Homeಫ್ಯಾಕ್ಟ್‌ಚೆಕ್FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತರೊಬ್ಬರ ಜಮೀನನನ್ನು ವಕ್ಫ್ ಬೋರ್ಡ್‌ ಕಿತ್ತುಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹಬ್ಬಿದೆ.

ಡಿಜಿಟಲ್ ನ್ಯೂಸ್ ಆಪ್‌ ಒಂದರಲ್ಲಿ ತೆಲುಗು ಭಾಷೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಹಲವು ಬಲಪಂಥೀಯ ಎಕ್ಸ್‌ ಬಳಕೆದಾರರು ಹಂಚಿಕೊಂಡಿದ್ದಾರೆ.

Tathvam-asi(@ssaratht) ಎಂಬ ಎಕ್ಸ್ ಬಳಕೆದಾರೊಬ್ಬರು ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ಮತ್ತೊಂದು ಲ್ಯಾಂಡ್ ಜಿಹಾದ್. ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತ ಅರ್ಜುನಪ್ಪ ತಮ್ಮ ಜಮೀನು ವಕ್ಫ್ ಮಂಡಳಿ ಸ್ವಾಧೀನಪಡಿಸಿಕೊಂಡಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ”

“ಅವರ ಜಮೀನಿನಲ್ಲಿ ಬಹಳ ಹಿಂದೆಯೇ ದರ್ಗಾ ನಿರ್ಮಿಸಲಾಗಿದ್ದು, ಮಗಳ ಮದುವೆಗಾಗಿ ಜಮೀನು ಮಾರಾಟ ಮಾಡಲು ಮುಂದಾದಾಗ ಅಧಿಕಾರಿಗಳು ಈ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು, ಅದರ ಮೇಲೆ ತನಗೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.”

“ಒಂದು ವೇಳೆ ಭೂಮಿಯನ್ನು ಮರಳಿ ಪಡೆಯಲು ಸಾಧ್ಯವಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ರೈತನ ಆಯ್ಕೆಯಾಗಿದೆ. ಅವರು 3 ವರ್ಷಗಳಿಂದ ಇದಕ್ಕಾಗಿ ಹೋರಾಡುತ್ತಿದ್ದಾರೆ. ಇದು ಹಿಂದೂಗಳ ಭವಿಷ್ಯ. ಇದು ಎಲ್ಲೆಡೆ ನಡೆಯುತ್ತಿದೆ. ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕವಾಗಲಿ ವಕ್ಫ್ ಭೂ ಕಬಳಿಕೆ ನಿಜ.”

“ಇತ್ತೀಚೆಗೆ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ದೊಡ್ಡ ಸಂಸ್ಥೆಗಳಿಗೂ ಈ ತೊಂದರೆ ಎದುರಾಗಿದೆ ಎಂಬುವುದನ್ನು ನೆನಪಿಸಿಕೊಳ್ಳಿ. ಅವರು ಶ್ರೀಮಂತರು ಮತ್ತು ಪ್ರಸಿದ್ಧರು, ಅವರು ನ್ಯಾಯಾಲಯಗಳಿಗೆ ಹೋಗಿ ವಕ್ಫ್ ವಿರುದ್ದ ಹೋರಾಡಿದು. ಆದರೆ, ಒಬ್ಬ ಬಡ ಹಿಂದೂ 3 ವರ್ಷಗಳಿಂದ ಯಾವುದೇ ಬೆಂಬಲವಿಲ್ಲದೆ ಹೋರಾಡುತ್ತಿದ್ದಾನೆ. ಕಾನೂನು ಶ್ರೀಮಂತರಿಗೆ ಮಾತ್ರ ಎಂಬುವುದು ಇದರಿಂದ ಸಾಬೀತಾಗಿದೆ.” ಎಂದು ಬರೆದುಕೊಂಡಿದ್ದಾರೆ.

