿಕೆಯಾಗಿರಬಹುದು.

millenniumpost.in ವರದಿಯ ಪ್ರಕಾರ, ಅಯೋಧ್ಯೆಯ ರಾಮಮಂದಿರಕ್ಕೆ ತೆರಳುವ ರಸ್ತೆ ಅಗಲೀಕರಣ ಸೇರಿದಂತೆ ಇತರ ಅಭಿವೃದ್ದಿ ಕಾರ್ಯಗಳಿಗೆ, ಅಲ್ಲಿನ ಬಡ ಜನರ ಸುಮಾರು 4 ಸಾವಿರ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗಿದೆ. ಜನರು ರಾಮಮಂದಿರಕ್ಕೆಂದು ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಏಕೆಂದರೆ, ಅವರಿಗೆ ಹಿಂದೂ ವಿರೋಧಿಗಳು ಎಂದೆನಿಸಿಕೊಳ್ಳುವ ಆತಂಕವಿತ್ತು.

ಕೇವಲ ಮನೆ, ಅಂಗಡಿಗಳು ಮಾತ್ರವಲ್ಲದೆ, ದೊಡ್ಡ ಮಂದಿರಕ್ಕಾಗಿ ನೂರಾರು ವರ್ಷ ಹಳೆಯ ಸಣ್ಣ ಮಂದಿರಗಳನ್ನು ಕೆಡವಲಾಗಿದೆ. ಇದೂ ಕೂಡ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಮಮಂದಿರದ ಸಂಪೂರ್ಣ ಉಸ್ತುವಾರಿಯನ್ನು ರಾಮಂದಿರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ವಹಿಸಿಕೊಂಡಿತ್ತು. ಅಲ್ಲಿ ಸ್ಥಳೀಯರಿಗೆ, ಹಿಂದೂ ಸನ್ಯಾಸಿಗಳಿಗೆ ಯಾವುದೇ ಮರ್ಯಾದೆ ಇರಲಿಲ್ಲ.

ರಾಮಮಂದಿರ ಉದ್ಘಾಟನೆಯಾದ ಬಳಿಕ ವಾಹನ ಸಂಚಾರಕ್ಕೆ ನಿಯಮಗಳನ್ನು ರೂಪಿಸಲಾಗಿದೆ. ಇದರಿಂದ ಸ್ಥಳೀಯ ಜನರು ಈ ಹಿಂದಿನಂತೆ ಓಡಾಡಲು ಆಗುತ್ತಿಲ್ಲ. ಇವೆಲ್ಲವೂ ಜನರು ಬಿಜೆಪಿ ವಿರುದ್ದ ಅಸಮಾಧಾನಗೊಳ್ಳಲು ಕಾರಣ ಎಂದು millenniumpost.in ಹೇಳಿದೆ.

ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮ ಅಭಿವೃದ್ದಿಯಾಗಿದೆ. ಸಣ್ಣ ಪಟ್ಟಣ ಅಯೋಧ್ಯೆಗೆ 5 ಸ್ಟಾರ್ ಹೋಟೆಲ್, ಹೈಟೆಕ್ ವಿಮಾನ, ರೈಲು ನಿಲ್ದಾಣಗಳು ಬಂದಿವೆ ಎಂದು ಹೊರಗಿನವರು ಕೊಂಡಾಡುತ್ತಿದ್ದಾರೆ. ಆದರೆ, ಇವುಗಳಿಂದ ಅಯೋಧ್ಯೆಯ ಸುಮಾರು 40 ಸಾವಿರ ಜನರು ತಮ್ಮ ಮನೆ, ಮಠ ಜೀವನ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಊಟ, ವಸತಿ, ವಸ್ತ್ರ ಒಬ್ಬ ಮನುಷ್ಯನ ಮೂಲಭೂತ ಅವಶ್ಯಕತೆಗಳು. ಇವುಗಳನ್ನು ದೊರಕಿಸಿಕೊಡುವುದೇ ನಿಜವಾದ ಅಭಿವೃದ್ದಿ. ಕೇವಲ ಮೆಟ್ರೋ ರೈಲುಗಳು, ಸೇತುವೆಗಳು, ಎಕ್ಸ್‌ಪ್ರೆಸ್‌ ವೇಗಳು ಜನರ ಹೊಟ್ಟೆ ತುಂಬಿಸದು. ಅಯೋಧ್ಯೆಯ ಜನರಿಗೆ ಏನು ಬೇಕಿತ್ತು, ನಾವು ಏನು ಕೊಟ್ಟಿದ್ದೇವೆ ಎಂದು ಈ ಚುನಾವಣೆಯ ಬಳಿಕ ಬಿಜೆಪಿಗೆ ಅರ್ಥವಾಗಿರಬಹುದು.

ಇದನ್ನೂ ಓದಿ : ವಿದೇಶಿಗರ ಆಕ್ರೋಶಕ್ಕೆ ಕಾರಣವಾದ ಅಂಬಾನಿ ಮಗನ ‘ಪ್ರಿ ವೆಡ್ಡಿಂಗ್ ಕ್ರೂಸ್ ಪಾರ್ಟಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...