Homeಮುಖಪುಟಲೋಕಸಭೆ ಫಲಿತಾಂಶ 'ವಿಭಜನೆ, ದ್ವೇಷ ರಾಜಕಾರಣದ ನಿರ್ಣಾಯಕ ನಿರಾಕರಣೆ': ಖರ್ಗೆ

ಲೋಕಸಭೆ ಫಲಿತಾಂಶ ‘ವಿಭಜನೆ, ದ್ವೇಷ ರಾಜಕಾರಣದ ನಿರ್ಣಾಯಕ ನಿರಾಕರಣೆ’: ಖರ್ಗೆ

- Advertisement -
- Advertisement -

ಲೋಕಸಭೆ ಚುನಾವಣೆಯ ಜನಾದೇಶವು ವಿಭಜನೆ ಮತ್ತು ದ್ವೇಷ ರಾಜಕೀಯದ ‘ನಿರ್ಣಾಯಕ ನಿರಾಕರಣೆ’. ಇಂಡಿಯಾ ಒಕ್ಕೂಟ ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ” ಕಾಂಗ್ರೆಸ್ ಮತ್ತೆ ಪುಟಿದೇಳುತ್ತಿರುವ ಸಂದರ್ಭದ ಕೆಲ ರಾಜ್ಯಗಳಲ್ಲಿ ತನ್ನ ಸಾಮರ್ಥ್ಯ ಮತ್ತು ನಿರೀಕ್ಷೆಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿಲ್ಲ. ಅಲ್ಲಿ ಸ್ವಲ್ಪ ಸಮಯ ಬೇಕಾಗಬಹುದು ಎಂದಿದ್ದಾರೆ.

“ನಾವು ಈ ಹಿಂದೆ ವಿಧಾನಸಭಾ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಸರ್ಕಾರ ರಚಿಸಿದ್ದ ರಾಜ್ಯಗಳಲ್ಲಿಯೂ ನಮ್ಮ ಸಾಧನೆ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಅಂತಹ ರಾಜ್ಯಗಳ ಬಗ್ಗೆ ಪ್ರತ್ಯೇಕ ಚರ್ಚೆ ಶೀಘ್ರದಲ್ಲೇ ನಡೆಸಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ ಪರ ಒಲವು ಹೊಂದಿರುವ ರಾಜ್ಯಗಳಲ್ಲಿ ನಮಗೆ ಇನ್ನೂ ಅವಕಾಶವಿದೆ. ಈ ಅವಕಾಶಗಳನ್ನು ನಾವು ನಮ್ಮ ಸ್ವಂತ ಲಾಭಕ್ಕಾಗಿ ಬಳಸದೆ, ನಮ್ಮ ಜನರ ಅನುಕೂಲಕ್ಕಾಗಿ ಬಳಸಿಕೊಳ್ಳಬೇಕು. ಈ ಕಾರ್ಯಯವನ್ನು ಶೀಘ್ರದಲ್ಲೇ ಮಾಡಲಾಗುವುದು” ಎಂದು ಹೇಳಿದ್ದಾರೆ.

“ಪಕ್ಷ ಅಧಿಕಾರದಲ್ಲಿದ್ದರೂ, ಇಲ್ಲದಿದ್ದರೂ ಜನರ ನಡುವೆ 365 ದಿನದ 24 ಗಂಟೆಯೂ ಕೆಲಸ ನಿರ್ವಹಿಸಲಿದೆ” ಎಂದು ಖರ್ಗೆ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡಿದ ನಾಯಕರು ಮತ್ತು ಕಾರ್ಯಕರ್ತರ ಇಚ್ಛಾಶಕ್ತಿ ಮತ್ತು ಸಂಕಲ್ಪವನ್ನು ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ ಅಭಿನಂದಿಸಿದೆ.

“ಆಡಳಿತ ಪಕ್ಷದ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವುಗಳ ವಿರುದ್ಧ ಜನರು ಧ್ವನಿ ಎತ್ತಿದ್ದಾರೆ. ಕಳೆದ 10 ವರ್ಷಗಳ ರಾಜಕೀಯವನ್ನು ತಿರಸ್ಕರಿಸಿದ್ದಾರೆ. ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.

“ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ನಾವು ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಮಣಿಪುರದ ಎರಡೂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲೂ ಪಕ್ಷ ಸ್ಥಾನಗಳನ್ನು ಪಡೆದುಕೊಂಡಿದೆ” ಎಂದಿದ್ದಾರೆ.

“ಮಹಾರಾಷ್ಟ್ರದಲ್ಲಿ ನಾವು ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದೇವೆ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಸಮಾಜದ ಎಲ್ಲಾ ವರ್ಗಗಳ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದಲ್ಲದೆ, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯವಿರುವ ಸ್ಥಾನಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಸ್ಥಾನಗಳಲ್ಲಿಯೂ ಪಕ್ಷವು ಹೆಚ್ಚಳ ಕಂಡಿದೆ” ಎಂದು ಹೇಳಿದ್ದಾರೆ

ನಗರ ಪ್ರದೇಶಗಳಲ್ಲೂ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ತೋರಿಸಬೇಕಿದೆ. ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಈ ಚುನಾವಣೆಯಲ್ಲಿ ಕೆಲಸ ಮಾಡಿದೆ. ಆಯಾ ರಾಜ್ಯಗಳಲ್ಲಿ ಪಕ್ಷಗಳು ತನ್ನ ಶಕ್ತಿ ತೋರಿಸಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳಿಗೂ ನೆರವಾಗಿದೆ. ನಾವು ಚುನಾವಣಾ ಪ್ರಚಾರದ ಸಂದರ್ಭ ಪ್ರಸ್ತಾಪಿಸಿದ ವಿಷಯಗಳು ಭಾರತದ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ. ನಾವು ಸಂಸತ್ತಿನಲ್ಲಿ ಮತ್ತು ಹೊರಗೆ ಆ ವಿಷಯಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸಬೇಕು ಎಂದಿದ್ದಾರೆ.

ದೆಹಲಿಯ ಅಶೋಕ ಹೋಟೆಲ್‌ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಪಕ್ಷದ ಹಿರಿಯ ನಾಯಕರು ಮತ್ತು ಸಿಡಬ್ಲ್ಯೂಸಿ ಸದಸ್ಯರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪಕ್ಷದ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಿ ಸಂಘಟನೆ ಕ್ರಮಗಳನ್ನು ಸೂಚಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು, ಇತರ ನಾಯಕರು ಚರ್ಚೆಯಲ್ಲಿ ಭಾಗವಹಿಸಿದ್ದರು.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಇಂದು (ಜೂನ್‌ 8) ಸಂಜೆ 5.30ಕ್ಕೆ ಲೋಕಸಭೆ ಮತ್ತು ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಲಿದೆ.

ಇದನ್ನೂ ಓದಿ : ಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...