‘My India My Pride'(@munothbharath) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ರೀತಿ ಪೋಸ್ಟ್ ಹಾಕಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಮೊದಲು ಯಾದಗಿರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ರೈತನಿಂದ ಜಮೀನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಅಂತಹ ಯಾವುದೇ ಸುದ್ದಿ ನಮಗೆ ಕಂಡು ಬಂದಿಲ್ಲ.

ಯಾದಗಿರಿ ಜಿಲ್ಲೆಯಲ್ಲಿ ಶಾಬಾದ್‌ ಎಂಬ ಗ್ರಾಮ ಇದೆಯೇ ಎಂಬ ಬಗ್ಗೆ ನಾವು ಪರಿಶೀಲಿಸಿದ್ದೇವೆ. ಯಾದಗಿರಿ ಜಿಲ್ಲಾಡಳಿತದ ಅಧಿಕೃತ ವೆಬ್‌ ಸೈಟ್‌ನಲ್ಲಿ ‘ಶಾಬಾದ್‌’ ಎಂಬ ಗ್ರಾಮದ ಹೆಸರು ಕಂಡು ಬಂದಿಲ್ಲ.

ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅದು ‘ನಾಗ್ಪುರದಲ್ಲಿರುವ ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾ ಅಲೈಹಿ ಇಸಾಸನಿ ತೆಕ್ಡಿ’ ಹೆಸರಿನ ದರ್ಗಾ ಎಂದು ಕಂಡು ಬಂದಿದೆ. ಈ ಕುರಿತ ಫೇಸ್‌ಬುಕ್‌ ಪೇಜ್ ಕೂಡ ಲಭ್ಯವಾಗಿದೆ.

ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ನಾಗ್ಪುರದ ಇಸಸಾನಿಯಲ್ಲಿ ‘ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾಹಿ ಅಲೈಹಿ’ ದರ್ಗಾ ಇದೆ ಎಂದು ಕಂಡುಕೊಂಡಿದ್ದೇವೆ.

 

ಗೂಗಲ್ ಮ್ಯಾಪ್ ಫೋಟೋ                                  ವೈರಲ್ ಸುದ್ದಿಯಲ್ಲಿರುವ ಫೋಟೋ

ವೈರಲ್‌ ಸುದ್ದಿಯಲ್ಲಿರುವ ಫೋಟೋ ಮತ್ತು ಗೂಗಲ್‌ ಮ್ಯಾಪ್‌ ಫೋಟೋ ಎರಡನ್ನೂ ಪರಿಶೀಲಿಸಿದ ವೇಳೆ ಎರಡರಲ್ಲೂ ಸಾಮ್ಯತೆ ಕಂಡು ಬಂದಿದೆ.

ಈ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ಯಾದಗಿರಿ ಜಿಲ್ಲೆಯ ವಕ್ಫ್ ಅಧಿಕಾರಿಯೊಬ್ಬರ ಜೊತೆ ನಾವು ದೂರವಾಣಿ ಮೂಲಕ ಮಾತನಾಡಿದ್ದೇವೆ. ಅವರು “ಈ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವೈರಲ್ ಸುದ್ದಿಯಲ್ಲಿರುವ ಜಮೀನಿನ ಸರ್ವೆ ನಂಬರ್ ಕೊಟ್ಟರೆ ನಾವು ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ವೈರಲ್ ಸುದ್ದಿಯಲ್ಲಿ ವಕ್ಫ್ ಇಲಾಖೆ ರೈತನ ಜಮೀನು ಕಿತ್ತುಕೊಂಡಿದೆ ಎಂದು ಹೇಳಲಾಗಿದೆ. ಆದರೆ, ವಕ್ಫ್ ಅಧಿಕಾರಿ ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಅಲ್ಲದೆ, ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ಗೂಗಲ್‌ನಲ್ಲಿ ಹುಡುಕಿದಾಗ, ಅದು ನಾಗ್ಪುರದ ಒಂದು ದರ್ಗಾವನ್ನು ತೋರಿಸುತ್ತಿದೆ. ಆದ್ದರಿಂದ ವೈರಲ್ ಸುದ್ದಿ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...