Homeಮುಖಪುಟಲೋಕಸಭಾ ಚುನಾವಣಾ ಫಲಿತಾಂಶ: 2024ರ ಚುನಾವಣೆಯಲ್ಲಿ 'ಟ್ರಾನ್ಸ್‌ ಜೆಂಡರ್' ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

ಲೋಕಸಭಾ ಚುನಾವಣಾ ಫಲಿತಾಂಶ: 2024ರ ಚುನಾವಣೆಯಲ್ಲಿ ‘ಟ್ರಾನ್ಸ್‌ ಜೆಂಡರ್’ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

- Advertisement -
- Advertisement -

ಚುನಾವಣಾ ಆಯೋಗದ (ಇಸಿ) ಅಂಕಿಅಂಶಗಳ ಪ್ರಕಾರ, 2019ರ ಸಾರ್ವತ್ರಿಕ ಚುನಾವಣೆಗಳಿಗೆ ಹೋಲಿಸಿದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಟ್ರಾನ್ಸ್‌ ಜೆಂಡರ್ (ತೃತೀಯ ಲಿಂಗ) ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. 2024 ರಲ್ಲಿ, ತೃತೀಯ ಲಿಂಗದ ಮತದಾರರು ಶೇಕಡಾ 25 ರಷ್ಟಿದ್ದರೆ, ಕಳೆದ ಚುನಾವಣೆಯಲ್ಲಿ ಅದು ಶೇಕಡಾ 14.58 ರಷ್ಟಿತ್ತು.

ಈಗಷ್ಟೇ ಮುಗಿದಿರುವ ಏಳು ಹಂತದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಹಂತ-ಹಂತದ ಡೇಟಾವನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 19 ರಂದು ನಡೆದ 2024 ರ ಮೊದಲ ಹಂತದ ಚುನಾವಣೆಯಲ್ಲಿ ತೃತೀಯ ಲಿಂಗದ ಮತದಾರರು ಶೇಕಡಾ 31.32 ರಷ್ಟಿದ್ದರು. ಏಪ್ರಿಲ್ 26ರಂದು ನಡೆದ ಎರಡನೇ ಹಂತದಲ್ಲಿ ಶೇ.23.86, ಮೇ 7ರಂದು ನಡೆದ ಮೂರನೇ ಹಂತದಲ್ಲಿ ಶೇ.25.2, ಮೇ 13ರಂದು ನಡೆದ ನಾಲ್ಕನೇ ಹಂತದಲ್ಲಿ ಶೇ.34.23, ಮೇ 20ರಂದು ನಡೆದ ಐದನೇ ಹಂತದಲ್ಲಿ ಶೇ.21.96 ಮತ್ತು ಮೇ 25 ರಂದು ನಡೆದ ಆರನೇ ಹಂತದಲ್ಲಿ ಶೇ. 18.67 ರಷ್ಟು ಜನ ಮತದಾನ ಮಾಡಿದ್ದಾರೆ.

ಜೂನ್ 1 ರಂದು ನಡೆದ ಅಂತಿಮ ಮತ್ತು ಏಳನೇ ಹಂತದ ಮತದಾನದಲ್ಲಿ ಶೇ 22.33 ರಷ್ಟು ತೃತೀಯಲಿಂಗಿ ಮತದಾನವಾಗಿದೆ. 2011ರ ಜನಗಣತಿ ಪ್ರಕಾರ ದೇಶದಲ್ಲಿ 4,87,803 ತೃತೀಯಲಿಂಗಿಗಳಿದ್ದಾರೆ.

18ನೇ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಂತರದ ದೊಡ್ಡ ಪಕ್ಷ ಕಾಂಗ್ರೆಸ್ 99 ಸ್ಥಾನಗಳೊಂದಿಗೆ, ಸಮಾಜವಾದಿ ಪಕ್ಷವು 37 ಸ್ಥಾನಗಳನ್ನು ಗಳಿಸಿದೆ.

ಒಟ್ಟು ಮತದಾನದ ಪ್ರಮಾಣ

2024 ರ ಲೋಕಸಭಾ ಚುನಾವಣೆಯ ಒಟ್ಟಾರೆ ಮತದಾನದ ಪ್ರಮಾಣವು ಶೇಕಡಾ 65.79 ರಷ್ಟಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ (ಜೂನ್ 6) ಹೇಳಿಕೆಯಲ್ಲಿ ತಿಳಿಸಿದೆ. ರಾಜ್ಯಗಳ ಪೈಕಿ ಅಸ್ಸಾಂನಲ್ಲಿ ಶೇ.81.56ರಷ್ಟು ಮತದಾನವಾಗಿದೆ. ರಾಜ್ಯಗಳ ಪೈಕಿ ಶೇ.56.19 ರಷ್ಟು ಮತದಾನದಲ್ಲಿ ಬಿಹಾರ ಕಡಿಮೆ ಮತದಾನವಾಗಿದೆ ಎಂದು ಇಸಿ ಹೇಳಿದೆ.

“ಅಂಚೆ ಮತಗಳ ಸಂಖ್ಯೆ ಮತ್ತು ಒಟ್ಟು ಮತದಾನದ ಪ್ರಮಾಣ ಹೊಂದಿರುವ ವಿವರವಾದ ಅಂಕಿಅಂಶಗಳ ವರದಿಗಳು ವಿವರಗಳನ್ನು ಅಂತಿಮಗೊಳಿಸಿದ ನಂತರ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ” ಎಂದು ಆಯೋಗ ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ, ಪುರುಷ ಮತದಾರರು ಶೇಕಡಾ 63.11 ರಷ್ಟಿದ್ದರೆ, ಶೇಕಡಾ 64.72 ರಷ್ಟು ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ತೃತೀಯ ಲಿಂಗದ ಮತದಾನದ ಪ್ರಮಾಣವು ಶೇಕಡಾ 22.33 ರಷ್ಟಿತ್ತು. ಈ ವಾರದ ಆರಂಭದಲ್ಲಿ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿ ಮತದಾರರೊಂದಿಗೆ ಭಾರತವು ಇತಿಹಾಸವನ್ನು ನಿರ್ಮಿಸಿದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ; ‘ಸ್ಪೀಕರ್ ಸ್ಥಾನವನ್ನು ಪಡೆಯಿರಿ..’; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...