Homeಮುಖಪುಟಹೊಸದಾಗಿ ಚುನಾಯಿತರಾದ 251 ಸಂಸದರ ಮೇಲಿದೆ ಕ್ರಿಮಿನಲ್ ಮೊಕದ್ದಮೆ: ಎಡಿಆರ್ ವರದಿ

ಹೊಸದಾಗಿ ಚುನಾಯಿತರಾದ 251 ಸಂಸದರ ಮೇಲಿದೆ ಕ್ರಿಮಿನಲ್ ಮೊಕದ್ದಮೆ: ಎಡಿಆರ್ ವರದಿ

- Advertisement -
- Advertisement -

ಹೊಸದಾಗಿ ಚುನಾಯಿತರಾದ 543 ಲೋಕಸಭಾ ಸದಸ್ಯರ ಪೈಕಿ 251 (ಶೇ.46) ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ ಮತ್ತು ಅವರಲ್ಲಿ 27 ಮಂದಿ ಶಿಕ್ಷೆಗೆ ಗುರಿಯಾಗಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಣೆ ಮಾಡಿದೆ.

ಈ ಬಾರಿ, ಸಂಸತ್ತಿನ ಕೆಳಮನೆಗೆ ಚುನಾಯಿತರಾದ ಅತಿ ಹೆಚ್ಚು ಮಂದಿ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್‌ ಹೇಳಿದೆ.

2019ರಲ್ಲಿ 233 (ಶೇ.43), 2014ರಲ್ಲಿ 185 (ಶೇ.34 ), 2009ರಲ್ಲಿ 162 (ಶೇ.30) ಮತ್ತು 2004ರಲ್ಲಿ 125 (ಶೇ.23 ) ಸಂಸದರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದವು.

ಎಡಿಆರ್ ಪ್ರಕಾರ, 2009ರಿಂದ ಘೋಷಿತ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಸಂಸದರ ಸಂಖ್ಯೆಯಲ್ಲಿ ಶೇ 55ರಷ್ಟು ಹೆಚ್ಚಳವಾಗಿದೆ.

ಈ ಬಾರಿ ಚುನಾಯಿತರಾದ 251 ಅಭ್ಯರ್ಥಿಗಳ ಪೈಕಿ 170 (ಶೇ.31) ಮಂದಿ ಅತ್ಯಾಚಾರ, ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

2009ರಿಂದ ಘೋಷಿತ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಸಂಸದರ ಸಂಖ್ಯೆಯಲ್ಲಿ 124 ರಷ್ಟು ಹೆಚ್ಚಳವಾಗಿದೆ.

2009ರಲ್ಲಿ 76 (ಶೇ.14), 2014ರಲ್ಲಿ 112 (ಶೇ.21), 2019ರಲ್ಲಿ 159 (ಶೇ.29) ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದರು.

ಈ ಬಾರಿ ಗೆದ್ದಿರುವ 27 ಮಂದಿ ತಾವು ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿರುವುದಾಗಿ ಹೇಳಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302ರ ಅಡಿಯಲ್ಲಿ ಕೊಲೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಾಲ್ವರು ಮತ್ತು 27 ಮಂದಿ ಐಪಿಸಿಯ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳ ಶಿಕ್ಷೆಗೆ ಗುರಿಯಾಗಿರುವುದಾಗಿ ಘೋಷಿಸಿದ್ದಾರೆ.

ಸೆಕ್ಷನ್ 376ರ ಅಡಿ ಅತ್ಯಾಚಾರ ಪ್ರಕರಣದ ಎದುರಿಸುತ್ತಿರುವ ಇಬ್ಬರು ಸೇರಿ 15 ಮಂದಿ ಮಹಿಳೆಯರ ವಿರುದ್ದದ ಅಪರಾಧಗಳ ಆರೋಪಗಳನ್ನು ಎದುರಿಸುತ್ತಿದ್ದಾರೆ.

ನಾಲ್ವರು ಚುನಾಯಿತ ಸದಸ್ಯರು ಅಪಹರಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಮತ್ತು 43 ಮಂದಿ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ.

ಹದಿನೈದು ಸದಸ್ಯರು ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅತ್ಯಾಚಾರದ ಆರೋಪವನ್ನು ಎದುರಿಸುತ್ತಿರುವ ಇಬ್ಬರು ಸೇರಿದಂತೆ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ.

ಈ ಬಾರಿ ಚುನಾಯಿತರಾದ ಲೋಕಸಭೆ ಸದಸ್ಯರ ಪೈಕಿ ಶೇ. 4.4 ಮಂದಿ ಸ್ವಚ್ಚ ಹಿನ್ನೆಲೆ ಹೊಂದಿದ್ದರೆ, 15.3 ಶೇ ಸದಸ್ಯರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ.

18ನೇ ಲೋಕಸಭೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಯ 240 ಸಂಸದರಲ್ಲಿ 94 (ಶೇ.39) ಮಂದಿಯ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ ಎಂದು ಎಡಿಆರ್ ತಿಳಿಸಿದೆ. ಕಾಂಗ್ರೆಸ್‌ನ 99 ಸಂಸದರಲ್ಲಿ (ಶೇ.49) ಮಂದಿ, ಸಮಾಜವಾದಿ ಪಕ್ಷದ 21 (ಶೇ.45), ಟಿಎಂಸಿಯ 13 (ಶೇ.45), ಡಿಎಂಕೆಯ 13 (ಶೇ.59 ), ಟಿಡಿಪಿಯ 8 (ಶೇ.50), ಶಿವಸೇನೆಯ ಐವರು (‌ಶೇ.71) ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಬಿಜೆಪಿ 63 (ಶೇ.26) ಅಭ್ಯರ್ಥಿಗಳು, ಕಾಂಗ್ರೆಸ್‌ನ 32 (ಶೇ.32), ಎಸ್‌ಪಿಯ 17 (ಶೇ.46) ಟಿಎಂಸಿಯ 7 (ಶೇ. 24), ಡಿಎಂಕೆ 6 (ಶೇ.27), ಟಿಡಿಪಿ 5 (ಶೇ.31), ಶಿವಸೇನಾದ ನಾಲ್ವರು (ಶೇ.57) ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್ ವರದಿ ಮಾಡಿದೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...