Homeಫ್ಯಾಕ್ಟ್‌ಚೆಕ್FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತರೊಬ್ಬರ ಜಮೀನನನ್ನು ವಕ್ಫ್ ಬೋರ್ಡ್‌ ಕಿತ್ತುಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹಬ್ಬಿದೆ.

ಡಿಜಿಟಲ್ ನ್ಯೂಸ್ ಆಪ್‌ ಒಂದರಲ್ಲಿ ತೆಲುಗು ಭಾಷೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಹಲವು ಬಲಪಂಥೀಯ ಎಕ್ಸ್‌ ಬಳಕೆದಾರರು ಹಂಚಿಕೊಂಡಿದ್ದಾರೆ.

Tathvam-asi(@ssaratht) ಎಂಬ ಎಕ್ಸ್ ಬಳಕೆದಾರೊಬ್ಬರು ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ಮತ್ತೊಂದು ಲ್ಯಾಂಡ್ ಜಿಹಾದ್. ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತ ಅರ್ಜುನಪ್ಪ ತಮ್ಮ ಜಮೀನು ವಕ್ಫ್ ಮಂಡಳಿ ಸ್ವಾಧೀನಪಡಿಸಿಕೊಂಡಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ”

“ಅವರ ಜಮೀನಿನಲ್ಲಿ ಬಹಳ ಹಿಂದೆಯೇ ದರ್ಗಾ ನಿರ್ಮಿಸಲಾಗಿದ್ದು, ಮಗಳ ಮದುವೆಗಾಗಿ ಜಮೀನು ಮಾರಾಟ ಮಾಡಲು ಮುಂದಾದಾಗ ಅಧಿಕಾರಿಗಳು ಈ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು, ಅದರ ಮೇಲೆ ತನಗೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.”

“ಒಂದು ವೇಳೆ ಭೂಮಿಯನ್ನು ಮರಳಿ ಪಡೆಯಲು ಸಾಧ್ಯವಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ರೈತನ ಆಯ್ಕೆಯಾಗಿದೆ. ಅವರು 3 ವರ್ಷಗಳಿಂದ ಇದಕ್ಕಾಗಿ ಹೋರಾಡುತ್ತಿದ್ದಾರೆ. ಇದು ಹಿಂದೂಗಳ ಭವಿಷ್ಯ. ಇದು ಎಲ್ಲೆಡೆ ನಡೆಯುತ್ತಿದೆ. ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕವಾಗಲಿ ವಕ್ಫ್ ಭೂ ಕಬಳಿಕೆ ನಿಜ.”

“ಇತ್ತೀಚೆಗೆ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ದೊಡ್ಡ ಸಂಸ್ಥೆಗಳಿಗೂ ಈ ತೊಂದರೆ ಎದುರಾಗಿದೆ ಎಂಬುವುದನ್ನು ನೆನಪಿಸಿಕೊಳ್ಳಿ. ಅವರು ಶ್ರೀಮಂತರು ಮತ್ತು ಪ್ರಸಿದ್ಧರು, ಅವರು ನ್ಯಾಯಾಲಯಗಳಿಗೆ ಹೋಗಿ ವಕ್ಫ್ ವಿರುದ್ದ ಹೋರಾಡಿದು. ಆದರೆ, ಒಬ್ಬ ಬಡ ಹಿಂದೂ 3 ವರ್ಷಗಳಿಂದ ಯಾವುದೇ ಬೆಂಬಲವಿಲ್ಲದೆ ಹೋರಾಡುತ್ತಿದ್ದಾನೆ. ಕಾನೂನು ಶ್ರೀಮಂತರಿಗೆ ಮಾತ್ರ ಎಂಬುವುದು ಇದರಿಂದ ಸಾಬೀತಾಗಿದೆ.” ಎಂದು ಬರೆದುಕೊಂಡಿದ್ದಾರೆ.

