Homeಮುಖಪುಟರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

- Advertisement -
- Advertisement -

ರಾಹುಲ್ ಗಾಂಧಿ ‘ಮ್ಯಾನ್ ಆಫ್ ದಿ ಮ್ಯಾಚ್’ ಆಗಿದ್ದಾರೆ. ಅವರು ಸದನದಲ್ಲಿ ವಿರೋಧ ಪಕ್ಷದ ನಾಯಕನಾಗಬೇಕು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್ ಆಗ್ರಹಿಸಿದ್ದು, ಇದೇ ರೀತಿಯ ಬೇಡಿಕೆಯನ್ನು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಸೇರಿ ಹಲವು ಕಾಂಗ್ರೆಸ್‌ ನಾಯಕರು ಮುಂದಿಟ್ಟಿದ್ದಾರೆ.

ಇದಲ್ಲದೆ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಸಿಡಬ್ಲ್ಯುಸಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಶಿ ತರೂರ್, ಈ ಜನಾದೇಶವು ಬಿಜೆಪಿಯ ದುರಹಂಕಾರ ಮತ್ತು ವರ್ತನೆಗೆ ಮತದಾರರು ನೀಡಿರುವ ಜನಾದೇಶದ ಸಂದೇಶವಾಗಿದೆ. ಸರ್ಕಾರವನ್ನು ನಡೆಸುವಾಗ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಮೋದಿ ಮತ್ತು ಅಮಿತ್ ಶಾ ಅವರಿಗೆ ಇದು ಒಂದು ಸವಾಲಾಗಿದೆ ಮತ್ತು ಇದು ಅವರ ಕಾರ್ಯಚಟುವಟಿಕೆಯನ್ನು ಬದಲಾಯಿಸುವ ಮತ್ತು ಹೆಚ್ಚು ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಬಾರಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕೆಲವು ವಿಷಯಗಳಲ್ಲಿ ‘ಮಜ್ಬೂರ್ ಸರ್ಕಾರ’ (ಅಸಹಾಯಕ ಸರ್ಕಾರ) ಎಂದು ಸಾಬೀತುಪಡಿಸಬಹುದು, ಏಕೆಂದರೆ ಎನ್‌ಡಿಎ ಭಾಗವಾಗಿರುವ ಎಲ್ಲಾ ಪಕ್ಷಗಳು ಎಲ್ಲವನ್ನೂ ಒಪ್ಪಿಕೊಳ್ಳಬೇಕಾಗುತ್ತದೆ ಹೇಳಿದ್ದಾರೆ.

ಈಗಾಗಲೇ ಅಗ್ನಿವೀರ್ ಯೋಜನೆಯ ಬಗ್ಗೆ ಒಂದು ಪಕ್ಷವು ಪ್ರಶ್ನೆಗಳನ್ನು ಎತ್ತಿದೆ, ಅದನ್ನು ಪರಿಶೀಲಿಸಬೇಕಾಗಿದೆ. ಆಂದ್ರಕ್ಕೆ ಬಿಜೆಪಿ ಸರ್ಕಾರವು ಈವರೆಗೆ ನೀಡಲು ನಿರಾಕರಿಸಿದ್ದ ವಿಶೇಷ ವರ್ಗದ ಸ್ಥಾನಮಾನಕ್ಕೆ ಬೇಡಿಕೆ ಕೇಳಿ ಬಂದಿದೆ, ಅದನ್ನು ಮರುಪರಿಶೀಲಿಸಬೇಕಾಗಿದೆ ಎಂದು ಅವರು ಹೇಳಿದರು.

ಮೋದಿ ಸರಕಾರವು ಕಳೆದ 10 ವರ್ಷಗಳಲ್ಲಿ ಸಂಸತ್ತನ್ನು ಸೂಚನಾ ಫಲಕದಂತೆ ಪರಿಗಣಿಸಿದೆ. ಈಗ 230ಕ್ಕೂ ಹೆಚ್ಚು ಸಂಸದರ ಪ್ರಬಲ ವಿರೋಧವಿರುವ ಕಾರಣ ಈಗ ಅದು ಸಾಧ್ಯವಿಲ್ಲ. ರಾಹುಲ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆ ವಹಿಸುವುದು ಸೂಕ್ತವೆನಿಸಲಿದೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ ಆಡಳಿತ ಪಕ್ಷವನ್ನು ಎದುರಿಸಲು ಹೆಚ್ಚಿನ ಸಂಖ್ಯಾ ಬಲ ಹೊಂದಿರುವ ಪಕ್ಷದ ಜನಪ್ರಿಯ ನಾಯಕ ವಿಪಕ್ಷದ ಸ್ಥಾನ ವಹಿಸುವುದು ಹೆಚ್ಚು ಸೂಕ್ತವೆನಿಸಲಿದೆ ಎಂದು  ಶಶಿ ತರೂರ್‌ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಹುಲ್ ಗಾಂಧಿ ಅವರು ಪ್ರತಿಪಕ್ಷದ ಪ್ರಮುಖ ನಾಯಕರಾಗಿ ಹೊರಹೊಮ್ಮಬೇಕು ಎಂದು ಇಡೀ ದೇಶ ಒತ್ತಾಯಿಸುತ್ತದೆ. ಈ ಸ್ಥಾನವು ಅವರಿಗೆ ಸೂಕ್ತವಾಗಿದೆ ಎಂದು ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.

ಲುಧಿಯಾನದಿಂದ ಆಯ್ಕೆಯಾಗಿರುವ ಸಂಸದ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಅಂತಿಮ ನಿರ್ಧಾರವು ಪಕ್ಷದ ನಾಯಕತ್ವದ ಮೇಲಿದೆ ಮತ್ತು ಈ ಪಾತ್ರವನ್ನು ವಹಿಸಬೇಕೇ ಎಂಬುದನ್ನು ನಿರ್ಧರಿಸುವುದು ರಾಹುಲ್ ಗಾಂಧಿ ಅವರದ್ದಾಗಿದೆ. ರಾಹುಲ್ ಗಾಂಧಿ ಮುಂದೆ ಬಂದು ಎಲ್ಲವನ್ನೂ ನಿಭಾಯಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಆದರೆ ನಾಯಕತ್ವದ ಅಂತಿಮ ನಿರ್ಧಾರ ರಾಹುಲ್ ಗಾಂಧಿ ಅವರೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಬೇಕು. ರಾಹುಲ್ ಗಾಂಧಿ ಮಹಿಳೆಯರು ಮತ್ತು ನಿರುದ್ಯೋಗಿಗಳ ಪರ ಹೋರಾಟ ನಡೆಸುತ್ತಿದ್ದಾರೆ. ಇದು 140 ಕೋಟಿ ಭಾರತೀಯರ ಬೇಡಿಕೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.

ಗುರುದಾಸ್‌ಪುರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಸಂಸದ ಸುಖ್‌ಜಿಂದರ್ ಸಿಂಗ್ ರಾಂಧವಾ ಈ ಬಗ್ಗೆ ಮಾತನಾಡಿದ್ದು, ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಪ್ರಧಾನಿಗೆ ಪ್ರತ್ಯುತ್ತರ ನೀಡಬಲ್ಲವರು ಮತ್ತು ಆದ್ದರಿಂದ ಅವರು ವಿಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...