Homeಮುಖಪುಟಲೋಕಸಭೆ ಫಲಿತಾಂಶದ ಬಳಿಕ ಷೇರು ಮಾರುಕಟ್ಟೆ ಕುಸಿತ: ಸೆಬಿ, ಸರ್ಕಾರದ ವರದಿ ಕೋರಿ ಸುಪ್ರೀಂಗೆ ಅರ್ಜಿ

ಲೋಕಸಭೆ ಫಲಿತಾಂಶದ ಬಳಿಕ ಷೇರು ಮಾರುಕಟ್ಟೆ ಕುಸಿತ: ಸೆಬಿ, ಸರ್ಕಾರದ ವರದಿ ಕೋರಿ ಸುಪ್ರೀಂಗೆ ಅರ್ಜಿ

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಸಂಭವಿಸಿದ ಷೇರು ಮಾರುಕಟ್ಟೆ ಕುಸಿತ ಮತ್ತು ಹೂಡಿಕೆದಾರರ ನಷ್ಟದ ಬಗ್ಗೆ ವಿವರವಾದ ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮತ್ತು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ)ಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ರಿಟ್ ಅರ್ಜಿಗೆ ವಕೀಲ ವಿಶಾಲ್ ತಿವಾರಿ ಅವರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ರಿಟ್ ಅರ್ಜಿಗೆ ಸಂಬಂಧಿಸಿದಂತೆ ಈ ವರ್ಷದ ಜನವರಿಯಲ್ಲಿ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಹೂಡಿಕೆದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ನಿಯಂತ್ರಕ ಚೌಕಟ್ಟನ್ನು ಬಲಪಡಿಸಲು ತಜ್ಞರ ಸಮಿತಿಯ ಶಿಫಾರಸುಗಳನ್ನು ಪರಿಗಣಿಸುವಂತೆ ಭಾರತ ಸರ್ಕಾರ ಮತ್ತು ಸೆಬಿಗೆ ಸೂಚಿಸಿತ್ತು.

ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಬಾಕಿ ಉಳಿದಿರುವ ತನಿಖೆಗಳನ್ನು ಸೆಬಿ ಪೂರ್ಣಗೊಳಿಸಿದೆಯೇ? ಯಾವುದಾದರು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆಯೇ? ಎಂಬುವುದು ಅಸ್ಪಷ್ಟವಾಗಿದೆ ಅರ್ಜಿದಾರ ವಕೀಲ ವಿಶಾಲ್ ತಿವಾರಿ ಅವರು ವಾದಿಸಿದ್ದಾರೆ.

ಮಧ್ಯಂತ ಅರ್ಜಿಯಲ್ಲಿ ತಿವಾರಿ ಅವರು ನ್ಯಾಯಾಲಯದ ನಿರ್ದೇಶನ ಪಾಲನೆಗೆ ಸೂಚಿಸಲು ಕೋರಿದ್ದಾರೆ. ಅಂದರೆ, ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸಲು ಸೆಬಿಗೆ ನಿರ್ದೇರ್ಶಿಸುವಂತೆ ಕೋರಿದ್ದಾರೆ.

2024ರ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಷೇರು ಮಾರುಕಟ್ಟೆಯಲ್ಲಿ ಗಮನಾರ್ಹ ಕುಸಿತ ಕಂಡು ಬಂದಿದೆ ಎಂದು ತಿವಾರಿ ಹೇಳಿದ್ದಾರೆ. ಸುಮಾರು 20 ಲಕ್ಷ ಕೋಟಿಗಳಷ್ಟು ನಷ್ಟವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.

ಜೂನ್ 1ರಂದು ಕೆಲವು ಖಾಸಗಿ ಸಂಸ್ಥೆಗಳು ನಡೆಸಿದ್ದ ಎಕ್ಸಿಟ್‌ ಪೋಲ್‌ನಿಂದ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್ ಹಗರಣ. ಇದರ ಬಗ್ಗೆ ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ‘ಎಕ್ಸಿಟ್ ಪೋಲ್‌’ನಿಂದ ಷೇರು ಮಾರುಕಟ್ಟೆಯಲ್ಲಿ ₹30 ಲಕ್ಷ ಕೋಟಿ ನಷ್ಟ: ‘ದೇಶದ ಬೃಹತ್ ಹಗರಣ’ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...