‘My India My Pride'(@munothbharath) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ರೀತಿ ಪೋಸ್ಟ್ ಹಾಕಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಮೊದಲು ಯಾದಗಿರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ರೈತನಿಂದ ಜಮೀನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಅಂತಹ ಯಾವುದೇ ಸುದ್ದಿ ನಮಗೆ ಕಂಡು ಬಂದಿಲ್ಲ.

ಯಾದಗಿರಿ ಜಿಲ್ಲೆಯಲ್ಲಿ ಶಾಬಾದ್‌ ಎಂಬ ಗ್ರಾಮ ಇದೆಯೇ ಎಂಬ ಬಗ್ಗೆ ನಾವು ಪರಿಶೀಲಿಸಿದ್ದೇವೆ. ಯಾದಗಿರಿ ಜಿಲ್ಲಾಡಳಿತದ ಅಧಿಕೃತ ವೆಬ್‌ ಸೈಟ್‌ನಲ್ಲಿ ‘ಶಾಬಾದ್‌’ ಎಂಬ ಗ್ರಾಮದ ಹೆಸರು ಕಂಡು ಬಂದಿಲ್ಲ.

ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅದು ‘ನಾಗ್ಪುರದಲ್ಲಿರುವ ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾ ಅಲೈಹಿ ಇಸಾಸನಿ ತೆಕ್ಡಿ’ ಹೆಸರಿನ ದರ್ಗಾ ಎಂದು ಕಂಡು ಬಂದಿದೆ. ಈ ಕುರಿತ ಫೇಸ್‌ಬುಕ್‌ ಪೇಜ್ ಕೂಡ ಲಭ್ಯವಾಗಿದೆ.

ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ನಾಗ್ಪುರದ ಇಸಸಾನಿಯಲ್ಲಿ ‘ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾಹಿ ಅಲೈಹಿ’ ದರ್ಗಾ ಇದೆ ಎಂದು ಕಂಡುಕೊಂಡಿದ್ದೇವೆ.

 

ಗೂಗಲ್ ಮ್ಯಾಪ್ ಫೋಟೋ                                  ವೈರಲ್ ಸುದ್ದಿಯಲ್ಲಿರುವ ಫೋಟೋ

ವೈರಲ್‌ ಸುದ್ದಿಯಲ್ಲಿರುವ ಫೋಟೋ ಮತ್ತು ಗೂಗಲ್‌ ಮ್ಯಾಪ್‌ ಫೋಟೋ ಎರಡನ್ನೂ ಪರಿಶೀಲಿಸಿದ ವೇಳೆ ಎರಡರಲ್ಲೂ ಸಾಮ್ಯತೆ ಕಂಡು ಬಂದಿದೆ.

ಈ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ಯಾದಗಿರಿ ಜಿಲ್ಲೆಯ ವಕ್ಫ್ ಅಧಿಕಾರಿಯೊಬ್ಬರ ಜೊತೆ ನಾವು ದೂರವಾಣಿ ಮೂಲಕ ಮಾತನಾಡಿದ್ದೇವೆ. ಅವರು “ಈ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವೈರಲ್ ಸುದ್ದಿಯಲ್ಲಿರುವ ಜಮೀನಿನ ಸರ್ವೆ ನಂಬರ್ ಕೊಟ್ಟರೆ ನಾವು ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ವೈರಲ್ ಸುದ್ದಿಯಲ್ಲಿ ವಕ್ಫ್ ಇಲಾಖೆ ರೈತನ ಜಮೀನು ಕಿತ್ತುಕೊಂಡಿದೆ ಎಂದು ಹೇಳಲಾಗಿದೆ. ಆದರೆ, ವಕ್ಫ್ ಅಧಿಕಾರಿ ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಅಲ್ಲದೆ, ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ಗೂಗಲ್‌ನಲ್ಲಿ ಹುಡುಕಿದಾಗ, ಅದು ನಾಗ್ಪುರದ ಒಂದು ದರ್ಗಾವನ್ನು ತೋರಿಸುತ್ತಿದೆ. ಆದ್ದರಿಂದ ವೈರಲ್ ಸುದ್ದಿ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...