Homeಮುಖಪುಟಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

ಮೋದಿ 3.0: ರಾಜ್ಯ ಖಾತೆ ತಿರಸ್ಕರಿಸಿದ ಅಜಿತ್‌ ಬಣ; ಎನ್‌ಡಿಎಯಲ್ಲಿ ಭುಗಿಲೆದ್ದ ಅಸಮಾಧಾನ

- Advertisement -
- Advertisement -

ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಮೋದಿ 3.0 ಸರಕಾರದಲ್ಲಿ ಮೊದಲ ಅಸಮಾಧಾನ ಭುಗಿಲೆದ್ದಿದ್ದು, ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರನ್ನು ಕ್ಯಾಬಿನೆಟ್ ಸಚಿವರನ್ನಾಗಿ ಸೇರಿಸಿಕೊಳ್ಳದ ಕಾರಣ ಎನ್‌ಡಿಎ ಮಿತ್ರಪಕ್ಷ ಎನ್‌ಸಿಪಿ ಅಸಮಾಧಾನಗೊಂಡಿದೆ.

ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂಬ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬೇಡಿಕೆಯನ್ನು ಎನ್‌ಡಿಎ ನಾಯಕತ್ವ ಭಾನುವಾರ ತಿರಸ್ಕರಿಸಿದೆ. ಅಜಿತ್ ಪವಾರ್ ಮತ್ತು ಪಟೇಲ್ ಎನ್‌ಡಿಎ ತೀರ್ಮಾನವನ್ನು ಒಪ್ಪಿಕೊಂಡಿದ್ದರೂ, ಅವರು ಸಾಧ್ಯವಾದಷ್ಟು ಬೇಗ ಈ ಕುರಿತು ಪರಿಹಾರ ಕ್ರಮ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

ಶನಿವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ ನಡೆಸಿ, ಸಣ್ಣ ಪಕ್ಷಗಳಿಗೆ ಒಂದೇ ರಾಜ್ಯ ಸಚಿವ ಸ್ಥಾನವಿದೆ ಎಂದು ಹೇಳಿದ್ದರು. ಈ ಸಂದೇಶವನ್ನು ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿಗೂ ನೀಡಿದ್ದರು.

ಹಿರಿತನದ ಆಧಾರದಲ್ಲಿ ಪಟೇಲ್‌ಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಬಹುದೆಂದು ಎನ್‌ಸಿಪಿ ನಿರೀಕ್ಷಿಸಿತ್ತು. ಸ್ವತಂತ್ರ ಖಾತೆಯ ರಾಜ್ಯ ಸಚಿವ ಸ್ಥಾನ ನೀಡಲಾಗಿದೆ. ನಾನು ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ, ಆದ್ದರಿಂದ ಇದು ನನಗೆ ಹಿನ್ನಡೆಯಾಗುತ್ತದೆ. ನಾವು ಈ ಬಗ್ಗೆ ಬಿಜೆಪಿ ನಾಯಕತ್ವಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸ್ವಲ್ಪ ದಿನಗಳ ಕಾಲ ಕಾದು ನೋಡುವಂತೆ ಹೇಳಿದ್ದಾರೆ ಎಂದು ಪಟೇಲ್‌ ಹೇಳಿದ್ದಾರೆ.

ರಾಜ್ಯ ಎನ್‌ಸಿಪಿ ಅಧ್ಯಕ್ಷ ಸುನೀಲ್ ತಟ್ಕರೆ ಅವರೊಂದಿಗೆ ದೆಹಲಿಯಲ್ಲಿ ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ ಅಜಿತ್‌ ಪವಾರ್, ಪಟೇಲ್ ಅವರು ಹಿರಿಯ ನಾಯಕರಾಗಿದ್ದು, ಈ ಹಿಂದೆಯೇ ಕ್ಯಾಬಿನೆಟ್‌ ಹುದ್ದೆಯನ್ನು ಅಲಂಕರಿಸಿದ್ದಾರೆ. ಎನ್‌ಸಿಪಿಗೆ ಕ್ಯಾಬಿನೆಟ್ ಸ್ಥಾನ ಸಿಗುತ್ತದೆ ಎಂದು ನಾವು ಕಾಯುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮಹರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯಾಗಿದೆ. ಎನ್‌ಡಿಎ ಮೈತ್ರಿ ಪಕ್ಷ ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. 2022ರ ಜೂನ್ ನಲ್ಲಿ ಶರದ್ ಪವಾರ್ ನೇತೃತ್ವದ ಎನ್ ಸಿಪಿಯಿಂದ ಹೊರ ನಡೆದ ಅಜಿತ್ ಪವಾರ್ ಪಕ್ಷದ 54 ಶಾಸಕರ ಪೈಕಿ 40 ಮಂದಿಯನ್ನು ತಮ್ಮ ಜತೆಗೆ ಕರೆದೊಯ್ದಿದ್ದರು. ಬಳಿಕ ಕಾನೂನು ಹೋರಾಟದಲ್ಲಿ ನೈಜ ಎನ್‌ಸಿಪಿ ಎಂದು ಕೋರ್ಟ್‌ನಿಂದ ಮಾನ್ಯತೆ ಪಡೆದಿದ್ದರು.

ಇದನ್ನು ಓದಿ: ಮೋದಿ ಸಂಪುಟ: ಕುಮಾರಸ್ವಾಮಿ, ಶೋಭಾ ಸೇರಿದಂತೆ ರಾಜ್ಯದ 5 ಮಂದಿಗೆ ಸಚಿವ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...