Homeಮುಖಪುಟಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

ಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

- Advertisement -
- Advertisement -

“ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿರುವ ಎನ್‌ಡಿಎ ಮೈತ್ರಿ ಸರ್ಕಾರ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ದ ನಿಲುವು ತಾಳಲು ಜೆಡಿಯು ಅವಕಾಶ ನೀಡುವುದಿಲ್ಲ” ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಶುಕ್ರವಾರ ಡಿಜಿಟಲ್ ಸುದ್ದಿ ವಾಹಿನಿ ರೆಡ್ ಮೈಕ್‌ಗೆ ತಿಳಿಸಿದ್ದಾರೆ.

ಜೆಡಿಯು ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದೆ. ಮೋದಿ ನೇತೃತ್ವದ ಎನ್‌ಡಿಎ ಸಮ್ಮಿಶ್ರ ಸರ್ಕಾರ ರಚನೆಯಾಗಬೇಕಾದರೆ ಬಿಜೆಪಿಗೆ ಜೆಡಿಯು ಬೆಂಬಲ ಅತ್ಯಗತ್ಯವಾಗಿದೆ.

“ನಾವು ಬಿಜೆಪಿಯೊಂದಿಗೆ ಅಧಿಕಾರಕ್ಕೇರಿದರೂ, ಮುಸ್ಲಿಮರು ಸೇರಿದಂತೆ ಇತರ ಅಲ್ಪಸಂಖ್ಯಾತರ ವಿರೋಧಿ ನಿಲುವನ್ನು ಒಪ್ಪುದಿಲ್ಲ” ಎಂದು ತ್ಯಾಗಿ ಹೇಳಿದ್ದು, “ಮುಸ್ಲಿಮರು ನಮ್ಮ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿ ಮುಸ್ಲಿಮರನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡಿರುವುದನ್ನು ಉಲ್ಲೇಖಿಸಿ, “ಜೆಡಿಯು ಈ ಸರ್ಕಾರದಲ್ಲಿ ಜಾತ್ಯಾತೀತ ತತ್ವವನ್ನು ಎತ್ತಿ ಹಿಡಿಯಲಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ತ್ಯಾಗಿ, “ಚುನಾವಣೆಯಲ್ಲಿ ಕೆಸರೆರಚಲು ಬಳಸಿದ ವಿಷಯಗಳನ್ನು ಮರೆತುಬಿಡಬೇಕು” ಎಂದಿದ್ದಾರೆ.

“ನಮ್ಮ ಪಕ್ಷದ ಅಭ್ಯರ್ಥಿ ಮುಜಾಹಿದ್ ಆಲಂ ಅವರು ಬಿಹಾರದ ಮುಸ್ಲಿಂ ಬಾಹುಳ್ಯದ ಕಿಶನ್‌ಗಂಜ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿಗಿಂತ ಹೆಚ್ಚು ಮತ ಗಳಿಸಿದ್ದಾರೆ” ಎಂದು ಕೆಸಿ ತ್ಯಾಗಿ ಹೇಳಿದ್ದು, ಮುಸ್ಲಿಮರು ಓವೈಸಿ ಪಕ್ಷಕ್ಕಿಂತ ಜೆಡಿಯು ಮೇಲೆ ವಿಶ್ವಾಸವಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕಿಶನ್‌ಗಂಜ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹಮ್ಮದ್ ಜಾವೇದ್ ಗೆಲುವು ದಾಖಲಿಸಿದ್ದಾರೆ.

“ಎಲ್ಲಾ ಜಾತಿ, ಧರ್ಮಗಳನ್ನು ಒಟ್ಟಿಗೆ ಮುನ್ನಡೆಸಲು ಭಯಸುತ್ತದೆ. ಜನರ ಮೇಲೆ ನೀತಿಗಳನ್ನು ಹೇರುವ ಮೊದಲು ಅವುಗಳ ಕುರಿತು ವಿಸ್ಕೃತವಾದ ಚರ್ಚೆ ನಡೆಸಲು ನಮ್ಮ ಪಕ್ಷ ಸಲಹೆ ನೀಡುತ್ತದೆ” ಎಂದು ಕೆಸಿ ತ್ಯಾಗಿ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿಯ ಬಗ್ಗೆ ಪ್ರತಿಕ್ರಿಯಿಸಿದ ತ್ಯಾಗಿ, “ನಮ್ಮ ಪಕ್ಷ ‘ಸುಧಾರಣೆ ವಿರೋಧಿಯಲ್ಲ’. ಆದರೆ ಸಂಹಿತೆಯ ಕರಡು ತಯಾರಿಸಲು ಎಲ್ಲಾ ಪಾಲುದಾರರು, ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳು ಮತ್ತು ಪಂಗಡಗಳನ್ನು ಸಂಪರ್ಕಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...